Advertisement

Category: ಸರಣಿ

ಭಕ್ತವತ್ಸಲ ಸಿದ್ಧಗಂಗಾ ಶ್ರೀಗಳು: ರಂಜಾನ್ ದರ್ಗಾ ಸರಣಿ

ಎಲ್ಲ ಜಾತಿ ಜನಾಂಗಗಳ ಮಕ್ಕಳ ಶೈಕ್ಷಣಿಕ ಏಳ್ಗೆಯೆ ಅವರ ಬಹುದೊಡ್ಡ ಗುರಿಯಾಗಿತ್ತು. ಪ್ರತಿ ವರ್ಷ ಹತ್ತುಸಾವಿರ ಮಕ್ಕಳನ್ನು ಸಾಕುತ್ತ, ಅವರಿಗೆ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುತ್ತ, ಶೈಕ್ಷಣಿಕವಾಗಿ ಅವರನ್ನು ಉನ್ನತ ಸ್ಥಾನಕ್ಕೇರಿಸುವುದು ಸಾಮಾನ್ಯ ಮಾತಲ್ಲ. ಅವರ ಮಠದ ಎಲ್ಲ ವಿಭಾಗಗಳಲ್ಲಿ ನಿಷ್ಠೆಯಿಂದ ಎಲೆ ಮರೆಯ ಕಾಯಿಯಂತೆ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಗೌರವಕ್ಕೆ ಅರ್ಹರಾಗಿದ್ದಾರೆ. ಅವರ ಮಠದ ಆವರಣವು ಪುಟ್ಟ ಭಾರತವೇ ಆಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕೈ ಹಿಡಿದು ನೀ ನಡೆಸು ಮುಂದೆ…: ಕಾರ್ತಿಕ್ ಕೃಷ್ಣ ಸರಣಿ

ಡೆರೆಕ್ ರೆಡ್ಮಂಡ್ ಆ ದಿನ ಪದಕವನ್ನು ಗೆಲ್ಲಲಿಲ್ಲ. ಆದರೆ ಅವನು ಅದಕ್ಕಿಂತ ಹೆಚ್ಚು ಬೆಲೆಬಾಳುವ ಪ್ರಪಂಚದಾದ್ಯಂತದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದ. ಬಾರ್ಸಿಲೋನಾ ಒಲಿಂಪಿಕ್ಸ್‌ನ ಆ ಘಟನೆ, ರೆಡ್ಮಂಡ್‌ನ ಪರಿಶ್ರಮ, ಮಾನವ ಸಂಬಂಧಗಳ ಶಕ್ತಿ, ತಂದೆ ಮತ್ತು ಮಗನ ನಡುವಿನ ಮುರಿಯಲಾಗದ ಬಂಧದ ಸಂಕೇತವಾಗಿ ಅಜರಾಮರವಾಗಿ ಉಳಿಯಿತು. ನಿಜವಾದ ಯಶಸ್ಸು ಅಡಗಿರುವುದು ಗೆಲ್ಲುವುದರಲ್ಲಿ ಮಾತ್ರವಲ್ಲ, ಎಂತಹದೇ ಅಡೆತಡೆಗಳು ಎದುರಾದರೂ ಮುಂದುವರಿಯುವ ಧೈರ್ಯವಿರುವುದರಲ್ಲಿ ಎಂದು ಎಲ್ಲರಿಗೂ ಸಾರಿ ಹೇಳಿತು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಸನ್ಯಾಸಿನ್‌ ಅಂದ್ರೆ ಯಾರು?: ಎಚ್. ಗೋಪಾಲಕೃಷ್ಣ ಸರಣಿ

ಸಂಸ್ಥೆಯ ಹಿಂದಿರುವ ವಿವೇಕಾನಂದರ ಒತ್ತಾಸೆಯ ಸ್ಪೂರ್ತಿದಾಯಕ ನಿಲುವು ಸಾರ್ವಜನಿಕರಲ್ಲಿ ಹೆಚ್ಚು ಪ್ರಚಾರ ಪಡೆದಿಲ್ಲ ಮತ್ತು ಸಹೋದರಿ ನಿವೇದಿತಾ ಅವರ ಕೊಡುಗೆಯನ್ನು ಸಂಪೂರ್ಣವಾಗಿ ಮರೆತುಬಿಡಲಾಗಿದೆ. ಅದೇ ರೀತಿಯಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗೆ ೩೭೦ಎಕರೆ ಜಮೀನು ದಾನವಾಗಿ ನೀಡಿದ ಮೈಸೂರು ಮಹಾರಾಜರಾಗಿದ್ದ ಕೃಷ್ಣರಾಜ್ ಒಡೆಯರ್ ಅವರನ್ನು ಸಹ ಸಂಪೂರ್ಣವಾಗಿ ಮರೆಯಲಾಗಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಅಯ್ಯೋ ಉಪ್ಪಿಟ್ಟಾ!: ಚಂದ್ರಮತಿ ಸೋಂದಾ ಸರಣಿ

ಎಲ್ಲ ಬಗೆಯ ಉಪ್ಪಿಟ್ಟುಗಳಲ್ಲಿ ಅವರೆಕಾಳಿನ ಉಪ್ಪಿಟ್ಟಿನ ಗಮ್ಮತ್ತೆ ಬೇರೆ. ಯಾರಾದರೂ ಮನೆಗೆ ಬಂದಾಗ ಉಪ್ಪಿಟ್ಟು ಕೊಡಲಾ? ಅಂತ ಕೇಳಿದರೆ `ಈಗ ತಿಂಡಿಯೇನು ಬ್ಯಾಡ’ ಅಂತಾರೆ. `ಅವರೆಕಾಳು ಉಪ್ಪಿಟ್ಟು ಮಾಡಿದ್ದೆ. ಅದ್ಕೆ ಕೇಳ್ದೆ’ ಅಂತ ಹೇಳಿನೋಡಿ. `ಅವರೆಕಾಳು ಉಪ್ಪಿಟ್ಟಾ, ಸ್ವಲ್ಪ ಕೊಡಿ’ ಅಂದೇ ಅಂತಾರೆ. ಅವರ ಮಾತು ನಂಬಿ ತುಸು ಕೊಟ್ಟರೆ `ಬಹಳ ಚೆನ್ನಾಗಿದೆ…
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ನಾಲ್ಕನೆಯ ಕಂತು

Read More

ಪೂರ್ಣೇಶ್‌ ಮತ್ತಾವರ ಹೊಸ ಸರಣಿ “ನವೋದಯವೆಂಬ ನೌಕೆಯಲ್ಲಿ…” ಶುರು..

ಪಾಪ! ‘ಹನಿಮೂನ್’ ಪದವನ್ನು ತಾನು ನೋಡಿದ್ದ ರವಿಚಂದ್ರನ್ ಸಿನಿಮಾಗಳ “ಹನಿಮೂನ್ ಗೆ ಹೋಗಿ ಬರೋಣ…” ಎಂಬಂತಹ ಡೈಲಾಗ್‌ಗಳಲ್ಲಿ ಮಾತ್ರ ಕೇಳಿದ್ದ, ಅಮಾಯಕರಲ್ಲಿ ಅಮಾಯಕನಂತಿದ್ದ ರುದ್ರಸ್ವಾಮಿ, ‘ಹನಿಮೂನ್’ ಎಂದರೆ ಅಮೆರಿಕ, ಇಂಗ್ಲೆಂಡ್ ನಂತಹ ಯಾವುದೋ ಸುಂದರ ದೇಶವೋ ಇಲ್ಲ ಲಂಡನ್, ಪ್ಯಾರಿಸ್ ನಂತಹ ಸುಂದರ ನಗರವೋ ಇರಬೇಕೆಂದು ಆ ಕ್ಷಣದವರೆಗೂ ಪರಿಭಾವಿಸಿದ್ದ!
ನವೋದಯ ಶಾಲಾ ದಿನಗಳ ನೆನಪುಗಳ ಕುರಿತು ಪೂರ್ಣೇಶ್‌ ಮತ್ತಾವರ ಬರೆಯುವ ಹೊಸ ಸರಣಿ “ನವೋದಯವೆಂಬ ನೌಕೆಯಲ್ಲಿ…” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ