Advertisement

Category: ಸರಣಿ

ಸವಿಯ ಬನ್ನಿ ಮಲೆನಾಡ ಊಟವ…: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮನೆಯ ಬೇಸಿಗೆಯ ಹಿತ್ತಲಲ್ಲಿ ಆಯಿ, ಹೂ ಕೋಸು, ಗಡ್ಡೆ ಕೋಸು ಮೂಲಂಗಿ, ಬೀಟ್ರೂಟ್‌ಗಳನ್ನು ಕೂಡಾ ಸಮೃದ್ಧವಾಗಿ ಬೆಳೆಸುತ್ತಿದ್ದಳು. ಮುಂದಿನ ಮೂರು ತಿಂಗಳು ನಾವೆಲ್ಲ ಯಥೇಚ್ಛವಾಗಿ ತರಕಾರಿಯನ್ನು ಉಪಯೋಗಿಸಬಹುದಾಗಿತ್ತು. ಎಲ್ಲಕ್ಕಿಂತ ವಿಶೇಷವಾಗಿ ಮೊಗೇ ಕಾಯಿ ಬೆಳೆಸುವುದು ಬೇಸಿಗೆಯ ಹಿತ್ತಲಿನ ವಿಶೇಷ. ಈ ಮೊಗೆ ಕಾಯಿ (ಬಣ್ಣದ ಸೌತೆ ಕಾಯಿ) ಯೆಂಬುದು ಮಲೆನಾಡಿಗರ ಆಪದ್ಬಾಂಧವನಿದ್ದಂತೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಒಂಭತ್ತನೆಯ ಕಂತು

Read More

ಬಸ್ ಒಡೆಯನೆಂದು ನಂಬಿ, ನಾನು ಯಾಮಾರಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ಅಂದು ಪ್ರವಾಸಕ್ಕೆ ಹೊರಟಿದ್ದೆ. ನನಗಾಗಿ ಹುಡುಗರು ಕಾಯುತ್ತಿದ್ದರು. ಪದೇ ಪದೇ ಕಾಲ್ ಬೇರೆ ಮಾಡುತ್ತಿದ್ದರು. ಹೋಗುವ ಧಾವಂತ ಬೇರೆ. ಆಸಾಮಿ ಬಿಡಲೇ ಇಲ್ಲ. ಅವನ ಮಾತನ್ನು ನಿಜವೆಂದು ನಾನು ಅವನಿಗೆ ಮತ್ತೆ 500 ರುಪಾಯಿಗಳನ್ನು ಕೊಟ್ಟೆ. ಕೊಟ್ಟಾಕ್ಷಣ “ನಾಳೇನೇ ನಿಮ್ಮ ಖಾತೆಗೆ ಹಾಕ್ತೇನೆ” ಎಂದ. ನಾನು ನನ್ನ ಮೊಬೈಲ್ ಸಂಖ್ಯೆಯನ್ನೂ ಕೊಟ್ಟೆ. ಕೊಟ್ಟ ತಕ್ಷಣ ನಾನು ಕಾಯುತ್ತಿದ್ದ ಬಸ್ ಬಂತು. ಅವನು ಲಗುಬಗೆಯಿಂದಲೇ ನನ್ನನ್ನು “ಹೋಗಿ ಹೋಗಿ” ಎಂದು ಬಸ್ ಹತ್ತಿಸಿದ. ಮಾರನೇ ದಿನ ಅವನು ಕಾಲ್ ಮಾಡುತ್ತಾನೆಂದು ಕಾದೆ. ಮಾಡಲಿಲ್ಲ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಅನುರೂಪ ವಸ್ತುಗಳ ಸಂಚಯನ ಎಲೆ ಅಡಿಕೆ ಚೀಲ: ಸುಮಾವೀಣಾ ಸರಣಿ

ನಮ್ಮ ಮೊಬೈಲ್‌ಗೆ ಈಗ ಫಿಂಗರ್ ಪ್ರಿಂಟ್ಸ್ ಲಾಕ್ ಇದೆಯಲ್ಲಾ ಹಾಗೆ ಅಜ್ಜಿ ತನ್ನ ಚೀಲಕ್ಕೆ ಹಾಕುತ್ತಿದ್ದ ನ್ನಾಟಿ ನ್ನಾಟ್ ಅನ್ನು ಯಾರಿಗು ಬಿಚ್ಚಲಾಗುತ್ತಿರಲಿಲ್ಲ. ಮುರಿದ ಆಭರಣದ ಚೂರುಗಳು ಬೆಳ್ಳಿಯ ಚೂರುಗಳನ್ನು ಚಿಕ್ಕ ಪ್ಲಾಸ್ಟಿಕ್‌ನಲ್ಲಿ ಹಾಕಿ ಚೀಲದ ಒಳ ಪದರದ ಒಳ ಪದರದಲ್ಲಿ ಇಡುವುದು, ಅವರ ಇವರ ತೋಟಕ್ಕೆ ಹೋದಾಗ ಅಪರೂಪದ ತರಕಾರಿ ಬೀಜ ಸಿಕ್ಕರೆ ಅದನ್ನು ಅದರಲ್ಲೆ ಇಡುವುದು, ಅಲ್ಲೇ ಬಿಡಿಸಿ ಅಲ್ಲೇ ಮುಡಿದುಕೊಳ್ಳಲು ಹೂ ಕಟ್ಟುವ ದಾರವೂ ಅಲ್ಲೇ ಇರುತ್ತಿತ್ತು. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದ, ಗಂಧ ಅದರಲ್ಲೇ ಇಡುವುದು. ತಲೆಸುತ್ತುವಿಕೆಗೆ, ಅಜೀರ್ಣಕ್ಕೆ, ಬಾಯಿ ವಾಸನೆ ಬರದಂತೆ ತಡೆಯಲು, ಹಲ್ಲು ನೋವಿಗೆ, ಶೀತಕ್ಕೆ ನಶ್ಯ ಎಲ್ಲಾ ಅದರಲ್ಲೇ ಇರುತ್ತಿತ್ತು.ಸುಮಾವೀಣಾ ಬರೆಯುವ “ಮಾತು ಖ್ಯಾತೆ” ಸರಣಿ ಸರಣಿ

Read More

ಟ್ರಿನಿಡಾಡ್ ಎಂಡ್ ಟೊಬೇಗೊ ಕವಿ ಡಾನಿಯೇಲ್ ಬೂಡೂ-ಫೋರ್ಚುನೆ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಬೂಡೂ-ಫೋರ್ಚುನೆ ಅವರ ಸಾಲುಗಳು ಸರಳತೆ ಮತ್ತು ಕ್ರೂರತೆಗೆ ಸಮಾನವಾಗಿ ಆದ್ಯತೆ ನೀಡುತ್ತದೆ, ಮೀನುಗಾರರ ಅರ್ಧ ಮುಳುಗಿದ ಲೋಕಗಳನ್ನು, ಸಮಾಧಿ ಮಾಡಿದ ಮೂಳೆಗಳಲ್ಲಿ ಕಲಕುವ ಭರವಸೆಗಳನ್ನು, ಹೆಣ್ಣುಮಕ್ಕಳನ್ನು ಪ್ರೀತಿಸುವ ತಾಯಂದಿರ ಮತ್ತು ಎಲ್ಲಾ ರೀತಿಯ ತಿಳಿಯಲಾಗದ, ನಿಗೂಢ ಆತ್ಮಗಳನ್ನು ಹಿಡಿದಿಟ್ಟುಕೊಳ್ಳುತ್ತವೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಟ್ರಿನಿಡಾಡ್ ಎಂಡ್ ಟೊಬೇಗೊ (Trinidad and Tobago) ದೇಶದ ಯುವ ಕವಿ ಡಾನಿಯೇಲ್ ಬೂಡೂ-ಫೋರ್ಚುನೆ-ರವರ (Danielle Boodoo-Fortuné, 1986) ಕಾವ್ಯದ ಕುರಿತ ಬರಹ

Read More

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ