Advertisement

Category: ಸರಣಿ

ಇಲ್ಲಿ ಸೋಲೂ ಇದೆ, ಗೆಲುವೂ ಇದೆ…: ಕಾರ್ತಿಕ್ ಕೃಷ್ಣ ಸರಣಿ

ಅಂಕಗಳು ಸೋರಿಹೋಗುತ್ತಿದ್ದರೂ ಎದೆಗುಂದದೆ ಆಡುತ್ತಿದ್ದ ಮೆರಿನ್ ಕೆಲವೇ ಘಳಿಗೆಯಲ್ಲಿ ನೋವನ್ನು ತಾಳಲಾರದೆ ಮತ್ತೆ ಕುಸಿದಳು. ಈ ಬಾರಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಅವಳ ನೋವಿಗೆ ಇಡೀ ಕ್ರೀಡಾಂಗಣ ಮರುಗುತ್ತಿತ್ತು. ಕುಸಿದಲ್ಲೇ ಅಳುತ್ತಿದ್ದ ಮೆರಿನ್‌ಳನ್ನು ತಬ್ಬಿ ಸಮಾಧಾನ ಮಾಡುತ್ತಿದ್ದ ಅವಳ ಕೋಚ್‌ಗೂ ಕೂಡ ತನ್ನ ಕಣ್ಣೀರನ್ನು ತಡೆಹಿಡಿಯಲಾಗಿರಲಿಲ್ಲ. ಎದುರಾಳಿ ಹೇ ಗೆ ತಾನು ಫೈನಲ್ ತಲುಪಿದ್ದಕ್ಕೆ ಖುಷಿಪಡುವುದೋ, ಅಥವಾ ಮೆರಿನ್‌ಳ ಸ್ಥಿತಿಯನ್ನು ನೋಡಿ ಮರುಗುವುದೋ, ಒಂದೂ ತಿಳಿಯದೆ ಮೆರೀನಳ ಬಳಿ ಬಂದು ವಿಷಾದದ ನೋಟ ಬೀರುತ್ತಾ ನಿಂತಿದ್ದಳು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಮೈನಾ- ಇದು ದೇಹವಲ್ಲ, ಭಾವಗಳ ಸಂಕಲನ: ರಾಮ್ ಪ್ರಕಾಶ್ ರೈ ಕೆ. ಸರಣಿ

ಮೈನಾ ಸತ್ಯನಿಗೆ ಚಪ್ಪಲಿಯನ್ನು ಉಡುಗೊರೆಯಾಗಿ ನೀಡುತ್ತಾಳೆ. ಅದನ್ನು ಕಂಡು ಬೇಸರದಿಂದ ಇದೆಂಥಾ ಉಡುಗೊರೆ ಎಂದು ಸತ್ಯ ಎಸೆಯುತ್ತಾನೆ. ಅನಂತರ ಕಾಲಿಲ್ಲದೇ ನೆಲಕ್ಕೆ ಕೈಯ್ಯಿಟ್ಟು ನಡೆಯುವಾಗ ನೋವನುಭವಿಸಬಾರದು ಎಂದು ಇದನ್ನು ನೀಡಿದ್ದಾಳೆ ಎಂದು ತಿಳಿದು ಖೇದಗೊಳ್ಳುತ್ತಾನೆ ಆತ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಥೆಯು ಸೆರೆ ಹಿಡಿದ ಸೂಕ್ಷ್ಮತೆ. ಈ ದೃಶ್ಯವೇನೂ ಕಥೆಯ ಮುಖ್ಯ ಭಾಗವಲ್ಲದಿದ್ದರೂ, ಅದೆಷ್ಟು ಅಧ್ಯಯನದ ದೃಷ್ಟಿಕೋನ ಈ ದೃಶ್ಯದಲ್ಲಿ ಅಡಗಿದೆ ಎಂಬುದು ಅಚ್ಚರಿಯ ಸಂಗತಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಅಮೆರಿಕದ ಅಂಗಡಿಯಲ್ಲಿ ಗಣೇಶ ದರ್ಶನ!: ಗುರುಪ್ರಸಾದ ಕುರ್ತಕೋಟಿ ಸರಣಿ

ಆ ಅಂಗಡಿಯ ಹೆಸರು ಡಾಲರ್ ಟ್ರೀ ಅಂತ. ಅಲ್ಲಿ ಯಾವುದೇ ಸಾಮಾನು ಕೊಂಡರೂ ಅದಕ್ಕೆ ಒಂದು ಡಾಲರ್ ಮಾತ್ರ ಬೆಲೆ. ಪೆನ್ನು, ನೋಟ್ ಬುಕ್, ಆಟಿಗೆ ಸಾಮಾನು ಹೀಗೆ ಎಲ್ಲವೂ ಒಂದೇ ಡಾಲರ್. ಯಾರಿಗುಂಟು ಯಾರಿಗಿಲ್ಲ ಅಂತ ಜನರೂ ಕೂಡ ಸಿಕ್ಕಿದ್ದನ್ನೆಲ್ಲ ಬಾಚಿಕೊಂಡು ಹೋಗುತ್ತಿದ್ದರು. ಎಷ್ಟೋ ಸಾಮಾನುಗಳು ಒಂದೇ ಡಾಲರಿಗೆ ಇಷ್ಟೆಲ್ಲಾ!? ಅನ್ನಿಸುವಷ್ಟು ಇದ್ದವಾದರೂ, ಅದರ ಜೊತೆಗೆ ತೆಗೆದುಕೊಳ್ಳುವ ಎಷ್ಟೋ ಇನ್ನಿತರ ವಸ್ತುಗಳು ಡಾಲರಗಿಂತ ಕಡಿಮೆ ಬೆಲೆಯವೇ ಆಗಿದ್ದವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಸುತ್ತೂರ್ಗೊಂದೇ ಗೌರ್ಮೆಂಟು ಇಸ್ಕೂಲ್: ಸುಮಾ ಸತೀಶ್ ಸರಣಿ

ಅಲ್ಲಾ ನಮ್‌ ಮೇಷ್ಟ್ರು ಹೇಳಿರೋ ಸಿನ್ಮಾ‌ ಇದೇನಾ ಅಂತ ಕಣ್ಣು ತಿಕ್ಕೊಂಡು ಇನ್ನೊಂದು ದಪ ನೋಡಿದ್ರೂ ಆ ಪಟಗ್ಳು ವಸೀನೂ ಬದಲಾಗ್ಲೇ ಇಲ್ಲ. ‘ಅಯ್ ಇದೇನಮ್ಮಿ ನಮ್ಮೇಷ್ಟ್ರು ಕುಲಗೆಟ್ಟೋಗವ್ರೆ. ಅಲ್ಲಾ ವಾಗಿ ವಾಗಿ ಇಂತ ಸಿನಿಮ್ವೇ ನಮ್ಮಂತ ಸಣ್ಣೈಕ್ಳುಗೆ ನೋಡಾಕ್ ಯೇಳಾದು. ತಗ್ ತಗಿ ಯಾರಾದ್ರೂ ಮರ್ವಾದಸ್ಥರು ನೋಡೋ ಸಿನಿಮ್ವೇ ಇದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಮಕ್ಕಳು ಸಿನಿಮಾ ನೋಡಿದ ಪ್ರಸಂಗ ನಿಮ್ಮ ಓದಿಗೆ

Read More

ಶಾಲೆ ಬಿಡಿಸಿದ ಲವ್ ಲೆಟರ್…!!: ಬಸವನಗೌಡ ಹೆಬ್ಬಳಗೆರೆ ಸರಣಿ

ಒಂಬತ್ತನೇ ಕ್ಲಾಸಲ್ಲಿ ನಾನು ಸಾಕಷ್ಟು ಓದುತ್ತಿದ್ದೆ. ಈ ಓದಿನ ಫಲ ನನಗೆ ಫಲಿತಾಂಶದಲ್ಲಿ ಸಿಕ್ಕಿತ್ತು. ಮೂರೂ ಸೆಕ್ಷನ್‌ಗಳಿಗೂ ಸೇರಿ ಕೊಡುತ್ತಿದ್ದ ರ್ಯಾಂಕಿನಲ್ಲಿ ನನಗೆ ಎರಡನೇ ರ್ಯಾಂಕ್ ಲಭಿಸಿತ್ತು. ಕನ್ನಡ ಮೀಡಿಯಂನ ಶಿವಶಂಕರ್ ಪ್ರಥಮ ರ್ಯಾಂಕ್ ಪಡೆದಿದ್ದ. ನನಗೆ ಎರಡು ಅಂಕಗಳಲ್ಲಿ‌ ಪ್ರಥಮ ರ್ಯಾಂಕ್ ಮಿಸ್ಸಾಗಿತ್ತು. ಇದರ ಬಗ್ಗೆ ಅಷ್ಟು ಫೀಲ್ ಆಗಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ