ರಾಜಕೀಯದಾಗೆ ಅಪ್ಪನ ಕಸರತ್ತು: ಸುಮಾ ಸತೀಶ್ ಸರಣಿ
ಊರಿನ ಜನರಿಗೆಲ್ಲ ಸರಕಾರ ಉಚಿತವಾಗಿ ಕೊಡೋ ಎಲ್ಲಾ ಸವಲತ್ತುಗಳು ತಲುಪೋ ತರ ಮಾಡಿದ್ರು. ಯಾವ್ಯಾವ್ದು ಫ್ರೀಯಾಗಿ ಸಿಕ್ತೈತೆ ಅಂತ ಅಧಿಕಾರಿಗಳ ತಾವ್ಕೆ ಹೋಗಿ ತಿಳ್ಕಂಬರಾರು. ಅದ್ರ ಬಗ್ಗೆ ಓದ್ಕಣಾರು. ಕಾನೂನು ತಿಳ್ಕಂಬಾದ್ರಾಗೆ ಸೈ ಅನ್ನುಸ್ಕೊಂಡಿದ್ರು. ಎಲ್ಲಾ ಓದ್ಕಂಡು ಮುಂದ್ಕೆ ಹೋಗೋರು. ಅಧಿಕಾರಿಗುಳ ಪ್ರೀತಿ, ವಿಶ್ವಾಸ ಗಳಿಸಾಕೆ ಅವುರ್ಗೆ ಊಟ, ತಿಂಡಿ ಕೊಡ್ಸೋದು, ಹೊಲದಾಗೆ ಬೆಳೆದ ಫಸಲು, ತರಕಾರಿ, ಕಾಯಿ, ಎಳನೀರು ಉಡುಗೊರೆ ಕೊಡೋರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ
