Advertisement

Category: ಸರಣಿ

ಉದ್ದಕೊಕ್ಕಿನ ಸೂರಕ್ಕಿ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಉದ್ದಕೊಕ್ಕಿನ ಸೂರಕ್ಕಿಗಳು ಉದುರೆಲೆ, ಕುರುಚಲು ಕಾಡು, ಎಸ್ಟೇಟು, ಮನೆಗಳ ಸುತ್ತಮುತ್ತಲು ಬೆಳೆದ ಹೂದೋಟಗಳಲ್ಲಿ ವಾಸ ಮಾಡುತ್ತವೆ. ಉದ್ದಕೊಕ್ಕಿನ ಸೂರಕ್ಕಿಗಳು ನೆಕ್ಟರಿನೈಡೆ ಕುಟುಂಬಕ್ಕೆ ಸೇರಿದ ಇತರ ಸೂರಕ್ಕಿಗಳಂತೆ ಮಕರಂದಪ್ರಿಯ ಹಕ್ಕಿಗಳು. ಕಾಡಿನಲ್ಲಾಗಲೀ, ಎಸ್ಟೇಟು-ಹೂದೋಟವೇ ಆಗಲೀ, ಮರಗಿಡಗಳಲ್ಲಿ ಹೂವರಳಿದರೆ ಸಾಕು, ಮಕರಂದಕ್ಕಾಗಿ ಎಲ್ಲಿದ್ದರೂ ಹಾಜರು! ಮಕರಂದವನ್ನು ಹೀರುವುದಕ್ಕಾಗಿಯೇ ಹೇಳಿಸಿ ಮಾಡಿಸಿದಂತಿರುವ, ಬಾಗಿದ ಉದ್ದವಾದ ಕೊಕ್ಕು ಮತ್ತು ಕೊಳವೆಯಂತಹ ನಾಲಿಗೆ.
ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಉದ್ದಕೊಕ್ಕಿನ ಸೂರಕ್ಕಿಗಳ ಕುರಿತ ಬರಹ ಇಲ್ಲಿದೆ

Read More

ಕಲೆ ಮತ್ತು ಭ್ರಾಮಕ ವಾಸ್ತವ: ಚಿತ್ರಾ ವೆಂಕಟರಾಜು ಸರಣಿ

ಪ್ರತಿ ಕಲಾಭ್ಯಾಸಿಗೂ ತಾನು ಯಾವಾಗ ರಂಗದ ಮೇಲೆ ಪ್ರದರ್ಶನ ನೀಡುತ್ತೇನೋ ಎನ್ನುವ ಕಾತರ ಇರುತ್ತದೆ. ಇರಬೇಕು ಕೂಡಾ‌. ಒಮ್ಮೆ ನಾವು ರಂಗದಲ್ಲಿ ಪೂರ್ಣಪ್ರಮಾಣದ ಪ್ರದರ್ಶನ ನೀಡಿದೆವೋ ನಮ್ಮೊಳಗಿನ ಆ ಚಡಪಡಿಕೆ ಆ ಕ್ಷಣಕ್ಕೆ ಥಟ್ಟನೆ ಕಡಿಮೆ ಆಗುತ್ತದೆ. ನಮ್ಮೊಳಗೆ ಹುದುಗಿದ್ದ ಅಪಾರವಾದ ಆಸೆ, ಕಾವನ್ನು ಆ ಒಂದು ಪ್ರದರ್ಶನ ತಣಿಸಿರುತ್ತದೆ. ಮತ್ತೆ ನಮ್ಮನ್ನು ನಾವು ಅಭ್ಯಾಸಕ್ಕೆ ನಮ್ಮ ಮನಸ್ಸು ದೇಹವನ್ನು ಹುರಿಗೊಳಿಸಿಕೊಳ್ಳಲು ಕೆಲವು ಸಮಯವೇ ಬೇಕಾಗುತ್ತದೆ. ಹೀಗೆ ಒಂದು ಪ್ರದರ್ಶನ ದ ಹಿಂದೆ ಮತ್ತು ಪ್ರದರ್ಶನ ನಂತರ ಒಬ್ಬ ಕಲಾವಿದನ ಮನಸಿನಲ್ಲಿ ಇಷ್ಟೆಲ್ಲಾ ಕೆಲಸಗಳು ನಡೆದಿರುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಸಾಧನೆಯೇ ಮಾತಾಗಬೇಕು!: ಬಸವನಗೌಡ ಹೆಬ್ಬಳಗೆರೆ ಸರಣಿ

ಕೆಲವೊಂದರಲ್ಲಿ ಇಡೀ ಕರ್ನಾಟಕಕ್ಕೆ ನಮ್ಮ ಕಂಪೆನಿಯಲ್ಲಿ ಟಾಪರ್ ಆಗೋವಷ್ಟು ಸೇಲ್ ಮಾಡಿದ್ದೆ. ಆದರೆ ಹಲ್ಲು ನೋವಿಗೆ ಬಳಸುವ ಟೂಥ್ ಪೇಸ್ಟ್ ಒಂದರ ಸೇಲ್‌ನಲ್ಲಿ ತುಂಬಾ ಕಮ್ಮಿ ಸಾಧನೆ ಮಾಡಿದ್ದೆ. ಇದುವರೆಗೂ ಹೊಗಳಿದವರು ಈ ವಿಷಯ ಬಂದಾಗ ನನ್ನನ್ನು ಹಿಗ್ಗಾ ಮುಗ್ಗಾ ಬಯ್ದರು. ನಾನು ತುಂಬಾ ಸೆನ್ಸಿಟೀವ್ ಆಗಿ ಇದ್ದುದ್ದರಿಂದ ಅಂದು ಅವರು ನೀಡಿದ್ದ ಸುಗ್ರಾಸ ಭೋಜನವನ್ನು ಸೇವಿಸಲು ಮನಸ್ಸಾಗಲಿಲ್ಲ… ಆಗ ಬೇರೆ ಮೆಡಿಕಲ್ ರೆಪ್‌ಗಳು ಬಂದು ಇಲ್ಲೆಲ್ಲಾ ಬಯ್ಯೋದು, ಬಯ್ಸಿಕೊಳ್ಳೋದು ಕಾಮನ್. ಇವುಗಳ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂದಾಗ ನನಗೆ ಮನಸ್ಸಿಗೆ ಸಮಾಧಾನ ಎನ್ನಿಸಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಎರಡು ಮನೆಗಳ ನಡುವೆ…: ಎಚ್. ಗೋಪಾಲಕೃಷ್ಣ ಸರಣಿ

ಗೋಪಣ್ಣ ಮಾರನೇ ದಿವಸ ಫೋನಿನ ಮಾತುಕತೆ ಮುಂದುವರೆಸಲು ರೆಡಿ ಇರಲಿಲ್ಲ. ಅದರಿಂದ ಅವನು ನನ್ನ ಕಡೆ ಒಂದು ನೋಟ ಬಿಟ್ಟ ಅಂದರೆ ದೃಷ್ಟಿ ಹರಿಸಿದ. ಅದರಲ್ಲಿ ದೈನ್ಯತೆ ಇತ್ತು. ಅದರಲ್ಲಿ ಒಂದು ರೀತಿಯ ಕಮಾಂಡಿಂಗ್ ಸಹ ಇತ್ತು. ಎರಡೂ ಎರಡು ವಿಭಿನ್ನ ದೃಷ್ಟಿಯವು ಅದು ಹೇಗೆ ನಿಮಗೆ ಒಂದೇ ನೋಟದಲ್ಲಿ ಎರಡೂ ಕಂಡವು ಅಂತ ನೀವು ವಿಮರ್ಶಕರ ಹಾಗೆ ಕೇಳುತ್ತೀರಿ ಎಂದು ನನಗೆ ಗೊತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೧ನೇ ಬರಹ ನಿಮ್ಮ ಓದಿಗೆ

Read More

ಸಮೃದ್ಧ ಕಾಡಿನ ರೋಚಕ ಕಥೆಗಳು-೧೧: ರೂಪಾ ರವೀಂದ್ರ ಜೋಶಿ ಸರಣಿ

ಆದರೆ ಎಲ್ಲ ವೇಳೆ ಒಂದೇ ಥೆರನಾಗಿರದು. ಸತತವಾಗಿ ನಡೆಯುತ್ತಿದ್ದ ಅವರ ಕಳ್ಳ ದಂಧೆ ಮಟ್ಟ ಹಾಕಲು ಅದೆಷ್ಟೋ ದಿನಗಳಿಂದ ಅಧಿಕಾರಿಗಳು ಹೊಂಚು ಹಾಕುತ್ತಲೇ ಇದ್ದರೆನ್ನಿಸುತ್ತದೆ. ಒಮ್ಮೆ ಪೋಲೀಸರು ಅವರೆಲ್ಲರನ್ನೂ ಕೆಲಸದ ಜಾಗದಲ್ಲೇ ಅಡ್ಡ ಹಾಕಿದರು. ನಮ್ಮ ಆಳಿನ ಕಿರಿಯ ಮಗನೂ ಅದರೊಳಗಿದ್ದನಂತೆ. ಹೇಗೋ ಕಣ್ಣು ತಪ್ಪಿಸಿಕೊಂಡು ಓಡಿ ಬಂದು ಮನೆಯಲ್ಲಿ ಅಡಗಿದ್ದ. ಅವನಿಗೆ ಕೆಲಸ ಕೊಟ್ಟ ಹೆಗಡೆಯವರು ಇಲಾಖೆಯವರಿಗೆ ದುಡ್ಡು ತಿನ್ನಿಸಿ, ಅವನೇ ಆ ಕಳ್ಳ ನಾಟಾ ಕಡಿಯುವವರಿಗೆ ಮುಖ್ಯಸ್ಥ ಎಂದು ಬಿಂಬಿಸಿ, ಜಾರಿಕೊಂಡರು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಇಪ್ಪತ್ತನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ