Advertisement

Category: ಸಾಹಿತ್ಯ

ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ರೂಡಿ ಯಾರು, ಏನು, ಎತ್ತ ಎಂಬುವುದು ಗೊತ್ತೇ ಇರದಿದ್ದರೂ ಯಾವುದೋ ಅಸಹಾಯಕತೆಯೊಂದು ಅವನನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಅವಳಿಗೆ ಆಗಾಗ ಅನ್ನಿಸುತ್ತಿತ್ತು. ಪ್ರತಿ ಬೆಳಗೂ ‘ಈವತ್ತು ಹೇಗಾದರೂ ಸರಿ, ಅವನನ್ನು ಕೇಳಲೇಬೇಕು’ ಎಂಬ ಪ್ರತಿಜ್ಞೆಯೊಂದಿಗೆ ಹಾಸಿಗೆಯಿಂದ ಏಳುತ್ತಿದ್ದಳು. ಆದರೆ ಹಾಗೆ ಕೇಳಬೇಕೆಂದು ಹೊರಟಾಗೆಲ್ಲಾ ಗಂಟಲಲ್ಲಿ ಒಂದು ಮುಳ್ಳು ಸಿಕ್ಕಿಹಾಕಿಕೊಂಡಂತಾಗಿ ಕೇಳಲಾಗದೆ ಇದ್ದುಬಿಡುತ್ತಿದ್ದಳು. ಹೋಗಲಿ, ತಾನು‌ ನಲವತ್ತರ ಹೊಸ್ತಿಲು ದಾಟಿದವಳು…
ಫಾತಿಮಾ ರಲಿಯಾ ಬರೆದ ಕತೆ “ರೂಡಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಹೊಸ ಜೀವಸೆಲೆ ಮತ್ತು ಹೊಸ ಹೊಳಹುಗಳು….

ರಾತ್ರಿ ನಿದ್ದೆಗೆಟ್ಟಿದ್ದಕ್ಕೆ ಬಂದಿದ್ದ ತಲೆಸುತ್ತೋ, ಹೊಟ್ಟೆಗಿಲ್ಲದೇ ಆದ ಆಯಾಸವೋ ಅಥವಾ ಹ್ಯಾಂಗೋವರೋ ಒಟ್ಟು ತಲೆ ಗಿಂ ಎಂದು ಬಹಳ ಜೋರಾಗಿ ಚಕ್ಕರ್ ಬಂದು ವಾಂತಿ ಬರುವ ಹಾಗಾಯಿತು. ಇನ್ನು ಒಂದೇ ಒಂದು ಕ್ಷಣ ನಿಂತಿದ್ದರೂ ಬಿದ್ದೇಬಿಡುತ್ತೇನೆ ಎಂದನಿಸಿತು. ಕೈಯಲ್ಲಿ ಹಸುಗೂಸಿದೆ ಎನ್ನುವುದನ್ನೂ ಮರೆತು ಮಗುವಿನ ತಲೆಯನ್ನು ಎದೆಗೆ ಅವುಚಿಸಿಕೊಂಡಿದ್ದ ಎಡಗೈಯಿಂದ ಅರವಿಂದನ ತೋಳನ್ನು ಹಿಡಿದುಕೊಳ್ಳಲು ಹೋದಳು. ಮಗುವಿನ ತಲೆಗೆ ಯಾವ ಆಧಾರವೂ ಇಲ್ಲದಂತಾಗಿ ಹಿಮ್ಮೀಟಿದಂತಾಗಿ ಜೋರಾಗಿ ಅಳತೊಡಗಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಕೊನೆಯ ಕಂತು ನಿಮ್ಮ ಓದಿಗಾಗಿ

Read More

ಮೊಗಳ್ಳಿ ಗಣೇಶ್ ಬರೆದ ಈ ಭಾನುವಾರದ ಕತೆ

ಏನೊ ಆತಂಕ. ಒಂಟಿತನ. ಈ ಓದು ಕೂಡ ಉಪಯೋಗ ಇಲ್ಲ. ಬುದ್ದಿಗೆ ಬೆಲೆ ಇಲ್ಲ. ದಡ್ಡರಿಗೇ ಎಲ್ಲೆಡೆ ದೊಡ್ಡ ದೊಡ್ಡ ಪದವಿ. ಮೂರ್ಖರು ಮೂರ್ಖರನ್ನೆ ಬೆಳೆಸುತ್ತಾರೆ. ಈ ಜಾತಿ ಕೂಪದಲ್ಲಿ ನಾನು ಏನೇ ಆಗಿದ್ದರೂ ಅದೇ ಆಗಿರುತ್ತೇನೆ. ಅದಕ್ಕಾಗಿ ಯಾಕೆ ಇಷ್ಟೆಲ್ಲ ಹೋರಾಟ? ವಿದ್ವತ್ತು? ಮನುಷ್ಯತ್ವ… ಕೊನೆಗೂ ನನಗೇನು ಉನ್ನತ ಕೆಲಸ ಸಿಗುವುದಿಲ್ಲವಲ್ಲಾ ಎಂದು ಮಂಕಾಗಿದ್ದೆ. ವಿಶ್ವಾಸ ಕುಗ್ಗುತ್ತಿತ್ತು. ಅವನು ನನ್ನ ಅಪ್ಪ ನಾಲ್ಕನೆ ಬಾರಿಗೆ ಯಾವುದೊ ಒಂದು ಹೆಂಗಸ ಒಪ್ಪಿಸಿ ಕರೆತಂದು ಮನೆಯಲ್ಲಿ ಇಟ್ಟುಕೊಂಡಿದ್ದನಂತೆ.
ಮೊಗಳ್ಳಿ ಗಣೇಶ್ ಬರೆದ ಕಥೆ “ಅವಳು ಚಿಲುಮೆ”

Read More

ಒಂದೇ ಮನೆಯ ಹಲವು ಮನಗಳು….

ಫೋನಿನಲ್ಲಿ ವಿನಯನ ಜತೆ ಮಾತಾಡುತ್ತಿದ್ದವನು ಅಲಿಶಾ ಉಸಿರಾಡುತ್ತಿದ್ದಾಳಾ? ಆಕೆ ಮಾತಾಡುತ್ತಿದ್ದಾಳಾ? ಮೂವತ್ತು ಸೆಕಂಡುಗಳ ಕಾಲ ಆಕೆಯ ಉಸಿರಾಟ ಮತ್ತು ನಾಡಿಬಡಿತ ನೋಡಿ ಹೇಳು ಎಂದು ಅವನ ಪ್ರೋಟೊಕಾಲಿನಲ್ಲಿದ್ದಂತೆ ವಿನಯನಿಗೆ ಹೇಳುತ್ತಿದ್ದ. ವಿನಯ ‘ನಾನೂ ಒಬ್ಬ ಡಾಕ್ಟರು. ನನ್ನ ಹೆಂಡತಿಯೂ ಡಾಕ್ಟರು. ಅವಳಿಗೇನೂ ಆಗಿಲ್ಲ. ಅವಳಿಗೆ ತಕ್ಷಣ ಹೆರಿಗೆಯಾಗಬೇಕು. ನೀನು ತಕ್ಷಣ ಆ್ಯಂಬುಲೆನ್ಸ್ ಕಳಿಸಲಿಲ್ಲ ಎಂದರೆ ನಾನೇ ಡ್ರೈವ್ ಮಾಡಿಕೊಂಡು ಆಸ್ಪತ್ರೆಗೆ ಹೋಗುತ್ತೇನೆ’…
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಏಳನೆಯ ಕಂತು ನಿಮ್ಮ ಓದಿಗಾಗಿ

Read More

ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಹೋಗಿ ನೋಡಿ ಅಪ್ಪನೆಂದು ಗುರುತು ಹಿಡಿದ. ಆತನ ಮೇಲಿದ್ದ ಕೋಪ ಆರಿರಲಿಲ್ಲ. ಜೀವನವಿಡೀ ಬೇರೆಯವರ ಪಾಪ ಕಳೆಯಲು ದಾನಗಳು ತೆಗೆದುಕೊಂಡು ಜಪತಪಗಳಲ್ಲಿ ಕಾಲ ಕಳೆಯುತ್ತಿದ್ದ ಅಪ್ಪ, ತನ್ನ ಅಪರಕರ್ಮವೂ ಸರಿಯಾಗಿ ಆಗದೆ ಯಾವುದೋ ತಿಳಿಯದ ನಗರದಲ್ಲಿ ಅನಾಥ ಹೆಣದಂತೆ ಬೂದಿಯಾಗಿದ್ದ. ಯಾರದೋ ಸಾವಿಗೆ ಗರುಡ ಪುರಾಣ ಓದುತ್ತಿದ್ದ ಅಪ್ಪ ಸತ್ತಾಗ ಅವನಿಗಾಗಿ ಯಾರೂ ಅದನ್ನು ಓದದಂತೆ ರಮೇಶ ನೋಡಿಕೊಂಡ.
ಶ್ರೀ ಡಿ.ಎನ್. ಬರೆದ ಕತೆ “ಪಾಪ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ