Advertisement

Category: ಸರಣಿ

ಹೌಡಿ ನೇಬರ್ಸ್‌!: ಗುರುಪ್ರಸಾದ ಕುರ್ತಕೋಟಿ ಸರಣಿ

“ನೀವು ಸಿಕ್ಕಾಪಟ್ಟೆ ಗಲಾಟೆ ಮಾಡುತ್ತಿದ್ದೀರಿ. ಇಷ್ಟು ರಾತ್ರಿಯಾಗಿದೆ. ನಿಮ್ಮ ಗಲಾಟೆಯಿಂದ ನನಗೆ ನಿದ್ದೆ ಕೂಡ ಬರುತ್ತಿಲ್ಲ. ನಿಮಗೆ ಅಷ್ಟು ಗೊತ್ತಾಗೋದಿಲ್ಲವೇ..” ಎಂಬ ಅರ್ಥದಲ್ಲಿ ಬೈದ. ನಮಗೆಲ್ಲ ಹಾಗೆ ಮಾಡಿದೆವಲ್ಲ ಎಂಬ ಪಾಪ ಪ್ರಜ್ಞೆ ಬಂತು. ಕ್ಷಮಿಸಿ ಅಂತ ಕೇಳಿದೆವು. ಆದರೆ ಅಲ್ಲಿಯ ನಾಗರಿಕನಾಗಿದ್ದ ಚಂದ್ರುಗೆ ತುಂಬಾ ಮರ್ಯಾದೆ ಹೋಗಿಬಿಟ್ಟಿತು. ಅವನಿಗೆ sorry ಹೇಳುತ್ತಾ, ಇಷ್ಟೆಲ್ಲಾ ಗದ್ದಲ ಹಾಕಬಾರದಿತ್ತು ನೀವು ಎಂಬಂತೆ ನಮ್ಮ ಕಡೆ ನೋಡಿದ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತನೆಯ ಬರಹ

Read More

ಬದುಕಿನ ವರ್ಷಕಾಲದ ವಸಂತೋತ್ಸವ: ಸುಮಾವೀಣಾ ಸರಣಿ

ಇಂಥ ಮಳೆಯಲ್ಲಿ ಶಾಲೆಗೆ ಹೋಗುವುದೇ ದೊಡ್ಡ ಸಮಸ್ಯೆ. ಎಂಥ ಚಿಕ್ಕ ಹೊಂಡವಿದ್ದರೂ ಸರಿ ಪೇಪರಿನ ದೋಣಿಗಳನ್ನು ತೇಲಿಬಿಡುವ ನಗರದ ಹುಡುಗರ ಆಟ ಒಂದೆಡೆಯಾದರೆ ಬೆಟ್ಟ ಗುಡ್ಡಗಳ ತಪ್ಪಲಲ್ಲಿ ಹಳ್ಳ ತೋಡಿನ ಪಕ್ಕದಲ್ಲಿ ತೋಟದ ಮನೆಗಳವರ ಕಷ್ಟ ಹೇಳತೀರದು. ರಭಸದ ಮಳೆ ಬಂದರೆ ಒಂದೋ ಗುಡ್ಡ ಕುಸಿಯುವ ಭೀತಿ. ಇಲ್ಲವೇ ಮಳೆ ನೀರು ಮನೆಗೆ ನುಗ್ಗುವ ಭೀತಿ ಸ್ವಲ್ಪ ಮಳೆ ಬಂದರೂ ಸೇತುವೆಗಳು ತೇಲುವ ಹಾಗಾಗುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನಮ್ಮನು ಪ್ರಭಾವಿಸಿದ ಮೇಷ್ಟ್ರುಗಳಿವರು…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಂದು ಮಗು ದಿನದ 24 ಗಂಟೆಯಲ್ಲಿ‌ ಶಾಲೆಯಲ್ಲಿ ಬರೀ 8 ಗಂಟೆ ಇರುತ್ತಾನೆ. ಆದರೆ ಇನ್ನುಳಿದ 16 ಗಂಟೆ ಮನೇಲಿ ಇರುತ್ತಾನೆ. ಸಮಾಜದಲ್ಲಿರುವ ಉಳಿದವರೂ ಕೂಡ ಮಕ್ಕಳ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ‘ಸಂಗದಂತೆ ಬುದ್ಧಿ ಊಟದಂತೆ ಲದ್ಧಿ’ ಎಂಬಂತೆ ಸಹವಾಸವೂ ಕೂಡ ಮುಖ್ಯ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಬದುಕಲು ಕಲಿತೆವು: ರಂಜಾನ್‌ ದರ್ಗಾ ಸರಣಿ

ಕಿಚ್ಚಿನಲ್ಲಿ ಕೋಲ ಬೈಚಿಟ್ಟಾಗ ಎರಡೂ ಕೋಲುಗಳು ಕಿಚ್ಚಿನಿಂದಾಗಿ ನಿಗಿನಿಗಿ ಕೆಂಡಗಳಾಗುತ್ತವೆ. ಅವು ನಿಗಿನಿಗಿ ಕೆಂಡವಾದ ನಂತರ ಒಂದೇ ತೆರನಾದಂತೆ. ಒಂದು ದೀಪದಿಂದ ಇನ್ನೊಂದು ದೀಪವನ್ನು ಹಚ್ಚಿಕೊಂಡಾಗ ಆ ಎರಡೂ ದೀಪಗಳು ಒಂದೇ ರೀತಿಯ ಬೆಳಕು ಕೊಡುತ್ತವೆ. ಹೀಗೆ ಬಸವಣ್ಣನವರು ಗುರು-ಶಿಷ್ಯ ಸಂಬಂಧದ ಕುರಿತು ಹೇಳಿದ್ದಾರೆ. ಕೆಂಡಗಳ ಶಾಖ, ದೀಪಗಳ ಬೆಳಕು ಒಂದೇ ರೀತಿಯವು ಆಗುತ್ತವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ನಾನಾ… ಸನ್ಯಾಸಿನಾ…!: ಎಚ್. ಗೋಪಾಲಕೃಷ್ಣ ಸರಣಿ

ಖಾದಿ ಬೋರ್ಡ್‌ಗೆ ಹೋಗೋದು, ಅಲ್ಲಿಂದ ಈ ಕೇಸರಿ ಅಥವಾ ಕಾವಿ ದಟ್ಟಿ ತರೋದು ಅದನ್ನು ಮೂರೂ ಹೊತ್ತು ಸುತ್ತಿಕೊಂಡು ಓಡಾಡೋದು. ಇದು ನಮ್ಮ ಅಮ್ಮನಿಗೆ ಇಷ್ಟ ಇಲ್ಲ. ಕಾರಣ ಇವನು ರಾಮಕೃಷ್ಣ ಆಶ್ರಮಕ್ಕೆ ಹೋಗಿದ್ದ, ಅಲ್ಲಿ ಪ್ರಭಾವ ಇವನೂ ಸನ್ಯಾಸಿ ಆಗಿಬಿಡ್ತಾನೆ ಎನ್ನುವ ಭಯ. ಇದನ್ನು ಅಮ್ಮ ನನ್ನ ಮದುವೆ ಆದ ಎಷ್ಟೋ ವರ್ಷದ ನಂತರ ತನ್ನ ಸೊಸೆಗೆ ಅಂದರೆ ನನ್ನ ಹೆಂಡತಿಗೆ ಹೇಳಬೇಕಾದರೆ ನನ್ನ ಕಿವಿಗೆ ಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ