Advertisement

Category: ಸಾಹಿತ್ಯ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಆನಂದನಿಗೆ ತಾನು ಅಭ್ಯಸಿಸುತ್ತಿದ್ದ ಕೆಲವು ಪುಸ್ತಕಗಳಲ್ಲಿ ‘ವೀರ್ಯನಾಶವೇ ಮೃತ್ಯು, ಬ್ರಹ್ಮಚರ್ಯವೇ ಜೀವನ’ ಎಂಬ ಉಕ್ತಿಗಳು ಪ್ರಭಾವ ಬೀರಿದವು. ಆದರೆ ‘ಎಲ್ಲ ಹೆಣ್ಣುಮಕ್ಕಳನ್ನು ಸೋದರಿಯರಂತೆ ಕಾಣುವುದು ದುಸ್ಸಾಧ್ಯ’ ಎಂಬ ಅನುಭವೂ ಕಾಡುತ್ತಿತ್ತು. ಅನೇಕ ಟೀಚರ್‌ಗಳಿಗೆ ಅಚ್ಚರಿಯಾಗುವಂತೆ ಪಿ.ಯು.ಸಿಯಲ್ಲಿ ಕಾಮರ್ಸ್ ತೆಗೆದುಕೊಂಡ. ಬಿ.ಕಾಂ. ಮಾಡಲು ಖರ್ಚು ಕಡಿಮೆ. ಬೇಗ ಕೆಲಸ ಸಿಗುವುದು. ತಮ್ಮನಾದ ಶೃಂಗ ಬೇಕಾದರೆ ಬಿ.ಇ. ಮಾಡಲಿ. ಅಪ್ಪನಿಗೆ ವಿ.ಆರ್.ಎಸ್. ಸಾಧ್ಯತೆ ಹೆಚ್ಚಿರುವುದರಿಂದ ತಾನು ಬೇಗನೆ ದುಡಿದು ಮನೆ ನೋಡಿಕೊಳ್ಳಬೇಕು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ

ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”

Read More

ಲಿಂಗರಾಜ ಸೊಟ್ಟಪ್ಪನವರ್‌ ಬರೆದ ಈ ಭಾನುವಾರದ ಕತೆ

ಮಜೀದ್ ಕ್ಯಾಷಲ್‌ನ ಭಾರಕ್ಕಿಂತಲೂ ಭಾರವಾದ ಹೃದವನ್ನಿಟ್ಟುಕೊಂಡು ನಾನು ಬಾಳುತ್ತಿರುವುದನ್ನು ಅವರಿಗೆ ಹೇಳಲು ಆಗುತ್ತಿಲ್ಲ. ಮುಂದೆ ಹೇಳದಲೆ ಹೋಗಬಹುದು. ಅವರು ಅದನ್ನು ನಂಬುತ್ತಾರೋ ಇಲ್ಲವೋ. ನಾನು ಯಾರು ಎಂಬುದನ್ನು ಅಷ್ಟಾಗಿ ವಿಚಾರಿಸಲೂ ಹೋಗಲೇ ಇಲ್ಲ. ಅವರೊಂದಿಗೆ ನಾನು ಇರಲು ಅಷ್ಟು ಸಹಜವಾಗಿ ಒಪ್ಪಿಕೊಂಡುಬಿಟ್ಟರು. ನಾನು ಪ್ರಾಗ್‌ನಿಂದ ಬರುವ ಮುನ್ನ ಅವರೊಂದಿಗೆ ಬಾಂಬೆಯ ನಜ್ಮಾ ಎಂಬ ಚಾಕರಿಯವಳು ಮತ್ತು ಅವಳ ಸಂಸಾರ ಇತ್ತು.
ಲಿಂಗರಾಜ ಸೊಟ್ಟಪ್ಪನವರ್‌ ಬರೆದ ಕತೆ “ಪಾತ್ರ” ನಿಮ್ಮ ಭಾನುವಾರದ ಓದಿಗೆ

Read More

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಯಶ್ರೀ ಕಾಸರವಳ್ಳಿ ಬರೆದ ಕತೆ

ಹಾಗೆ ನೋಡಿದರೆ, ಅವನು ಇರುವೆ ತಿಂದಿದ್ದು ಇಂದೇ ಮೊದಲಿರಲಿಕ್ಕಿಲ್ಲ. ಈ ಮೊದಲೇ ಅವನಿಗೆ ಅರಿವಿಲ್ಲದಂತೆ ಅದೆಷ್ಟು ಇರುವೆ ಅವನ ಹೊಟ್ಟೆಯೊಳಗೆ ಹೊಕ್ಕು ಹೊರ ಹೋಗಿದ್ದವೋ ಯಾರಿಗೆ ಗೊತ್ತು? ಅವನೂರಿನ ಆಲೆಮನೆ ಸಂದರ್ಭದಲ್ಲಂತೂ ಇರುವೆ ಜೊತೆ ದೊಡ್ಡ ದೊಡ್ಡ ಗೊದ್ದಗಳೆಲ್ಲಾ ಮನೆ ತುಂಬಾ ಹರಿದಾಡುತ್ತಿದ್ದವು. ಉಪ್ಪರಿಗೆಯಲ್ಲಿ ಜೋಡಿಸಿಟ್ಟ ಬೆಲ್ಲದ ತಗಡಿನ ಡಬ್ಬಗಳಿಗೆ ರಾಶಿ ಇರುವೆಗಳು ಮುತ್ತಿಕೊಳ್ಳುತ್ತಿದ್ದರಿಂದ, ಅವನಪ್ಪ ಇರುವೆಗಳನ್ನು ಓಡಿಸಲು ಡಬ್ಬದ ಸುತ್ತಲೂ ಡಿ.ಡಿ.ಟಿ. ಪುಡಿಯನ್ನು ದುಂಡಗೆ ಚೆಲ್ಲಿರುತ್ತಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ