Advertisement

Category: ಸರಣಿ

ಅನ್ಯಭಾಷಾ ಪದಯಾನಾ: ಸುಮಾವೀಣಾ ಸರಣಿ

ಅನ್ಯಾಭಾಷಾ ಸಂಸರ್ಗದಿಂದ ಕನ್ನಡ ಲಾಗಾಯಿತ್ತಿನಿಂದಲೂ ಅನೇಕ ಶಬ್ದಗಳನ್ನು ಕೊಳ್ಳುತ್ತಲೇ ಬಂದಿದೆ. ಆರ್ಯರು, ಗ್ರೀಕರು, ರೋಮನ್ನರು, ಪಾರಸಿಕರು, ಯವನ, ಪೋರ್ಚುಗಿಸರು, ಫ್ರೆಂಚರು, ಇಂಗ್ಲಿಷರು ಮೊದಲಾದವರ ಸಂಪರ್ಕ ಕನ್ನಡಿಗರಿಗಿತ್ತು. ಜೊತೆಗೆ ಅಕ್ಕಪಕ್ಕದ ದ್ರಾವಿಡ ಭಾಷೆಗಳು ಮತ್ತು ಮರಾಠಿ ಮೊದಲಾದ ಭಾಷೆಗಳು ವ್ಯಾಪಾರ ಸಂಬಂಧಗಳ ಮೂಲಕ ಕನ್ನಡದ ಮೇಲೆ ಪ್ರಭಾವ ಬೀರಿದ ಕಾರಣ ಕನ್ನಡ ಅನೇಕ ಪದಗಳನ್ನು ಅನಾಯಾಸವಾಗಿ ಸ್ವೀಕರಿಸಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಎಂಟನೆಯ ಬರಹ

Read More

“ಡೀಲ್‌” ಬೆನ್ನಟ್ಟಿದ ಕುರಿಗಳು ಸಾರ್‌ ಕುರಿಗಳು: ಗುರುಪ್ರಸಾದ ಕುರ್ತಕೋಟಿ ಸರಣಿ

ಅಂತೂ ಅಂಗಡಿಯ ಬಾಗಿಲು ತೆರೆದುಕೊಂಡಿತು. ಸ್ವರ್ಗದ ಬಾಗಿಲೆ ತೆರೆಯಿತೋ ಏನೋ ಎಂಬಂತೆ ಜನರ ಕಣ್ಣುಗಳು ಅರಳಿದವು! ಸರ ಸರ ಅಂತ ಚಟುವಟಿಕೆಗಳು ಗರಿಗೆದರಿದವು. ಕುರಿ ದೊಡ್ಡಿ ಬಾಗಿಲು ತೆಗೆದಾಗ ಹೇಗೆ ಕುರಿಗಳು ನುಗ್ಗುತ್ತವೋ ಹಾಗೆಯೇ ಎಲ್ಲರೂ ಒಳ ನುಗ್ಗಿದರು. ನಾವೂ ಬ್ಯಾ ಅನ್ನುತ್ತ ನುಗ್ಗೆ ಬಿಟ್ಟೆವು. ಎಲ್ಲಿ ನೋಡಲಿ ಎಲ್ಲಿ ಬಿಡಲಿ ಎಂಬಂತಹ ಪರಿಸ್ಥಿತಿ. ಕೆಲವೇ ನಿಮಿಷಗಳಲ್ಲಿ ಹಲವಾರು ಜನರ ಕೈಯಲ್ಲಿ ಏನೇನೋ ವಸ್ತುಗಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತೊಂಭತ್ತನೆಯ ಬರಹ

Read More

ಪೆಟ್ಟಿಗೆ ಅಂಗ್ಡೀಲಿ ಪೈಸಾ ಲೆಕ್ಕ: ಸುಮಾ ಸತೀಶ್ ಸರಣಿ

ಮಾರೋನು ವಾರಕ್ಕೊಂದು ದಪ ಇಸ್ಕೂಲ್ ತಾವ ಬತ್ತಿದ್ದ. ಅದು ಎಲ್ಡು ತರ ಇರ್ತಿತ್ತು. ಒಂದು ಈಗ್ಲೂ ಸಿಗ್ತೈತೆ. ಅದೇ ಮೊಳಕೈ ಉದ್ದುದ್ದು ಕಡ್ಡೀಗೆ ರೋಜಾ(ಗುಲಾಬಿ) ಬಣ್ಣುದ್ದು ಹತ್ತಿ ತರ ಸುತ್ತಿರ್ತಾರಲ್ಲ. ಕೈಗೂ ಬಾಯ್ಗೂ ಅಂಟ್ರುಸ್ತೈತಲ್ಲ ಅದು. ಇನ್ನೊಂದು ರಬ್ಬ್ರು(ರಬ್ಬರ್) ತರ ನಾರಿನಂಗೆ ಇರ್ತಿತ್ತು. ಎಳುದ್ರೆ ಸಾಗ್ತಾನೆ(ಹಿಗ್ಗುವ) ಇರಾ ದಾರ. ಅದುನ್ನ ಕೈಗೆ ವಾಚೋ, ಇಮಾನವೋ, ಸೈಕಲ್ಲೋ, ಕಾರೋ ಮಾಡಿ ಹಾಕೋನು. ಬೇಸಾಗಿ ಮಾಡ್ತಿದ್ದ. ಕಾಸು ಕಮ್ಮಿ ಇದ್ರೆ ಬೆಟ್ಟಿಗೆ ಉಂಗುರ ಮಾತ್ರ ಸಿಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಗಣಿತ ಟ್ಯೂಷನ್ನಿನ ಹಾಸ್ಯ ಪ್ರಸಂಗಗಳು… ಬಸವನಗೌಡ ಹೆಬ್ಬಳಗೆರೆ ಸರಣಿ

ಸುಧಾಕರನ ಅಣ್ಣನ ದಿನಚರಿಯೇ ವಿಶೇಷ ಎನಿಸುತ್ತಿತ್ತು. ಅವರು ಮಿತ ಭಾಷಿ, ಏಕಾಂಗಿಯಾಗಿರ್ತಾ ಇದ್ರು. ರಾತ್ರಿ 10 ಕ್ಕೆ ಓದಲು ಕುಳಿತರೆ ಬೆಳಗಿನ ಜಾವ 5 ಗಂಟೆಯವರೆಗೂ ಓದೋದು. ಮತ್ತೆ 5 ಕ್ಕೆ ಮಲಗಿ 10 ಗಂಟೆಗೆ ಎದ್ದು ಕಾಲೇಜಿಗೆ ಹೋಗೋರು. ಇದೇ ರೀತಿಯಾಗಿ ನಮ್ಮ ಹಾಸ್ಟೆಲ್ಲಿನ ಎಂಜಿನಿಯರಿಂಗ್ ಹುಡುಗರು ಓದ್ತಾ ಇದ್ರು. ಈ ರೀತಿ ರಾತ್ರಿಯಿಡೀ ಓದೋಕೆ ‘ನೈಟ್ ಔಟ್ ಮಾಡೋದು’ ಎಂಬ ಪದ ಬಳಸ್ತಾ ಇದ್ರು. ಹಾಸ್ಟೆಲ್ಲಿನ ಮಧ್ಯಭಾಗದಲ್ಲಿದ್ದ ಫೀಲ್ಡಿನಲ್ಲಿ ಸ್ಟಡಿ ಚೇರ್ ಹಾಕ್ಕೊಂಡು ಕುಳಿತು ಓದೋಕೆ ಶುರು ಮಾಡ್ತಿದ್ರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕನಸು ಬಿತ್ತಿ ನನಸಾಗಿಸಿದ ಕುಸುಮಕ್ಕ: ರಂಜಾನ್‌ ದರ್ಗಾ ಸರಣಿ

ಅವರು ಉತ್ತರ ಕನ್ನಡದ ಎಲ್ಲೆಂದರಲ್ಲಿ ಹೋರಾಟದ ಮುಂಚೂಣಿಯಲ್ಲಿರುತ್ತಿದ್ದರು. ಒಂದು ಕಡೆ ಮಹಿಳೆಯರ ಸಂಘಟನೆ. ಇನ್ನೊಂದು ಕಡೆ ಸಾಕ್ಷರತಾ ಸಭೆ, ಮತ್ತೊಂದು ಕಡೆ ದೇಶೀಯ ಔಷಧಿಗಳ ಮಹತ್ವದ ಕುರಿತು ಮಾತನಾಡುವುದು, ಇನ್ನೊಂದು ಕಡೆ ಸರಳ ಜೀವನ ವಿಧಾನದ ಬಗ್ಗೆ ತಿಳಿ ಹೇಳುವುದು. ಹೀಗೆ ನಮ್ಮ ಕುಸುಮಕ್ಕನ ಅವತಾರಗಳು ಬಹಳವಾಗಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 91ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ