Advertisement

Category: ಸಾಹಿತ್ಯ

ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ

ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್‌ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ

ರಾತ್ರಿಯಾದರೂ ದೊಡ್ಡಪ್ಪ ಊರು ಮುಟ್ಟಿದ ಬಗ್ಗೆ ಫೋನ್ ಬರಲಿಲ್ಲ. ಆಯಾಸದಲ್ಲಿ ಮರೆತು ಹೋಗಿರಬೇಕೆಂದು ಸಮಾಧಾನಿಸಿಕೊಂಡೆ. ರಾತ್ರಿ ಎಷ್ಟೊ ಹೊತ್ತಿನವರೆಗೂ ನಿದ್ದೆ ನನ್ನ ಬಳಿ ಸುಳಿಯಲಿಲ್ಲ. ಇಂಥ ವಿಷಯಗಳಲ್ಲಿ ನಿದ್ದೆಯೆಂದೂ ಕೂಡ ಜೊತೆಗಾರನಾಗಿರುವುದಿಲ್ಲ. ಕಣ್ಣಿಗೆ ನಿದ್ದೆ ಹತ್ತಿಕೊಳ್ಳುವ ಹೊತ್ತಿಗೆ ಮುಂಜಾವು ಬಂದಿತ್ತು. ಇನ್ನೂ ಅರೆ ಮಂಪರು. ಗಾಢ ನಿದ್ದೆಯೇನ್ನಲ್ಲ. ಮೊಬೈಲ್ ರಿಂಗಣಸಿತು. ಹರೀಶ ಕಾಲ್ ಮಾಡ್ತಿದ್ದಾನೆ. ಏನು ಇಷ್ಟೊತ್ತಲ್ಲಿ ಫೋನ್? ಯಾಕೊ ಸಣ್ಣಗೆ ಭಯವಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ “ಮುಗಿಲ ದುಃಖ”

Read More

ಡಾ. ರಾಜಶೇಖರ ನೀರಮಾನ್ವಿ ಕತೆ: “ಹಂಗಿನರಮನೆಯ ಹೊರಗೆ”

ಜೀವನದ ಘಟನೆಗಳು ನಮ್ಮಿಬ್ಬರಲ್ಲಿ ಸಾಮ್ಯವನ್ನು ತೋರಿಸಿದ್ದರೂ, ಮಾನಸಿಕವಾಗಿ ನಾವಿಬ್ಬರೂ ಒಂದೊಂದು ಧ್ರುವ. ಆದರೂ ಯಾವದೋ ಆಕರ್ಷಣ ಶಕ್ತಿ ನಮ್ಮಿಬ್ಬರನ್ನು ಬಂಧಿಸಿಬಿಟ್ಟಿದೆ.
ಮೊನ್ನೆ ಶುಕ್ರವಾರದಂದು ತೀರಿಕೊಂಡ ಕನ್ನಡದ ಅಪರೂಪದ ಕತೆಗಾರ ಡಾ. ರಾಜಶೇಖರ ನೀರಮಾನ್ವಿ ಅವರ ಪ್ರಸಿದ್ಧ ಕತೆ “ಹಂಗಿನರಮನೆಯ ಹೊರಗೆ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂದೀಪ ನಾಯಕ ಕತೆ

“ದೇವಿ ನಿಮ್ಮ ಅಕ್ಕ ಹಾಗೆ ಬೇರೆ ಯಾವನದೋ ಸಂಗತಿಗೆ ಓಡಿ ಹೋಗೋದು ಬೇಡಾಗಿತ್ತು. ಮರ್ಯಾದೆಯಿಂದ ಮದುವೆಯಾಗಿ ಊರಲ್ಲೇ ಇರಬೇಕಿತ್ತು. ಅದೇ ಘನತನ ತರುವಂಥದ್ದು” ಎಂದು ಇದ್ದಕ್ಕಿದ್ದಂತೆ ಮೊದಲ ಸಲ ದೇವಿಯ ಅಕ್ಕನ ಬಗ್ಗೆ ಮಾತನಾಡ್ದಿದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂದೀಪ ನಾಯಕ ಕತೆ ಒಂಬತ್ತು, ಎಂಟು, ಎಂಟು…” ನಿಮ್ಮ ಓದಿಗೆ

Read More

ಎಲ್.ಜಿ. ಮೀರಾ ಬರೆದ ಈ ಭಾನುವಾರದ ಕತೆ

ಮನೆಯಲ್ಲಿನ ಹೆಂಡತಿಯ ಮೇಲೆ ಮುನಿದಿದ್ದ ಮಾಮ ತನಗೆ ಇನ್ನೊಂದು ಮದುವೆ ಮಾಡಬೇಕೆಂದು ತನ್ನ ಹೆಂಡತಿಯನ್ನೇ ಬಲವಂತಿಸಿದ, ನಿರ್ಮಲತ್ತೆಯ ವಿದ್ಯಾರ್ಥಿನಿಯೊಬ್ಬರನ್ನು ಮದುವೆಯಾದ ಕೂಡ. ಅದೂ ಸರಿ ಹೋಗದೆ ಮೂರನೇ ಮದುವೆಯನ್ನೂ ಆಗಿ ಅವಳಿಗೆ ಒಂದು ಮಗುವನ್ನು ಕರುಣಿಸಿದ.
ಡಾ. ಎಲ್.ಜಿ. ಮೀರಾ ಬರೆದ ಈ ಭಾನುವಾರದ ಕತೆ “ಪರದೇಸಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ