Advertisement

Category: ಸಾಹಿತ್ಯ

ಅಕ್ಷತಾ ಕೃಷ್ಣಮೂರ್ತಿ ಬರೆದ ಭಾನುವಾರದ ಕತೆ ‘ಅಬ್ಬೋಲಿ’

”ಕಾಳಿ ನದಿ ಆಣೆಕಟ್ಟಿನ ಕೆಲಸ ನೋಡಿಕೊಳ್ಳುವ ಅಧಿಕಾರಿಗಳು ರಾತ್ರಿ ಊಟಕ್ಕೆ ಬರುತ್ತಿದ್ದರು. ಅವರಿಗೆ, ‘ಒರಿಜನಲ್ಲೂ ಮತ್ತೆಲ್ಲೂ ಸಿಗದು.ತಾಜಾ ಮಾಲು’ ಎಂದು ಕಳ್ಳು ಮಾರಿ ಹಣ ವಸೂಲಿ ಮಾಡುತ್ತಿದ್ದ. ಅದರ ಅರ್ಧ ಪಾಲು ಸಡಗೋನಿಗೂ ಹೋಗುತ್ತಿತ್ತು.ಇಂತಹುದೆಲ್ಲ ವ್ಯವಹಾರ ಮಾಡುತ್ತಾ ಸಡಗೋ ಕಳ್ಳಿನ ದಾಸನಾದ. ಡಿಸೆಂಬರನಿಂದ ಫೆಬ್ರುವರಿಯವರೆಗು ಸಿಗುವ ಕಳ್ಳು ಕುಡಿಯುತ್ತ ಕಾಡಿನ ಯಾವುದೊ ಮರದ ಅಂಚಲ್ಲಿ…”

Read More

ಕ್ರೌರ್ಯ-ಹಿಂಸೆಯ ಅನಾವರಣಕ್ಕೆ ಕಾರಣವೇ ಬೇಕಿಲ್ಲ

ಶಶಿಧರ್ ಹಾಲಾಡಿ ಅವರು ಬರೆದ ‘ಕಾಲಕೋಶ’ ಕಾದಂಬರಿಯ ಹರವು 1947 ರಿಂದ ಪ್ರಾರಂಭವಾಗಿ 1984ರ ವರೆಗೂ ಮುಂದುವರೆದಿದೆ.  2002ರ ಗುಜರಾತ್ ಹಾಗೂ ಅದಕ್ಕೂ ನಂತರ ಬರಬಹುದಾದ ಅನೇಕ ವಿಪ್ಲವಗಳ ಕುರಿತಾದ ಮುನ್ಸೂಚನೆಯೂ ಈ ಕಾದಂಬರಿಯಲ್ಲಿದೆ. ಮನುಷ್ಯ ಮೂಲತಃ ಸಂಘಜೀವಿ ಎನ್ನುವದಕ್ಕೇ ಅನುಮಾನ ಬರುವ ಅನೇಕ ಸಂಗತಿಗಳನ್ನು ಇಂದು ನಾವು ಜನಾಂಗೀಯ ಹಿಂಸೆಯಲ್ಲಿ ಕಾಣುತ್ತೇವೆ. ಕಥಾನಾಯಕನ..”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ

“ಗೆಯ್ಮೆ ಮಾಡುತ್ತಲೇ ಬದುಕು ಕಟ್ಟಿಕೊಂಡವನು ಜಯಂತ ಪೂಜಾರಿ. ಶಾಲಾ ದಿನಗಳಿಂದಲೇ ಕಬಡ್ಡೀ ಜಯಂತ ಎಂದೇ ಹೆಸರು ಪಡೆದವನು. ಅವನಿದ್ದಲ್ಲಿ ಎಂತಹ ಜಡಬರತನೂ ಪುಟಿದೇಳಲೇಬೇಕು ಅಂತಹ ಪಾದರಸ. ದೇವ ನಗರಿಯಿಂದ ಹತ್ತು ಮೈಲು ದೂರದ ಏಯ್ಡೆಡ್ ಹೈಸ್ಕೂಲ್‌ನಲ್ಲಿ ದಿನ ಗುತ್ತಿಗೆಗೆ ಪಿ.ಟಿ. ಮೇಷ್ಟ್ರಾಗಿ ಸೇರಿದಂದಿನಿಂದ ವಿದ್ಯಾರ್ಥಿಗಳನ್ನು ಕಂಬಳದ ಕೋಣಗಳಂತೆ ಹುರಿಗೊಳಿಸುತ್ತಾನೆಂದುಪ್ರಸಿದ್ದಿ ಪಡೆದಿದ್ದ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ ‘ಕಾಳಿಂದಿ ಮಡು’

Read More

ಬೆನ್ನ ಮೇಲೆ ಇಮಾರತಿನ ಭಾರ; ಒಡಲೊಳಗೊಂದು ಪುಟ್ಟ ಝರಿ

“ನಿನ್ನ ಹೆಸರೇನು?” ಎಂದು ಸಂತೆಯಲ್ಲಿ ತನ್ನ ಹೆಸರು ಕೇಳಿದ ತರುಣಿ ಬ್ಲಿಮುಂಡಾಳ ಹಿಂದೆ ಬಲ್ತಸಾರ್ ನಡೆದು ಬಂದಿದ್ದಾನೆ. ಆಕೆಯ ಮನೆಯಲ್ಲೇ ಇಬ್ಬರೂ ಒಂದಾಗಿ ಜೀವನ ನಡೆಸುತ್ತಿದ್ದಾರೆ. ಮೊದಲ ದಿನವೇ ಬ್ಲಿಮುಂಡಾಳ ವಿಚಿತ್ರ ಅಭ್ಯಾಸವನ್ನು ಬಲ್ತಸಾರ್ ಕಾಣುತ್ತಾನೆ. ರಾತ್ರಿಯೇ ಹಾಸಿಗೆಯ ಪಕ್ಕದಲ್ಲಿ ಬ್ರೆಡ್ಡಿನ ತುಂಡೊಂದನ್ನು ತೆಗೆದಿಟ್ಟುಕೊಂಡು ಮುಂಜಾನೆ ಕಣ್ತೆರೆಯುವ ಮೊದಲೇ ಬ್ಲಿಮುಂಡಾ ಆ ಬ್ರೆಡ್ಡನ್ನು ತಿಂದು ಮುಗಿಸಿಯೇ ಕಣ್ಬಿಡುತ್ತಾಳೆ.”
1998ರಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಪೋರ್ಚುಗೀಸ್ ಭಾಷೆಯ ಬರಹಗಾರ…

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ