Advertisement

Category: ಸರಣಿ

ಬೇಸಾಯ ಬದಲಾದದ್ದು: ಸುಮಾ ಸತೀಶ್ ಸರಣಿ

ಇದೊಂದು ಕಾರು ಎಲ್ಲಾರ ಕಣ್ಗೂ ಬಿತ್ತು. ಪುಸುಕ್ ಅಂತ ಕಾರು ಕೇಳೋಕೆ ಶುರು ಆತು. ದಾಕ್ಷಿಣ್ಯ ಬ್ಯಾರೆ.‌ ಕೊಡದಿದ್ರೆ ಕೆಲ್ಸ‌ ಮಾಡದೆ ಸತಾಯಿಸ್ತಾರೆ. ಒಳ್ಳೆ ಪೀಕಲಾಟ ಆಯ್ತು. ಥತ್ ತೇರಿಕೆ ಯಾಕಾನಾ ಕಾರು ಅಂತ ಆಸೆ ಬಿದ್ನೋ… ಯಾಕೆ ಬೇಕಿತ್ತು ಈ ಉಸಾಬರಿ ಅಂತ ಬ್ಯಾಸ್ರ ಬಂದೋತು ಅಪ್ಪಂಗೆ. ಕಾರೂ ಪುಗ್ಸಟ್ಟೆ ಕೊಡಾದಲ್ದೆ, ಪೆಟ್ರೋಲ್ ಹಾಕ್ಸಿ, ಡ್ರೈವರ್ ಇಕ್ಕಿ ಕಳ್ಸೋದು ಬ್ಯಾರೆ. ಅದೋ ಬಿಳೇ ಆನೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹೊಸ ಬರಹ ಇಲ್ಲಿದೆ

Read More

‘ಹಿಮಾಲಯ’ದೆದುರಿನ ಜ್ಞಾನೋದಯ!: ಪೂರ್ಣೇಶ್‌ ಮತ್ತಾವರ ಸರಣಿ

ಈ ನಮ್ಮ ಶೋಕತಪ್ತತೆಯು ಸಹಜವಾಗಿಯೇ ಕಡಿಮೆಯಾಗುತ್ತಿತ್ತೇನೋ. ಆದರೆ, ಹಾಗಾಗಲು ಬಿಡದಂತ ತೀರ್ಮಾನವನ್ನು ನಮ್ಮ ಪ್ರಾಂಶುಪಾಲರೇ ತೆಗೆದುಕೊಂಡಿದ್ದರು. ನಮಗೆ ಅನುಮತಿಯನ್ನು ನಿರಾಕರಿಸಿದವರು ಹನ್ನೊಂದು ಹನ್ನೆರಡನೇ ತರಗತಿಯ ಹುಡುಗರಿಗಾದರೋ ತಮ್ಮ ನಿರಾಕರಣೆಯನ್ನು ಪ್ರದರ್ಶಿಸಿರಲಿಲ್ಲ. ಅದರ ಫಲವಾಗಿ ಅವರು ರಾತ್ರಿ ಊಟದ ನಂತರ ಗುರು ವೃಂದದವರೊಡನೆ ಮತ್ತದೇ ಗ್ರೀನ್ ರೂಮ್ ಸೇರಿ, ಕಿಟಕಿ ಬಾಗಿಲುಗಳನ್ನೆಲ್ಲಾ ಹಾಕಿ, ಸಂದುಗೊಂದುಗಳಿಗೆಲ್ಲಾ ಮುಚ್ಚಿಕೆ ಹಾಕಿಕೊಂಡು ವಿಶ್ವ ಸುಂದರಿಯರ ದರ್ಶನ ಪಡೆಯತೊಡಗಿದ್ದರು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿ

Read More

ಯುದ್ಧದ ಬಿಸಿ ನೀಗಿಕೊಂಡು ತಂಪಗಾಗಬೇಕಿದೆ ರಷ್ಯಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಕಮ್ಯುನಿಸ್ಟ್‌ ಆಳ್ವಿಕೆಯ ಸಮಯದಲ್ಲಿ ರಷ್ಯನ್ ಬರಹಗಾರರು ನಿರ್ಬಂಧಕ್ಕೆ ಒಳಗಾದರು. ಮುಕ್ತವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾಗದ ದುಃಸ್ಥಿತಿಗೆ ಸಿಲುಕಿಕೊಂಡರು. ಮರೀನಾ ಟ್ವೆಟೇವಾ ಅವರು ರಷ್ಯಾದ ಹೊರಗಡೆ ಇದ್ದುಕೊಂಡೇ ಕಾವ್ಯರಚನೆ ಮಾಡಿದ್ದು, ರಷ್ಯಾಕ್ಕೆ ಮರಳಿ ಬಂದು ಎರಡೇ ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದು ಇವೆಲ್ಲಾ ಸಾಹಿತ್ಯ ಕ್ಷೇತ್ರದ ಮೇಲೆ ಕಮ್ಯುನಿಸ್ಟ್‌ ಪ್ರಾಬಲ್ಯವನ್ನು ಸೂಚಿಸುತ್ತವೆ. ಸ್ಟಾಲಿನ್ ಮರಣದ ಬಳಿಕ ರಷ್ಯನ್ ಸಾಹಿತ್ಯದಲ್ಲಿ ಹೊಸ ಬಗೆಯ ಬರಹಗಳು ಮತ್ತು ಪ್ರವೃತ್ತಿಗಳು ಕಾಣಿಸಿಕೊಂಡವು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಪದಗಳಷ್ಟೇ ಅಲ್ಲದ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

‘ಒಂದು ಕವಿತೆ ಕೆಲಸ ಮಾಡುತ್ತಿದೆಯೆ ಎಂದು ತಿಳಿಯುವುದು ಹೇಗೆ’ ಎಂಬ ಕವಿತೆಯಲ್ಲಿ, ಇನ್ನೊಬ್ಬರ ಕವಿತೆ ಓದುವಿಕೆಯ ಮೌನವನ್ನು ಆಲಿಸುವ ಮೂಲಕ ಮಾತ್ರ ನಿಮ್ಮ ಮುಂದೆ ಇರುವ ಕವಿತೆ ನಿಜವಾಗಿಯೂ ಯಶಸ್ವಿಯಾಗುತ್ತದೆ. ಅಂತೆಯೇ ‘Harmony’ ಎಂಬ ಕವಿತೆಯಲ್ಲಿ “ವಸ್ತುಗಳು” ಮತ್ತು “ಪದಗಳಲ್ಲದವು” ಪ್ರಾಸದ ಸ್ಥಿತಿಗೆ ಮರಳಬೇಕು ಎಂದು ಸೂಚಿಸುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ವಿವಿದಾರ್ಥದಿ ಪದನಾರಿ: ಸುಮಾವೀಣಾ ಸರಣಿ

ಏನೋ ಹುಷಾರಿಲ್ವೇನೋ ಎನ್ನುತ್ತಾ… ಟೈಂ ಆಗ್ತಾ ಇದೆ ಎಷ್ಟು ಸಾಧ್ಯನೋ ಅಷ್ಟು ಬರಿಯಮ್ಮ! ಬರಿ! ಎನ್ನುತ್ತಲೇ ಇದ್ದೆ ಅವಳು ‘ನೋ’ ‘ನೋ’ ಎನ್ನುವಂತೆ ತಲೆ ಆಡಿಸಿದಳು ಕಡೆಗೆ ಅವಳೆ “ಏನೂ ಪ್ರಿಪೇರ್ ಆಗಿಲ್ಲ ಮೇಡಮ್ ಹೇಗ್ ಬರೀಲಿ?” ಎಂದಾಗಂತೂ ಈಕೆ ಎಷ್ಟು ಸಾಧ್ಯನೋ ಅಷ್ಟು ಬರಿಯಮ್ಮ ಎಂದದ್ದಕ್ಕೆ ಸಾಧ್ಯ… ನೋ! ನೋ ಸಾಧ್ಯ …! ಎಂದು ತಲೆ ಆಡಿಸಿರುವಳಲ್ಲ… ನಿಜ!
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ನಾಲ್ಕನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ