Advertisement

Category: ಸರಣಿ

ಗೃಹಪ್ರವೇಶದ ಸೀನುಗಳು….: ಎಚ್. ಗೋಪಾಲಕೃಷ್ಣ ಸರಣಿ

ಬೆಳಕಿಗೆ ಅಂತ ಲಾಟೀನು, ಮೊಂಬತ್ತಿ ಬೆಂಕಿ ಪೆಟ್ಟಿಗೆ ತಂದಿಟ್ಟು ಪೆಟ್ರೋಮಾಕ್ಸ್‌ಗೆ ಹೊರಟೆ. ಅದು ಮೂರುನಾಲ್ಕು ಕಿಮೀ ದೂರದಲ್ಲಿ ನೋಡಿದ್ದೆ. ಆದರೆ ಅದನ್ನ ಯಾವತ್ತೂ ಹಚ್ಚಿ ಉಪಯೋಗಿಸಿರಲಿಲ್ಲ. ಅಂಗಡಿಗೆ ಹೋಗಿ ನಾಲ್ಕು ಪೆಟ್ರೋಮಾಕ್ಸ್ ಬಾಡಿಗೆ ತಗೊಂಡೆ. ಹೇಗೆ ಹಚ್ಚೋದು ಅಂತ ಅವನು ಅಂದರೆ ಅಂಗಡಿ ಓನರ್ ತೋರಿಸಿಕೊಟ್ಟ. ನಾಲ್ಕೂ ತಗೊಂಡು ಎರಡು ಶೌರಿ ನಮ್ಮ ವಾಚ್ಮನ್ನು, ಎರಡು ಸೈಕಲ್ ಹ್ಯಾಂಡಲ್‌ಗೆ ನೇತು ಹಾಕಿ ಮನೆ ಸೇರಿದೇವಾ? ಅವತ್ತು ರಾತ್ರಿ ಎಂಟಕ್ಕೆ ಎಲ್ಲರೂ ಸೇರಿ ನಮ್ಮ ಕಲಿತ ವಿದ್ಯೆ ಎಲ್ಲವನ್ನೂ ಖರ್ಚು ಮಾಡಿದರೂ ಒಂದೇ ಒಂದು ಪೆಟ್ರೋಮಾಕ್ಸ್ ಹತ್ತಲಿಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಶ್ರಾವಣ ಸಂಜೆಯ ಮಳೆಯಂಥ ಪ್ರೀತಿ:‌ “ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

ಪರೀಕ್ಷೆಯ ವಿಚಾರ ಮಾತಾಡುವಷ್ಟರಲ್ಲಿ ಅವರ ಸಂಬಂಧಿ ಪ್ರತ್ಯಕ್ಷವಾಗಿದ್ದ. ಗೇಟಿನಲ್ಲೆ ನಮ್ಮಿಬ್ಬರನ್ನು ನೋಡಿರಬೇಕು. ಈಗಾಗಲೆ ಪರಿಚಯವಿದ್ದುದರಿಂದ ನನ್ನನ್ನು ಮಾತಾಡಿಸಿದ. ಮಾತಾಡಿಸಿ ‘ನೀವೇಕೆ ಬಂದಿದ್ದೀರಿ’ ಅಂದ. ನಾನು ಅದೆ ‘ಕ್ಯಾಸ್ಟ್ ಇನ್ಕಮ್’ ನೆಪ ಹೇಳಿದೆ ನನ್ನ ಸ್ನೇಹಿತರು ಬಂದಿದ್ದಾರೆ ಅವರನ್ನು ಮಾತಾಡಿಸುವ ಸಲುವಾಗಿ ಬಂದಿದ್ದೆ’ ಅಂದೆ ಅನುಮಾನ ಪಡುವ ಯಾವ ಘಟನೆಯೂ ನಮ್ಮಿಬ್ಬರ ವಿಷಯದಲ್ಲಿ ನಡೆದಿರಲಿಲ್ಲ. ನನಗೆ ಒಳ್ಳೆಯವನೆಂಬ ಪಟ್ಟ ಊರಲ್ಲಿತ್ತು. ಹಾಗಾಗಿ ಮಾತಾಡಿಸಿದವಳು ಇವಳ ಪರೀಕ್ಷೆ ಮುಗಿದ ಮೇಲೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇನೆ ಅಂದ. ನನಗೆ ಏನು ಹೇಳಲು ಮಾತೆ ಇರಲಿಲ್ಲ.
“ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಕದರಪ್ಪನ ಗುಡೀ‌ ಮುಂದ್ಲ ಕಲ್ಲು: ಸುಮಾ ಸತೀಶ್ ಸರಣಿ

ಅವ್ನೂ ಬಂದ. ಚೆಂದಾಗಿ ಕಲ್ಲು ತೊಳುಸ್ದ‌. ಅತ್ಲಾಗೆ ತಿರುಗ್ದ, ಇತ್ಲಾಗೆ ಬಗ್ಗಿದ, ತಲೆ ಕೆರ್ಕಂಡ. ಯೋನೂ ತಿಳೀವಲ್ದು. ಅಂಗಂತ ಯೋಳೀರೆ ಜನ ಏನ್ ಅನ್ಕಂಬಾಕಿಲ್ಲಾ. ನನ್ ಮರ್ವಾದಿ ಮಣ್ಣಾಗಾಕಿಲ್ವೇ ಅಂದಿದ್ದೇ, ಬ್ಯಾರೇನೇ ಯೋಳ್ದ. ಇದು ನರಮನುಸ್ಯರ ಕೈಲಿ ಓದಾಕಾಗಾಕಿಲ್ಲ. ದೇವನಾಗರೀ ಲಿಪಿ ಅಂಬ್ತಾರೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ನಿಮ್ಮ ಓದಿಗೆ

Read More

ಖಾದ್ರಿಗಳು ಮತ್ತು ಅವರ ಬದುಕು!: ದರ್ಶನ್‌ ಜಯಣ್ಣ ಸರಣಿ

“ನಮ್ಮ ಮನೆಯಲ್ಲಿ ನಾನೇ ಚಿಕ್ಕವನು ಮತ್ತು ಓದಿದ್ದು ನಾನೊಬ್ಬನೇ, ನನ್ನೆಲ್ಲಾ ಒಡಹುಟ್ಟಿದವರು ತೀರಿಹೋಗಿದ್ದಾರೆ. ಹರೆಯದರಲ್ಲೇ ಇಲ್ಲಿಗೆ ಬಂದದ್ದರಿಂದ ಯಾರೊಟ್ಟಿಗೂ ಅಂತಹಾ ಗೆಳೆತನವೂ ಉಳಿದಿಲ್ಲ. ನಮಗೆ ಮಕ್ಕಳಿಲ್ಲವಾದುದರಿಂದ ನನ್ನ ಹೆಂಡತಿಗೂ ಇಲ್ಲಿನ ಜೀವನ, ಅನಾಮಿಕತೆ, ಬೇಡದ ವಿಷಯಗಳಲ್ಲಿ ತಲೆಹಾಕುವ ಜನಗಳ ಕಿರಿ ಕಿರಿ ಯಾವುದೂ ಇಲ್ಲ ಮತ್ತು ಬೇಡವಾಗಿದೆ. ಅವಳಿಗೂ ಅಲ್ಲಿ ಹೇಳಿಕೊಳ್ಳುವ ಬಂಧು- ಬಂಧ ಎರಡೂ ಇಲ್ಲ. ಇಲ್ಲೂ ಇಲ್ಲ ಅನ್ನಿ, ಆದರೆ ನಾವಿಲ್ಲಿಗೆ ಒಗ್ಗಿ ಹೋಗಿದ್ದೇವೆ! ನಾನು ಬದುಕಿರುವವರೆಗೂ ನನ್ನ ವೀಸಾದಲ್ಲಿ ಅವಳಿಲ್ಲಿ ಇರಬಹುದು. ಆಮೇಲಿನದ್ದು ‘ಅಲ್ಲಾಹುವಿನ’ ಇಚ್ಛೆ. ಸತ್ತರೇ ಅವನದ್ದೇ ಮಣ್ಣಿನಲ್ಲಿ ಹೂಳುತಾರೆ. ಮತ್ತೇನು ಬೇಕು?”
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ