Advertisement

Category: ಸರಣಿ

ಅಚ್ಚರಿಯ “ಅಭಯಾ” ತೊಟ್ಟ ಮನಸ್ಸು: ದರ್ಶನ್‌ ಜಯಣ್ಣ ಸರಣಿ

ಮನಸಿನಲ್ಲಿ ಯಾಕೋ ತಳಮಳ ಶುರುವಾಯಿತು. ಇವರಾರೋ ಫೋನ್ ನಂಬರ್ ಶೇರ್ ಮಾಡುತ್ತಿಲ್ಲ, ಐಡೆಂಟಿಟಿ ಶೇರ್ ಮಾಡುತ್ತಿಲ್ಲ, ಕೇವಲ ನನ್ನ ವಿವರ ಪಡೆದು, ಇಲ್ಲಿಗೆ ಕರೆಸಿಕೊಂಡಿದ್ದಾರೆ, ಈಗಲೂ ಕಾಯಿಸುತ್ತಿದ್ದಾರೆ ಎಂದುಕೊಳ್ಳುವಷ್ಟರಲ್ಲಿ ಯಾರೋ ಪುಸ್ತಕಗಳನ್ನು ಹೊತ್ತು ಬರುತ್ತಿರುವುದು ಕಾಣಿಸಿತು. “ಓಹ್, ಇವರೋ ಅಭಯಾ ತೊಟ್ಟ ಮಹಿಳೆ!” ತಮ್ಮ ಮುಖವೊಂದನ್ನ ಕಾಣುವಹಾಗೆ ಬಿಟ್ಟು ಇಡೀ ದೇಹಕ್ಕೆ ಅಭಯಾ ತೊಟ್ಟಿದ್ದಾರೆ. ಕಾರಿನಿಂದ ಹೊರಗಡೆ ಇಳಿದೆ. “ಬುಕ್ಸ್?” ಎಂದು ಕೇಳಿದರು. “ಎಸ್” ಎಂದೆ. ನಲವತ್ತು ರಿಯಾಲ್ ಕೊಡಲು ಹೇಳಿದರು, ಕೊಟ್ಟೆ. ಹಣಪಡೆದು ಪುಸ್ತಕಗಳನ್ನು ಕೊಟ್ಟು ಹೊರಟುಬಿಟ್ಟರು!
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಕಂತು

Read More

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿ

ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ ‘ನೀವು ನಿಮ್ಮ ಸ್ಪರ್ಧಾಳುಗಳಿಗೆ ಕೊಟ್ಟರೆ ನೀವೇ ನಿಮ್ಮ ಸ್ಪರ್ಧಿಯನ್ನು ಬೆಳೆಸಿದಂತಾಗುವುದಿಲ್ಲವೇ?’ ಎಂದಾಗ ಆ ರೈತ ‘ನಾನು ಬಿತ್ತುವ ಬೀಜಗಳನ್ನೇ ಅಕ್ಕಪಕ್ಕದವರಿಗೂ ಕೊಟ್ಟರೆ ಫಲ ಬಿಡುವ ಸಮಯದಲ್ಲಿ ಪರಾಗಸ್ಪರ್ಶದಿಂದಾಗಿ ನನ್ನ ಹೊಲದ ಫಲವು ಉತ್ತಮವಾಗುತ್ತದೆ. ಒಂದೊಮ್ಮೆ ಅಕ್ಕಪಕ್ಕದ ಹೊಲದವರು ಕಮ್ಮಿ ಗುಣಮಟ್ಟವಿರುವ ಬೀಜಗಳನ್ನು ಬಿತ್ತಿದರೆ ಫಲ ಬಿಡುವ ಸಮಯದಲ್ಲಿ ಆ ಹೊಲದ ಪರಾಗರೇಣುಗಳಿಂದ ನನ್ನ ಹೊಲದ ಫಲವೂ ಕಮ್ಮಿಯಾಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಭಾಷೆಯೊಳಗೆ ಇನ್ನೊಂದು ಭಾಷೆ: ಸುಮಾವೀಣಾ ಸರಣಿ

ದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್ದರೆ ಚೆನ್ನಾಗಿತ್ತು. ಸುಮ್ಮನಿರಲಾರದೆ “ಇದು ಏನು ಚಟ್ನಿ” ಎಂದೆ. ಹೊಟೆಲ್ ಮಾಣಿಗೆ ಕನ್ನಡ ಅರ್ಥವಾಯಿತು ಆದರೆ ಉತ್ತರವನ್ನು ತೆಲುಗಿನಲ್ಲಿಯೇ “ಇದಿ ಪಲ್ಲಿ ಚಟ್ನಿ” ಎಂದ. ಕಸಿವಿಸಿ ಆಯಿತು “ಹೇಗ್ ಮಾಡ್ತೀರಿ?” ಅಂದೆ ಅದಕ್ಕವನು “ಪಲ್ಲಿಲನು ಧಂಚಿ, ವೆಯಿಂಚಿ, ಪುಡಿಛೇಸಿ…” ಎನ್ನುತ್ತಿದ್ದಂತೆ ವಾಕರಿಕೆ ಬರಲು ಶುರುವಾಯಿತು. ಕನ್ನಡದಲ್ಲಿ ‘ಪಲ್ಲಿ’ ಅಂದರೆ ‘ಹಲ್ಲಿ’ ಅಲ್ಲವೆ. ಆದರೂ ಬಿಡಲಿಲ್ಲ; ಗೂಗಲಮ್ಮನ ಸಹಾಯ ಪಡೆದು ನೋಡಿದರೆ ತೆಲುಗಿನಲ್ಲಿ ‘ಪಲ್ಲಿ’ ಅಂದರೆ ಕನ್ನಡದಲ್ಲಿ ‘ನೆಲಗಡಲೆ’ ಅಂತಿತ್ತು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೆರಡನೆಯ ಬರಹ ನಿಮ್ಮ ಓದಿಗೆ

Read More

ಉಲ್ಟಾಪಲ್ಟಾ ಆದ ನನ್ನ ಪ್ಲಾನು! : ಎಚ್. ಗೋಪಾಲಕೃಷ್ಣ ಸರಣಿ

ಅವರು ಎಲೆಕ್ಟ್ರಿಕ್ ಕಾಂಟ್ರಾಕ್ಟ್ ಮಾಡ್ತಾ ಇದ್ದರು, ಪಾರ್ಟ್ ಟೈಮ್ ಆಗಿ. ನೀನೂ ಇದನ್ನೇ ಮಾಡು, ದುಡ್ಡು ಚೆನ್ನಾಗಿ ಸಿಗುತ್ತೆ, ಹೇಗಿದ್ದರೂ ನಿಮ್ಮದು ಹೊಸಾ ಏರಿಯ, ಬೇಕಾದಷ್ಟು ಜನ ಮನೆ ಕಟ್ಟುತ್ತಾರೆ, ನೀನೇ ಕಾಂಟ್ರಾಕ್ಟ್ ಮಾಡಬಹುದು ಅಂತ ಹುರಿದುಂಬಿಸಿ ಏಣಿ ಹತ್ತಿಸಿದ್ದ. ಪಾರ್ಟ್ ಟೈಮ್ ಕೆಲಸ, ಅದೂ ಚೆನ್ನಾಗಿ ದುಡ್ಡು ಮಾಡಬಹುದು ಅನ್ನುವ ಹಾಗಿದ್ದರೆ ಒಂದು ಕೈ ನೋಡೇ ಬಿಡೋಣ ಅನ್ನುವ ಉತ್ಸಾಹ ತುಂಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ