Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ

ಹಳ್ಳಿಕೊಂಪೆಯ ಮೂಲಮನೆಯ ಕಾಲ ಗರ್ಭದ ಹಿಂದಿನ ದಿನಗಳಲ್ಲಿ ಯಾರ‍್ಯಾರೋ ಹಿರಿಯರು ಕಾಲವಾದಾಗ ಹೇಳಿಸುತ್ತಿದ್ದ ಗರುಡಪುರಾಣದ ವಿವರಗಳೆಲ್ಲ ಇಲ್ಲಿ ಈಗ ಜೀವನದಲ್ಲಿ ಮೊದಲ ಅನುಭವವಾಗಿ ಬಾಲ್ಕನಿಯಲ್ಲಿ ನಿಂತು ಹೊಸ ಬದುಕಿನ ಹುಡುಕಾಟವನ್ನು ನಡೆಸುತ್ತಿದ್ದ ಗಂಗಮತ್ತೆಯ ನೆನಪಿಗೆ ಬಂದು ನಿಜವೆನಿಸತೊಡಗುತ್ತಿದ್ದಂತೆ ಒಂದು ದಿನ ಪಕ್ಕದ ಫ್ಲಾಟಿನ ವಿರಸ ದಾಂಪತ್ಯದ ಸಾಫ್ಟ್ವೇರ್ ಉದ್ಯೋಗದ ಎಳೆಯ ತರುಣಿ ತನ್ನ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅಂತ್ಯವನ್ನು ಕಂಡಾಗ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ “ಮಹಾಪ್ರಸ್ಥಾನ”

Read More

ಆನಂದ ಭೋವಿ ಬರೆದ ಈ ಭಾನುವಾರದ ಕತೆ

ಅದ್ಯಾವ ಪುಣ್ಯಾತಗಿತ್ತಿ ಅಬ್ಬರಿಸಿದಳೋ ಗೊತ್ತಿಲ್ಲ “ಯಲ್ಲವ್ವ ಬಂಗಾರದ ಮಳೆ ಹರಸಾಕತ್ತಾಳ ಯಾರಿಗೆ ಸಿಗತೈತಿ ಅವರ ಬಾಳು ಬಂಗಾರ ಆಗತೈತಿ” ಇದೊಂದು ಮಾತು ಬರಸಿಡಿಲು ಬಡಿದಂಗ ಆತು. ಸೀಟಿನ ಚಿಂತ್ಯಾಗ ಮುಕರಿಬಿದ್ದಿದ್ದ ಮಂದಿ ಹುಯ್ಯಂತ ಮ್ಯಾಲಕ್ಕೆತ್ತು. ಅವಳು ಇವಳು ಯಾರಿಗೂ ಯಾರು ಕಾಣಲಿಲ್ಲ. ಹಾರಾಡಿ ಬೀಳುತ್ತಿದ್ದ ಸರದ ಗುಂಡು ಆರಿಸಲಿಕ್ಕ ಮುಗಿಬಿದ್ದರು. ಅವರ ಮ್ಯಾಲ ಇವರು ಇವರ ಮ್ಯಾಲ ಅವರು ನೋಡ ನೋಡುವದ್ರೊಳಗ ಕಾಲ್ತುಳಿದ ಗದ್ದಲ ಬಸ್ಸನ್ನು ನುಂಗಿಕೊಂಡಿತು. ಬಿಸಲಿನ ಜಳದೊಳಗ ರಕ್ತದ ವಾಸನೆ ಬಡಿಯತೊಡಗಿತು.
ಆನಂದ ಭೋವಿ ಬರೆದ ಈ ಭಾನುವಾರದ ಕತೆ “ದೇವರಿಗೂ ಒಂದು ಟಿಕಿಟು”

Read More

ಗಣಿ ಇತಿಹಾಸದ ಪುಸ್ತಕ ಸೇರಿಕೊಂಡ ಮಣಿಯ ಸಿಲಿಕೋಸಿಸ್ ಸಾವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ, “ಸ್ವಾಮಿ ಇಲ್ಲೇ ಹುಟ್ಟಿದ್ದು. ಇಲ್ಲೇ ಸಾಯುವುದು. ಆ ಕಾಲದಲ್ಲಿ ನಾವು ಮೈನಿಂಗ್ ಕಾಲೋನಿಗಳನ್ನು ಬಿಟ್ಟು ಹೊರಕ್ಕೆ ಹೋಗ್ತಾ ಇರಲಿಲ್ಲ. ಈಗ ಆಗಲ್ಲವಲ್ಲ. ಕಾಲೋನಿಗಳಲ್ಲಿ ಇರುವವರೆಲ್ಲ ಕನ್ನಡ ಮಾತಾಡ್ತಾರೆ. ಕನ್ನಡ ಕಲಿತುಕೊಂಡಿದ್ದಾರೆ. ಸಾವಿರಾರು ಜನ ಬೆಂಗಳೂರಿನಲ್ಲಿ ಸೆಟ್ಲ್ ಆಗಿದ್ದಾರೆ. ಅದೇ ರೀತಿ ಸಾವಿರಾರು ಹೆಣ್ಣುಮಕ್ಕಳು ಗಂಡುಮಕ್ಕಳು ಕೆಜಿಎಫ್‌ನಿಂದ ಬೆಂಗಳೂರಿಗೆ ದಿನನಿತ್ಯ ರೈಲ್‌ಗಳಲ್ಲಿ ಕೆಲಸಕ್ಕೆ ಹೋಗಿಬರ್ತಾರೆ. ಕಾಲ ಬದಲಾಗಿದೆ ಸ್ವಾಮಿ” ಎಂದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೇಳನೆಯ ಕಂತು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ಫೋಟೋದಲ್ಲಿ ಬಂಧಿಯಾದ ಸೆಲ್ವಂ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಶಿಲಾಸ್ಫೋಟವಾದಾಗ ಬಹುಶಃ ನೀರಿನ ಮಟ್ಟ ಒಮ್ಮೆಲೆ ಮೇಲಕ್ಕೆ ಬಂದು ಮತ್ತೆ ಕೆಳಕ್ಕೆ ಹೋದಾಗ ಮೂವರೂ ಕಳ್ಳರನ್ನು ನೀರಿನ ಅಲೆಗಳು ಸುರಂಗಗಳಲ್ಲಿ ಎಲ್ಲೋ ಆಳಕ್ಕೆ ಎಳೆದುಕೊಂಡು ಹೋಗಿರಬೇಕು. ಆಗ ಅವರ ದೇಹಗಳು ಎಲ್ಲೋ ಆಳದ ಸುರಂಗಗಳಲ್ಲಿ ಇಲ್ಲ ಸ್ಟೋಪ್‌ಗಳಲ್ಲಿ ಶಿಲೆಗಳ ಮಧ್ಯೆ ಸಿಕ್ಕಿಕೊಂಡಿರಬೇಕು ಎಂದು ಊಹಿಸಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ