Advertisement

Category: ಸರಣಿ

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್‌ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ವ್ಯಕ್ತಿತ್ವಗಳ ಮುಖವಾಡ ಕಳಚುವ ಅವಳ ಕಣ್ಣಿನ ಕಥೆ: ರಾಮ್‌ಪ್ರಕಾಶ್‌ ರೈ ಸರಣಿ

ಇಲ್ಲಿ ಕ್ರೈಮ್ ಇದ್ದರೂ, ಅನ್ಯಾಯವಿದ್ದರೂ ಸಾಮಾನ್ಯ ಮಹಿಳೆಯೊಬ್ಬಳು ತನ್ನ ಯುಕ್ತಿಯೊಂದರ ಶಕ್ತಿಯಿಂದ ಆರಕ್ಷಕರು, ಕ್ರಮಬದ್ಧ ತನಿಖೆ ಎಲ್ಲವ ಮೀರಿಸಿ ಬೇಧಿಸುವ ಹಾದಿಯೇ ಬಲು ರೋಮಾಂಚಕ. ಕಥನ ಕಟ್ಟುವಿಕೆಯೂ ಈ ದಾರಿಗೆ ಹಾದಿಗಲ್ಲಿನಂತೆ ಪೂರಕವಾಗಿಯೇ ಇದೆ. ಅದು ಮಾತ್ರವಲ್ಲದೆ, ಪ್ರಿಯಾಳನ್ನು ಸೂಪರ್ ಹ್ಯೂಮನ್ ಎಂದೋ, ಅತಿಮಾನುಷ ಶಕ್ತಿ ಉಳ್ಳವಳು ಎಂಬಂತೆ ಬಿಂಬಿಸದೆ ಸಾಮಾನ್ಯ ಮಹಿಳೆಯೊಬ್ಬಳಂತೆ ತೋರಿಸಿದ್ದು, ಕಥನಕ್ಕೆ ಪ್ರಾಮಾಣಿಕ ಸ್ಪರ್ಶವನ್ನು ನೀಡಿದೆ ಮತ್ತು ಅದು ತೀರಾ ನೈಜವಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಮಂತ್ರುಕ್ಕೆ ಮಾವಿನ್ ಕಾಯೂ ಉದುರ್ತೈತೆ: ಸುಮಾ ಸತೀಶ್ ಸರಣಿ

ಊಟ ಸೇರ್ದಿದ್ರೆ, ಉಸಾರು ತಪ್ಪೀರೆ ದಿಷ್ಟಿ ಮಂತ್ರ ಹಾಕೋರು. ಇದ್ರಾಗೆ ನಾಕು ತರ. ಸೆರಗು ನಿವಾಳ್ಸಿಕಂತಾ ಮಂತ್ರ ಹಾಕೋದು ಒಂದು ರಕಮಾದ್ರೆ, ಇಬೂತಿ(ವಿಭೂತಿ), ಸಕ್ಕರೆ, ಉಪ್ಪು ಮಂತ್ರಿಸಿ ಕೊಡೋದು ಬ್ಯಾರೆ ರಕಮುಗ್ಳು. ಅವ್ರೇ ಬಂದ್ರೆ ಸೆರಗು ನಿವಾಳ್ಸಿ ಮಂತ್ರ ಹಾಕೋರು. ಅವುರ್ ಬದ್ಲಿ ಬ್ಯಾರೆಯೋರ್ ಬಂದ್ರೆ ಉಪ್ಪೋ ಸಕ್ಕರೇನೋ ಮಂತ್ರಿಸಿ ಊಟದಾಗೆ ಕಲ್ಸಿ ಕೊಡೋಕೆ ಹೇಳೋರು. ಇಬೂತಿ ಆದ್ರೆ ಹಣೆ ಮ್ಯಾಗೆ ಹಚ್ಚೋಕೆ‌ ಹೇಳೋರು. ಮಂತ್ರ ಬಿದ್ದ ಮ್ಯಾಕೆ ಊಟ ತಿಂಡಿ ಸರ್ಯಾಗಿ ಸೇರೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಲೇಖಕರ ಅಜ್ಜಿ-ಅಜ್ಜಂದಿರು ಹಾಕುತ್ತಿದ್ದ ಅಂತ್ರ-ಮಂತ್ರಗಳ ಕುರಿತ ಬರಹ ನಿಮ್ಮ ಓದಿಗೆ

Read More

ಜೀವಶಾಸ್ತ್ರದಲ್ಲಿ ಸ್ಕೋರ್ ಮಾಡಿಸಿದ ಕೈಬೆರಳ ತಂತ್ರ!! ಬಸವನಗೌಡ ಹೆಬ್ಬಳಗೆರೆ‌ ಸರಣಿ

ಊರಲ್ಲಿ ಫಲಿತಾಂಶ ಕೇಳಿ ಏನೂ ಹೇಳಲಿಲ್ಲ. “ವಿಜ್ಞಾನವೆಂದರೆ ಕಷ್ಟ; ಅಂತಾದ್ರಲ್ಲಿ ನೀನು ಇಷ್ಟಾದ್ರೂ ತೆಗೆದೆಯಲ್ಲಾ ಅಂತಾ ಖುಷಿ ಪಟ್ಟರು”! ಅವರು ನನ್ನ ಫಲಿತಾಂಶದಲ್ಲಿ ಬೇಸರ ಪಟ್ಟುಕೊಳ್ಳದಿರಲು ಇನ್ನೊಂದು ಕಾರಣವಿದೆ. ಅವರಿಗೆ ನನ್ನ ಹಾಸ್ಟೆಲ್ ಹುಡುಗರ ಫಲಿತಾಂಶ ಹೇಳಿದ್ದು. ನಮ್ಮ ಹಾಸ್ಟೆಲ್ಲಿನಲ್ಲಿ ಇದ್ದ ಸೆಕಂಡ್ ಪಿಯುಸಿಯ 24 ವಿದ್ಯಾರ್ಥಿಗಳ ಪೈಕಿ ಪಾಸ್ ಆಗಿದ್ದು ಇಬ್ಬರೇ!! ಅದು ನಾನು ಮತ್ತು ಲಿಂಗರಾಜ ಮಾತ್ರ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಉಸಿರೇ….. ಉಸಿರು……: ಸುಮಾವೀಣಾ ಸರಣಿ

‘ಉಸಿರಿ’ನ ಹೇಳಿಕೆ ಇಲ್ಲಿಗೆ ಮುಗಿಯಲಿಲ್ಲ, ಇನ್ನೂ ಇದೆ. ‘ಉಸಿರು’ ಈ ಪದದ ಅಕ್ಷರಗಳನ್ನು ಕೊಂಚ ಅದಲು-ಬದಲು ಮಾಡಿದರೆ‘ಉರು(ಸು)ಸ್’ ಆಗುತ್ತದೆ. ಅಂದರೆ ಮುಸಲ್ಮಾನರ ಧಾರ್ಮಿಕ ಆಚರಣೆ ಎಂದಾಗುತ್ತದೆ. ಇನ್ನೂ ಉಸಿರಿನ ಅಕ್ಷರಗಳನ್ನು ಅದಲು ಬದಲು ಮಾಡುತ್ತೇವೆ ಎಂದರೆ ‘ಉರಿಸು’ ಎಂದಾಗುತ್ತದೆ. “ಮನೆಮನೆಯಲ್ಲಿ ದೀಪ ಉರಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ ತಂದೆ ಮಗುವ ತಬ್ಬಿದಾಕೆ ಸ್ತ್ರೀ ಎಂದರೆ ಅಷ್ಟೇ ಸಾಕೆ?’’ ಎಂಬ ಜಿ.ಎಸ್. ಎಸ್ ಅವರ ಕವನದ ಸಾಲುಗಳು ನೆನಪಾಗದೆ ಇರುತ್ತವೆಯೇ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹನ್ನೊಂದನೆಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ