Advertisement

Category: ಸಾಹಿತ್ಯ

ಡಾ. ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ತುಸು ಹೊತ್ತಿನ ಬಳಿಕ ರಾತ್ರಿಯ ನೀರವವನ್ನು ಭೇದಿಸಿಕೊಂಡು ‘ಧಡ್’ ಎಂದು ಏನೋ ಬಿದ್ದ ಸದ್ದು. ಬೆನ್ನಿಗೇ ಕ್ಷೀಣವಾಗಿ, ಎದೆಯನ್ನೇ ಕೊರೆಯುವಂಥ ಬಿಕ್ಕಳಿಕೆ ಕೇಳಿಸಿದಾಗ ದಡಕ್ಕನೆ ಎದ್ದು ಕುಳಿತೆ. ಏನೂ ಅರ್ಥವಾಗಲಿಲ್ಲ. ಕಾಲುಗಳನ್ನು ನೆಲಕ್ಕಪ್ಪಳಿಸುತ್ತಾ ಹೊರಗಿಳಿದು ನಡೆಯುತ್ತಿರುವ ಅಣ್ಣನನ್ನು ಕಂಡಾಗ ಮನೆಯಲ್ಲಿ ಬೀಡುಬಿಟ್ಟಿದ್ದ ವಿಷಣ್ಣ ಭಾವ ನನ್ನೊಳಗೂ ತುಂಬತೊಡಗಿತು. ಹೊಸ ರವಿಕೆಯನ್ನು ಕಂಡ ಅಣ್ಣ ‘ಯಾರು ತಂದ್ಕೊಟ್ಟದ್ದು?’ ಎಂದು ಕೇಳಿರಬೇಕು. ಡಾ. ಸುಭಾಷ್‌ ಪಟ್ಟಾಜೆ ಬರೆದ ಕತೆ “ಗತಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಹೌದು.. ಇಡೀ ಜಗತ್ತೇ ಸ್ಮಾರ್ಟಾಗ್ತಾ ಇದೆ!

ಸೂರ್ಯ ಕೆಂಪಗಾಗುತ್ತಿದ್ದ. ಹಿಂದಿನ ಸುಮಾರು ಎರಡೂವರೆಕೆರೆ ಜಾಗದಲ್ಲಿ ಸಪಾಟಾಗಿಸಿದ ಹುಲ್ಲು. ಋತುಮಾನಕ್ಕನುಗುಣವಾಗಿ ತನ್ನ ಬಣ್ಣವನ್ನು ಕಳೆದುಕೊಳ್ಳುತ್ತಿತ್ತು. ಅದರ ಹಿಂದೆ ನಿಂತ ನೂರೈವತ್ತು ಮೇಪಲ್ ಮರಗಳು. ಎಲ್ಲವೂ ಎಲೆಗಳನ್ನು ಕಳಕೊಳ್ಳುತ್ತಾ ಮುಂಬರುವ ಹಿಮವನ್ನು ಎದುರಿಸಲು ಬತ್ತಲಾಗುತ್ತಿದ್ದವು. ಕೆಳಗೆ ಬಿದ್ದ ಹಣ್ಣೆಲೆಗಳ ಮೇಲಿನ ಸಂಜೆಯ ತೇವ ವಾತಾವರಣಕ್ಕೆ ಕೊಟ್ಟಿದ್ದ ಒಂದು ಸಿಹಿಯಾದ, ಒಗರಾದ ವಾಸನೆ ಸನ್‌ರೂಮಿನ ಕಿಟಕಿಯ ಸೀಲುಗಳ ಮೂಲಕ ಮನೆಯೊಳಗೆ ಹಣಿಕಿಹಾಕಿತ್ತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ್ ಬರೆದ ಕತೆ

ಪೂಜೇರಿ ಸಂಗಪ್ಪನ ಸಾವಿನಿಂದಾಗಿ ಕಂಗೆಟ್ಟಿದ್ದ ಕಪಿಲೆ, ಚಪ್ಪರದಿಂದ ಎದ್ದು ಹೋಗಿ ಆತನ ಮನೆಯ ಮುಂದೆ ನಿಂತಿತು. ಆಗ, ಹೊರಗೆ ಮನೆ ಮುಂದೆ ಗದಕಟ್ಟು ಕಟ್ಟಿ ಕೂಡ್ರಿಸಿದ್ದ ಪೂಜೇರಿ ಸಂಗಪ್ಪನ ಹೆಣವನ್ನು ಕಂಡು, ದುಃಖ ತಡೆಯಲಾಗದೆ ನೆರೆದ ಜನರ ನಡುಕ ತೂರಿಕೊಂಡು ಮುಂದೆ ಹೋಗಿ ಆತನನ್ನು ಮೂಸಿ ನೋಡಿ ತನ್ನ ಮರುಕ ವ್ಯಕ್ತಪಡಿಸಿತು. ಆಮೇಲೆ, ಅದು ಹಂಗೇ ಹಿಂದೆ ಸರಿದು ಜನರತ್ತ ಬಂದು ನಿಂತಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ ಬರೆದ ಕತೆ “ಕಪಿಲೆ” ನಿಮ್ಮ ಈ ಭಾನುವಾರದ ಓದಿಗೆ

Read More

ಇಲ್ಲಿ ಎಲ್ಲವೂ ಸರಿ ಇದ್ಯಾ…?

ವಿನಯ ಅಲಿಶಾಳಿಗೆ ಪ್ರಪೋಸ್ ಮಾಡಿದ ಎಂಬ ಸುದ್ದಿ ಕೇಳಿದ ಮೂರು ದಿನಕ್ಕೇ ಅರವಿಂದನಿಗೆ ಲಘು ಹೃದಯಾಘಾತವಾಗಿತ್ತು. ಶಿಕಾಗೋದಿಂದ ಓಡಿಬಂದಿದ್ದರು, ವಿನಯ ಮತ್ತು ಅಲಿಶಾ ಇಬ್ಬರೂ. ಮನಸ್ಸಿನ ವ್ಯಾಪಾರವೇ ವಿಚಿತ್ರ. ವಿನಯ ಅಲಿಶಾಳನ್ನು ಮದುವೆ ಮಾಡಿಕೊಳ್ಳುವುದು ಗ್ಯಾರಂಟಿ ಎಂದು ಗೊತ್ತಿದ್ದರೂ ವಿನಯನ ಪ್ರಪೋಸಲ್ಲಿಗೂ, ಅರವಿಂದನ ಹಾರ್ಟ್ ಅಟ್ಯಾಕಿಗೂ ಕಾರ್ಯಕಾರಣ ಸಂಬಂಧ ಹುಡುಕಲು ವೈದ್ಯಕೀಯ ಪುರಾವೆಗಳ ಸಾಥ್ ಕೇಳಿದ್ದಳು, ಸುಕನ್ಯಾ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಎರಡನೆಯ ಕಂತು ನಿಮ್ಮ ಓದಿಗಾಗಿ

Read More

ಗುರುಪ್ರಸಾದ್‌ ಕಾಗಿನೆಲೆ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್‌” ಇಂದಿನಿಂದ ಶುರು

‘ಥ್ಯಾಂಕ್ಸ್ ಗಿವಿಂಗ್’ ಈ ನೀಳ್ಗತೆಯನ್ನು ಬರೆದು ಸುಮಾರು ಎಂಟುವರ್ಷಗಳೇ ಆಗಿವೆ. ‘ಹಿಜಾಬ್’ ಕಾದಂಬರಿಯ ಬರವಣಿಗೆ ನನ್ನನ್ನು ಬಸವಳಿಸಿತ್ತು. ಕೆಲವೊಮ್ಮೆ ಏನೂ ಬರೆಯಲಾರೆ ಅನ್ನಿಸಿತ್ತು. ತಿಂಗಳುಗಟ್ಟಲೆ ಬರವಣಿಗೆಯನ್ನು ನಿಲ್ಲಿಸಿದ್ದೆ. ಅದನ್ನು ಮರು ಉದ್ದೀಪನಗೊಳಿಸಿಕೊಳ್ಳಲು ಅದಕ್ಕೆ ವಸ್ತು, ವಿಷಯ ಮತ್ತು ನಿರೂಪಣೆಯಲ್ಲಿ ಸಂಪೂರ್ಣ ಬೇರೆಯಾಗಿರುವುದನ್ನು ಬರೆಯಬೇಕೆನ್ನಿಸಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ಹೊಚ್ಚಹೊಸ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್” ಕೆಂಡಸಂಪಿಗೆಯಲ್ಲಿ ಕೆಲವು ಕಂತುಗಳಲ್ಲಿ ಪ್ರತಿ ಶನಿವಾರ ಪ್ರಕಟವಾಗಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ