Advertisement

Category: ಸರಣಿ

ಬರಲು ಹೇಳಿ ಭೇಟಿಯಾಗದೆ ಹೋದರು!: ರಂಜಾನ್ ದರ್ಗಾ ಸರಣಿ

ಅವರು ಏನೇ ಆದರೂ ನನ್ನ ಜೊತೆಗಿನ ಸಂಪರ್ಕವನ್ನು ಎಂದೂ ಕಳೆದುಕೊಳ್ಳಲಿಲ್ಲ. ಸುಬ್ಬಯ್ಯಶೆಟ್ಟಿ ಅವರು ಮೊದಲು ಮಾಡಿ ಆ ಕಾಲದ ಎಲ್ಲ ಹಿರಿಯ ಕಿರಿಯ ಗೆಳೆಯರು ಇಂದಿಗೂ ಸಂಪರ್ಕದಲ್ಲಿದ್ದಾರೆ. ಈ ಕಾರಣದಿಂದಲೇ ಮೊಹಿದ್ದೀನ್ ಅವರು ನಿಧನರಾಗುವ ಮೂರು ದಿನಗಳ ಮುಂಚೆ ಫೋನ್ ಮಾಡಿದ್ದು. ನಾವು ಸಮಯ ಸಿಕ್ಕಾಗಲೆಲ್ಲ ಭೇಟಿಯಾಗುತ್ತಲೇ ಇದ್ದೆವು. ನಡೆದಾಡಲಿಕ್ಕಾಗದೆ ಬಹಳ ನೋವು ಅನುಭವಿಸಿದರು. ಅವರಿಗೆ ತಮ್ಮ ಅನಾರೋಗ್ಯದ ಬಗ್ಗೆ ಬಹಳ ಬೇಸರವಾಗಿತ್ತು. ಏಕೆಂದರೆ ಸದಾ ಚಟುವಟಿಕೆಯಿಂದ ಇರಬೇಕೆನ್ನುವ ಸೇವಾ ಮನೋಭಾವದ ಗಂಭೀರ ವ್ಯಕ್ತಿ ಅವರಾಗಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಗೋ ಮಾಂಡೋ…. ಗೋ…!!: ಕಾರ್ತಿಕ್‌ ಕೃಷ್ಣ ಸರಣಿ

ಮೊದಲ ಪ್ರಯತ್ನ…. ಕೋಲನ್ನು ಹಿಡಿದು ಅಷ್ಟು ದೂರದಿಂದ ಓಡುತ್ತಾ ಬಂದ ಡೂಪ್ಲ್ಯಾಂಟೀಸ್‌ನನ್ನು ಎರಡನೇ ಸ್ಥಾನದಲ್ಲಿದ್ದ ಅಮೆರಿಕಾದ ಕೆಂಡ್ರಿಕ್ಸ್ ಹುರಿದುಂಬಿಸುತ್ತಿದ್ದ… ಪ್ರೋತ್ಸಾಹಿಸುತ್ತಿದ್ದ… ಎಲ್ಲರದ್ದೂ ಒಂದೇ ಚೀತ್ಕಾರ… “ಗೋ ಮಾಂಡೋ… ಗೋ..” ಮಾಂಡೋ… ಕೋಲನ್ನು ಬಾಕ್ಸ್‌ಗೆ ನೆಟ್ಟು ಗಾಳಿಯಲ್ಲಿ ಗಿರಕಿ ಹೊಡೆದು, ಅಡ್ಡ ಕೋಲನ್ನು ದಾಟಿ, ಇನ್ನೇನು ಕೈಯನ್ನು ಮೇಲೆತ್ತಬೇಕು.. ಮಾಂಡೋನೊಡನೆ ಅಡ್ಡ ಕೋಲೂ ಕೆಳಗುರುಳಿತ್ತು… ನಿಶ್ಯಬ್ದ… ಲಯಬದ್ಧವಾಗಿ ಚೀರುತ್ತಿದ್ದವರೆಲ್ಲಾ ‘ಓ….’ ಎಂದು ನಿಟ್ಟುಸಿರುಬಿಟ್ಟಿದ್ದರು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಕಿಶೋರ್‌ ಕುಮಾರ್‌ ಎಲ್ಲಿ ಹೋದ್ರು?: ಎಚ್. ಗೋಪಾಲಕೃಷ್ಣ ಸರಣಿ

ಆಗತಾನೇ ಅಡಿಗರ ಕವನಗಳನ್ನು ಓದಿ ಅರ್ಥ ಮಾಡಿಕೊಳ್ಳುವ ಪ್ರಯತ್ನ ಶುರು ಮಾಡಿದ್ದೆ. ಅವರ ಮತ್ತು ಇತರ ಕವಿಗಳ ಹಲವು ಪದ್ಯಗಳ ಆರಂಭಿಕ ಸಾಲು ನೆನಪಿನಲ್ಲಿ ಇತ್ತು. ಕಟ್ಟುವೆವು ನಾವು ಹೊಸ ನಾಡೊಂದನು…., ನಾನು ಮಾಯವಾದಿಯಾಗಿ ಬಂದೆ, ಇದು ನಮ್ಮ ಮನೆಯ ಕಥೆ, ಕಾಲವ ನಾನು ನಿಂತೆ, ಮರಳಿನಿಂದ ಎಣ್ಣೆ ಹಿಂಡುವ ಗಾಣ ಮೊದಲಾದ ಸಾಲುಗಳು ತಲೆಯಲ್ಲಿ ಆಳವಾಗಿ ಹುದುಗಿತ್ತು…… ಇವು ಅಲ್ಪ ಸಲ್ಪ ಬದಲಾವಣೆ ಒಂದಿಗೆ ಪೇಪರಿನ ಮೇಲೆ ಮೂಡಿದವು..
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು.‌ ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ‍ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ‌ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ

Read More

ಕೂರಾಪುರಾಣ ೪: ಸೂಜಿಗಳೆಂದರೆ ಸಂಕಷ್ಟವೇ…

ಎರಡು ನಿಮಿಷಗಳ ಕಾಲ ಕೂರಾ ಅವಳನ್ನು ನಮ್ಮೊಡನೆ ಮಾತನಾಡಲು ಬಿಡಲೇ ಇಲ್ಲ. ಅವಳ ಮೇಲೆ ಹತ್ತುವುದು, ಅವಳ ಸುತ್ತ ಸುತ್ತುವುದು, ಅವಳ ಕೆನ್ನೆಯನ್ನು ನೆಕ್ಕುವುದು.. ಎಲ್ಲ ಮಾಡುತ್ತಿದ್ದ. ಒಳಗೆ ಬಂದಾಗ ಆಕೆ ಅವನಿಗೆ ಒಂದೆರಡು ಟ್ರೀಟಿನ ತುಂಡುಗಳನ್ನು ಕೊಟ್ಟಿದ್ದಳು. ಇದೆಲ್ಲ ಅವಳನ್ನು ಒಲಿಸಲಿಕ್ಕೆ ಮತ್ತು ಇನ್ನೆರಡು ತುಂಡುಗಳನ್ನು ಪಡೆಯಲಿಕ್ಕೆ ಎಂದು ನಮಗೆ ಗೊತ್ತಿತ್ತು. ನಿಧಾನವಾಗಿ ಆಕೆ ನಮ್ಮೊಡನೆ ಮಾತನಾಡುತ್ತ ನಾಯಿಗಳ ಆರೋಗ್ಯದ ಬಗ್ಗೆ ವಿವರಿಸತೊಡಗಿದಳು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ನಾಲ್ಕನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ