Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ಮಿಂಚಿಹೋದ ಕಾಲ….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಿ ಗಣಿ ಕಾರ್ಮಿಕ ಮಣಿಯನ್ನು ಮದುವೆ ಮಾಡಿಕೊಂಡಿದ್ದು. ಮಣಿ ತಂದೆ ಸೆಲ್ವಮ್ ಅಪಘಾತದಲ್ಲಿ ಸತ್ತುಹೋಗಿದ್ದು. ಅವಳ ತಂದೆ ಅಯ್ಯಪ್ಪನಿಗೆ ಸಿಲಿಕೋಸಿಸ್ ಬಂದು ಸತ್ತುಹೋಗಿದ್ದು. ಮಣಿ ಮತ್ತು ಸೆಲ್ವಿಯ ಮಧ್ಯೆ ತೊಂದರೆಗಳು; ಹೀಗೆ ಸಾಲು ಸಾಲಾಗಿ ಅವಳನ್ನು ಕಾಡತೊಡಗಿದವು. ಇಪ್ಪತ್ತು ವರ್ಷಗಳ ಹಿಂದೆ ಸೆಲ್ವಿ ತಾನು ಬಸರಿಯಾದಾಗ ಅಪ್ಪ ಅಮ್ಮನಿಗೆ ಹೇಳಿ ಬಸರಿ ತೆಗೆಸಿ ಡಿಗ್ರಿ ಮುಗಿಸಿ ಒಂದು ಕೆಲಸಕ್ಕೆ ಸೇರಿಕೊಂಡು ಬೇರೆ ಯಾರನ್ನಾದರೂ ಮದುವೆ ಮಾಡಿಕೊಂಡಿದ್ದರೆ? ತನ್ನ ಬದುಕು ಈ ರೀತಿ ಇರುತ್ತಿರಲಿಲ್ಲ!
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ಬದುಕೆಂದರೆ ಜಟಕಾ ಬಂಡಿಯೇ ಇನ್ನೇನೂ ಅಲ್ಲ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿ ಸ್ಟೂಲ್ ಮೇಲೆ ಕುಳಿತಿರುವ ವಿಜಯ ಕೂಡ ಸಣ್ಣಗೆ ಇಳಿದುಹೋಗಿದ್ದಾಳೆ. ಆದರೂ ಅವಳ ಮುಖದ ಮೇಲಿನ ಕಾಂತಿ ಇನ್ನೂ ಒಂದಷ್ಟು ಉಳಿದುಕೊಂಡಿದೆ. ಅವಳ ಗಂಡ ಚಿನ್ನದ ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಜ್ಞಾಪಕದಂತೆ ಅವಳ ಕಿವಿಗಳಲ್ಲಿ ಚಿನ್ನದ ಓಲೆಗಳು ಕಾಣಿಸುತ್ತಿವೆ. ವಾರ್ಡ್‌ನ ಎರಡೂ ಕಡೆ ಗೋಡೆಗಳ ಪಕ್ಕ ಸಾಲಾಗಿ ಹಾಸಿರುವ ಹಾಸಿಗೆಗಳ ಮೇಲೆ ಗಣಿ ಕಾರ್ಮಿಕರು ಹಾಸಿಗೆಗಳಲ್ಲಿ ಕುಳಿತು ಮಲಗಿ ಮಾತನಾಡುತ್ತಿದ್ದಾರೆ. ಈ ವಾರ್ಡ್‌ನಲ್ಲಿ ಬರೀ ಗಣಿ ರೋಗಗಳಿಂದ ಬಳಲುತ್ತಿರುವ ಕಾರ್ಮಿಕರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ನನಸಾಗದ ಕನಸುಗಳು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ವಿಜಯ ಮತ್ತು ಅಯ್ಯಪ್ಪನಿಗೆ ವಿಷಯದ ಗಾತ್ರ ಅರ್ಥವಾಯಿತು. ಕನಕ ಟೀ ಮಾಡಿಕೊಟ್ಟು ಕುಡಿದರು. ಅಷ್ಟರಲ್ಲಿ ಮಣಿ ಬಂದ. ಸಮತಿಯನ್ನು ಕರೆದು ಒಂದು ತಟ್ಟೆಯಲ್ಲಿ ತೆಂಗಿನಕಾಯಿ ಜೊತೆಗೆ ಎಲ್ಲವನ್ನು ಇಟ್ಟು ಕೊಟ್ಟಳು. ವಿಜಯ ತೆಗೆದುಕೊಳ್ಳುತ್ತ ಈಹೊತ್ತಿನಿಂದ “ನೀವು ನಾವು ನೆಂಟರಾದೆವು” ಎಂದಳು. ಸುಮತಿ ಎಲ್ಲವನ್ನೂ ಒಂದು ಸಣ್ಣ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಕೊಟ್ಟಳು. ವಿಜಯ, ಸುಮತಿಯನ್ನು ನೋಡುತ್ತ ಮನಸ್ಸಿನಲ್ಲಿ ಏನೋ ಲೆಕ್ಕಾಚಾರ ಹಾಕಿಕೊಳ್ಳುತ್ತಾ ಹಾಗೇ ಕುಳಿತುಕೊಂಡಿದ್ದಳು. ಅಯ್ಯಪ್ಪ, “ಹೋಗೋಣವ?” ಎಂದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ