Advertisement

Category: ಸರಣಿ

ಡಾ. ಎಸ್.ವಿ. ನರಸಿಂಹನ್‌ ಹೊಸ ಸರಣಿ “ಹಕ್ಕಿಪಕ್ಷಿ ಚಿತ್ರ ಸಂಪುಟ” ಇಂದಿನಿಂದ

ಸ್ವಭಾವತಃ ಚಲನಾಶಕ್ತಿಯಿಲ್ಲದ ಮರ-ಗಿಡ ಸಸ್ಯಗಳು ತಮ್ಮ ಸಂತಾನೋತ್ಪತ್ತಿಗಾಗಿ ಅವಶ್ಯವಿರುವ ಬೀಜಪ್ರಸರಣ ಕಾರ್ಯಕ್ಕಾಗಿ ಇತರ ಜೀವಿಗಳನ್ನೇ ಅವಲಂಬಿಸುವುದು ಅನಿವಾರ್ಯವಾಗಿದೆ. ಇದಕ್ಕಾಗಿ ವಿವಿಧ ಬಣ್ಣಗಳಿಂದ ಕೂಡಿದ, ರುಚಿಕರವಾದ, ಮತ್ತು ಇವೆಲ್ಲಕಿಂತ ಮಿಗಿಲಾಗಿ ಎಲ್ಲ ಪೌಷ್ಟಿಕ ಅಂಶಗಳಿಂದಲೂ ಕೂಡಿದ ಸುಮಧುರ ಹಣ್ಣುಗಳ ಮೂಲಕ ಆಕರ್ಷಿಸುತ್ತವೆ. ಈ ಕಾರ್ಯದಲ್ಲಿ ಕೂಡ ಉಳಿದ ಜೀವಿಗಳಿಗಿಂತ ಹಕ್ಕಿಗಳ ಪಾತ್ರ ಗಮನೀಯ. ತಿಂದ ಹಣ್ಣಿನ ಬೀಜವನ್ನು ದೂರದೂರದೆಡೆಗಳಲ್ಲಿ ಉಗಿಯುವುದು ಒಂದು ರೀತಿಯಾದರೆ, ತಿಂದ ಹಣ್ಣಿನ ಬೀಜ ಹಕ್ಕಿಯ ಉದರ ಸೇರಿ, ಹಿಕ್ಕೆಯ ಮೂಲಕವೂ ಹರಡಬಲ್ಲದು.
ಡಾ. ಎಸ್.ವಿ. ನರಸಿಂಹನ್‌ ಹೊಸ ಸರಣಿ “ಹಕ್ಕಿಪಕ್ಷಿ ಚಿತ್ರ ಸಂಪುಟ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಗೋಹರ್‌ಬಾಯಿ ಕತೆ ಹೇಳಿದ ‘ಪ್ರತಿಗಂಧರ್ವʼ: ಚಿತ್ರಾ ವೆಂಕಟರಾಜು ಸರಣಿ

‘ಪ್ರತಿಗಂಧರ್ವʼ ದಂತಹ ನಾಟಕದ ಅಭಿನಯ ಬಹಳ ಸವಾಲಿನದು. ಏಕೆಂದರೆ ಹೆಚ್ಚಿನ ಪಾತ್ರಗಳು ಕಲಾವಿದರದ್ದು. ಗೋಹರ್‌ ಬಾಯಿ ಪಾತ್ರ ಮಾಡುವ ಕಲಾವಿದೆ, ನಾಟಕದ ಪಾತ್ರ ಮಾಡುವುದರ ಜತೆಗೆ ನಾಟಕದೊಳಗಿರುವ ರಂಗಸ್ಥಳದಲ್ಲಿ ಅಭಿನಯ ಮಾಡಬೇಕಾಗುತ್ತದೆ. ಅಂದರೆ ನಾವು ನೋಡುತ್ತಿರುವ ಪಾತ್ರ ಗೋಹರ್‌ ಬಾಯಿ. ಗೋಹರ್‌ ಬಾಯಿ ನಾಟಕದೊಳಗೆ ಮಾಡಿದ ಪಾತ್ರ ಗೂಢಾಚಾರಿಣಿಯದು. ಗೂಢಾಚಾರಿಣಿಯ ಪಾತ್ರ ಮಾಡಿದ ಗೋಹರ್‌ ಬಾಯಿ ಪಾತ್ರಧಾರಿ, ಅದು ಮುಗಿದ ಮೇಲೆ ಮತ್ತೆ ಗೋಹರ್‌ ಆಗಬೇಕು. ಆಗ ಅಲ್ಲಿನ ಅಭಿನಯಗಳೆರಡೂ ಬೇರೆಯಾಗಬೇಕಾಗುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಪೋಸ್ಟರ್ ಬಳಿಯೋ ಕೆಲಸದಾಗಿನ ಕೆಲ ಅನುಭವಗಳು… ಬಸವನಗೌಡ ಹೆಬ್ಬಳಗೆರೆ ಸರಣಿ

ನಾವು ಪೋಸ್ಟರನ್ನು ಅಂಟಿಸುತ್ತಾ ಲಕ್ಷ್ಮೀ ಮೆಕ್ಕೆಜೋಳದ ಬೀಜಗಳ ಬಗ್ಗೆ ಪ್ರಚಾರ ಮಾಡುತ್ತಾ ಹೋಗುತ್ತಿದ್ದಾಗ ಒಂದು ಹಳ್ಳಿಯವರು ನಮ್ಮನ್ನು ಸುತ್ತುವರೆದು “ಕಳೆದ ವರ್ಷ ಇದೇ ಬೀಜಗಳನ್ನು ಬಿತ್ತಿದ್ದೆವು. ನಮಗೆ ಬೆಳೆ ಲಾಸ್ ಆಗಿದೆ. ಅವು ಸರಿಯಾಗಿ ಹುಟ್ಟಿಲ್ಲ. ಆದ್ದರಿಂದ ಆ ನಷ್ಟವನ್ನು ನೀವೇ ಭರಿಸಬೇಕು” ಎಂದು ನಮ್ಮನ್ನು ಕೇಳಲು ಶುರು ಮಾಡಿದರು. ಅದೇನೋ ಹೇಳ್ತಾರಲ್ಲಾ. ‘ಮದುವೆ ಆಗೋ ತಿಮ್ಮ ಅಂದ್ರೆ ನೀನೇ ನನ್ನ ಹೆಂಡ್ತಿ ಆಗೋ ಅಂದ್ನಂತೆ’ ಅನ್ನೋ ಹಾಗಾಯ್ತು ನಮ್ಮ ಪರಿಸ್ಥಿತಿ. ನಮ್ಮನ್ನು ಹಳ್ಳಿಯವರು ಹಾಗೇ ಕೇಳಿದಾಗ ನಾವು ನಮ್ಮ “ಮ್ಯಾನೇಜರ್‌ನ ಕರೆದುಕೊಂಡು ಬರ್ತೀವಿ” ಎಂದು ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಓಡಿದೆವು!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಭಾರತಕ್ಕೆ ಬಂದ ಕಾಫಿ: ದರ್ಶನ್‌ ಜಯಣ್ಣ ಸರಣಿ

ಮೊದಮೊದಲು ಇದನ್ನು ಶೈತಾನನ ಪೇಯವೆಂದು ನಿರ್ಬಂಧಿಸಿದ್ದ ಒಟ್ಟೋಮನ್ ಸುಲ್ತಾನ ನಂತರದ ದಿನಗಳಲ್ಲಿ ಇದು ಮದ್ಯ ಅಥವಾ ಮದಿರೆಯಂತಲ್ಲ ಎಂದು ಮನಗಂಡು ಸ್ವತಃ ತಾನೇ ಅದನ್ನು ಕುಡಿದು ಪರೀಕ್ಷಿಸಿ ಆ ನಿರ್ಬಂಧವನ್ನು ಸಡಿಲಿಸುತ್ತಾನೆ. ಹಾಗೆಂದ ಮಾತ್ರಕ್ಕೆ ಎಲ್ಲರಿಗೂ ಎಲ್ಲಕಾಲಕ್ಕೂ ಇದು ಸಿಗುವಂತಿರಲಿಲ್ಲ. ಸೂಫಿಗಳು, ಸೈನಿಕರು, ಸಮಾಜದ ಗಣ್ಯರು, ಆಸ್ಥಾನ ವಿದ್ವಾಂಸರು, ಅಧಿಕಾರಿಗಳಿಗೆ ಮತ್ತು ಸಮರಕ್ಕೆ ಹೊರಟವರಿಗೆ ಮಾತ್ರ ಇದು ಸೀಮಿತವಾಗಿತ್ತು ಎಂದರೆ ಇವತ್ತಿಗೆ ನಂಬಲು ಕಷ್ಟವಾಗಬಹುದೇನೋ! ಇದರ ಕಾರಣವೇ ಇಂದು ನಾವು “ಟರ್ಕಿಶ್ ಕಾಫಿಯ” ಬಗ್ಗೆ ಆಗಾಗ ಕೇಳುತ್ತಿರುತ್ತೇವೆ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಹದಿಮೂರನೆಯ ಕಂತು

Read More

ಕಥಾ ಗಾಳಕ್ಕೆ ಸಿಕ್ಕ ಮೀನು…: ಎಚ್. ಗೋಪಾಲಕೃಷ್ಣ ಸರಣಿ

ಆರ್ಥಿಕ ಸಂಪನ್ಮೂಲದ ವಿಷಯಕ್ಕೆ ಬಂದಾಗ ನಮ್ಮ ಕನಸುಗಳು ಯೋಜನೆಗಳು ಶ್ರಿಂಕ್ ಆಗುತ್ತಿದ್ದವು! ಒಂದು ವಾರದ ದೊಡ್ಡಮಟ್ಟದ ಕಾರ್ಯಕ್ರಮಗಳು ಕೆಲವು ಗಂಟೆಗಳಿಗೆ ಕುಗ್ಗುತ್ತಿದ್ದವು. ನಮ್ಮ ಬಜೆಟ್‌ಗೆ ನಿಲುಕುವಂತಹ ಸಭಾಭವನ ಅಂದರೆ ಆಗ ಮಲ್ಲೇಶ್ವರದ ಗಾಂಧಿ ಸಾಹಿತ್ಯ ಸಂಘದ ಹಾಲ್ ಒಂದೇ. ಇಪ್ಪತ್ತೈದು ರೂಪಾಯಿ ಅದರ ಬಾಡಿಗೆ. ಅದರಲ್ಲೇ ಎಲ್ಲವೂ ಅಂದರೆ ಮೈಕು, ಲೈಟು ಸೇರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೫ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ