Advertisement

Category: ಸಾಹಿತ್ಯ

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಭಿನ್ನ”

ಹೀಗೆ ಅಚಾನಕ್ಕಾಗಿ ಕೆಲಸ ಬಿಡುವ ನಿರ್ಧಾರ ತಿಳಿಸಿ ಹಿಂತಿರುಗಿ ನೋಡದೆ ಬೀಸುನಡಿಗೆಯಲ್ಲಿ ಎದ್ದು ಬರಬೇಕೆನ್ನುವ ತೀರ್ಮಾನ ಹಿಂದಿನ ರಾತ್ರಿ ಮೊಳಕೆಯೊಡೆದು ಬೆಳೆದು ಬೆಳೆದು ಬೃಹದಾಕಾರವಾಗಿ ಇವತ್ತು ಹರಿಣಿಯ ಮುಂದೆ ಕುಳಿತಾಗ ಹೇಳಲೇಬೇಕಾದ ಒತ್ತಡ ಸೃಷ್ಟಿಸಿತ್ತು. ಎಂದಿನಂತೆ ಮೀಟಿಂಗ್ ರೂಮಲ್ಲಿ ಸಿಗದೆ ತನ್ನ ಕ್ಯಾಬಿನ್ನಿಗೆ ಕರೆಸಿ ಕೂರಿಸಿದಾಗಲೇ ಹರಿಣಿ ತನ್ನ ಅಧಿಕಾರ ಪ್ರದರ್ಶನ ಮಾಡಿಯೇ ತೀರುವ ಸೂಚನೆ ಸಿಕ್ಕಿತ್ತು.
ಎಸ್. ನಾಗಶ್ರೀ ಅಜಯ್ ಹೊಸ ಕಥಾ ಸಂಕಲನ “ಕಡೆ ಹಾಯ್ವ ದೋಣಿ”ಯ ಒಂದು ಕತೆ “ಭಿನ್ನ”

Read More

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ”

ಸಿದ್ದಪ್ಪ ಮಾಸ್ತರರ ಮನೆಯ ದೃಶ್ಯ ಮಾತ್ರ ಸಂಪೂರ್ಣ ಬೇರೆಯಾಗಿತ್ತು.ಅಲ್ಲಿ ಯಾವುದೇ ಗಡಿಬಿಡಿಯಿರಲಿಲ್ಲ, ಹೊಗೆಯಿರಲಿಲ್ಲ, ಕೆಮ್ಮಿನ ಸದ್ದಿರಲಿಲ್ಲ. ಮಾಸ್ತರು ಬೆಳಿಗ್ಗೆ ಐದು ಗಂಟೆಗೆ ಎದ್ದು ತಣ್ಣೀರಿನ ಸ್ನಾನ ಮುಗಿಸಿ, ಶುಭ್ರವಾದ ಬಟ್ಟೆ ಧರಿಸಿ ಅಡುಗೆಮನೆಗೆ ಬರುತ್ತಿದ್ದರು. ಹಳೆಯ ಸ್ಟವ್‌ನ ನಾಬ್ ಅನ್ನು ಮೃದುವಾಗಿ ತಿರುಗಿಸುತ್ತಿದ್ದರು. ‘ಚಿಕ್’ ಎಂಬ ಸದ್ದಿನೊಂದಿಗೆ, ಅಲ್ಲಿ ನೀಲಿ ಜ್ವಾಲೆ ಮೃದುವಾಗಿ, ತಾಳಬದ್ಧವಾಗಿ ಉರಿಯಲು ಶುರುವಾಗುತ್ತಿತ್ತು. ಅವರ ಪತ್ನಿ ಶಾಂತಮ್ಮ, ಆ ನೀಲಿ ಜ್ವಾಲೆಯ ಮೇಲೆ ಹಬೆಯಾಡುವ ಮೃದುವಾದ ಇಡ್ಲಿ ಮತ್ತು ಪರಿಮಳ ಬೀರುವ ಸಾಂಬಾರ್ ಮಾಡುತ್ತಿದ್ದರು.
ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ” ನಿಮ್ಮ ಓದಿಗೆ

Read More

ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು”

ನೆತ್ತಿಯ ಮೇಲಿನ ಕಣ್ಣ ಸ್ವಾಮೀಜಿ ಈಗ ಸಮಾಧಾನದಲ್ಲಿದ್ದು ಬೆವರುವುದನ್ನು ನಿಲ್ಲಿಸಿದ್ದರು. ಉಂಗುರಗಳನ್ನು ಹಾಕಿದ್ದ ಹಿತ್ತಾಳೆ ಚೊಂಬಿನ ನೀರನ್ನು ಇಬ್ಬರಿಗೂ ತೀರ್ಥದಂತೆ ಕೊಟ್ಟು ತಾವೂ ಬಲಗೈ ಗೆ ಬಗ್ಗಿಸಿಕೊಂಡರು. ಸ್ವಾಮೀಜಿ ಏನು ಮಾಡುತ್ತಾರೋ ಅದನ್ನೇ ಮಾಡಲು ತಯಾರಾದ ದಂಪತಿಗಳು ಅವರನ್ನೇ ನೋಡುತ್ತಿದ್ದರು. ಸ್ವಾಮೀಜಿ ನೀರಿದ್ದ ಕೈಯನ್ನು ಎರಡೂ ಕಣ್ಣುಗಳಿಗೆ ಒತ್ತಿಕೊಂಡು ಗಟಕ್ಕೆಂದು ಆ ನೀರನ್ನು ಕುಡಿದರು. ನಂತರ ಅಂಗೈಯನ್ನು ಮುಂಡಾಸಿನ ಬಳಿ ತಗೊಂಡುಹೋದರು.
ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು” ನಿಮ್ಮ ಓದಿಗೆ

Read More

ವಾಸುದೇವ ಕೃಷ್ಣಮೂರ್ತಿ ಬರೆದ ಈ ಭಾನುವಾರದ ಕತೆ “ಪುನರಪಿ ಜನನಿ ಜಠರೇ ಶಯನಂ”

“ನಮ್ಮ ಅನಾಮಿಕೆ ರೂಮನ್ನು ಕ್ವಾರಿಯ ಸುಮಾರು 80 ಅಡಿ ಒಳಗಿನ ಹಳ್ಳಕ್ಕೆ ಹಾಕಿ ಕಲ್ಲು, ಇದ್ದಲು, ಸ್ಕ್ರಾಪ್ ಮೆಟೀರಿಯಲ್ಸ್‌ಗಳನ್ನು ಹೇಗೆ ತುಂಬಬೇಕೆಂದು ಬಹಾದ್ದೂರ್‌ಗೆ ತಯಾರಿಮಾಡಿ, ನಮ್ಮನ್ನು ಒಂದು ತಿಂಗಳ ನಂತರ ಹಳ್ಳದಿಂದ ತೆಗೆಯಬೇಕೆಂದು ಸುಮ್ಮನೆ ಹೇಳಿದ್ದೆ. ನನಗೆ ಖಾತ್ರಿಯಾಗಿತ್ತು ಒಂದು ತಿಂಗಳ ನಂತರ ಯಾವ ಜೀವಿಗಳು ಭೂಮಿಯ ಮೇಲೆ ಇರಲು ಸಾಧ್ಯವೇ ಇಲ್ಲ ಎಂದು. ಅವನ ಜೊತೆ ಅವನು ಬದುಕಿರುವವರೆಗೂ ಮಾತನಾಡಲು ವಾಕಿ- ಟಾಕಿ ಕೊಟ್ಟೆ. ಅವನನ್ನು ಗಟ್ಟಿಯಾಗಿ ಅಪ್ಪಿ, ಅವನು ಮತ್ತು ಅವನ ಸಂಗಡಿಗರಿಗೆಲ್ಲ ದೀರ್ಘದಂಡ ನಮಸ್ಕಾರ ಮಾಡಿದಾಗ….”
ವಾಸುದೇವ ಕೃಷ್ಣಮೂರ್ತಿ ಬರೆದ ಕತೆ “ಪುನರಪಿ ಜನನಿ ಜಠರೇ ಶಯನಂ”

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”

ನಾನು ಭಯಪಟ್ಟ ಸಮಯ ಕೊನೆಗೂ ಬಂತು… ಬ್ರೂನೊವನ್ನು ಮೆರ್ಸಿ ಕಿಲಿಂಗ್ ಮಾಡುವ ಸಮಯ… ನಾನು ಬ್ರೂನೋ ಕಡೆಗೆ ದಯೆಯಿಂದ ನೋಡಿದೆ. ಅದು ಹಿಂದಿನಂತೆ ನನ್ನನ್ನು ಗುರುತಿಸುತ್ತಿಲ್ಲ. ತನ್ನ ತುಟಿಗಳನ್ನು ಚಾಚಿ ನಗುವುದು ಮರೆತಿದೆ. ಚುರುಕಾಗಿ ಚಲಿಸುತ್ತಿದ್ದ ಹಿಂದಿನ ಬ್ರೂನೊ ಇಲ್ಲ ಈಗ. ಅದರ ಚಲನೆಗಳಲ್ಲಿಯೂ, ವ್ಯವಹಾರದಲ್ಲಿಯೂ ಬಹು ಬದಲಾವಣೆಗಳು. ಅದು ಈಗ ವೈದ್ಯಶಾಸ್ತ್ರ ಸಂಶೋಧನೆಗೆ ಕೆಲಸಕ್ಕೆ ಬರದ ಪ್ರಾಣಿ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”‌

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ