Advertisement

Category: ವಾರದ ಕಥೆ

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ

Read More

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ”

ಅರೆ! ಎಲ್ಲರೂ ಅವರವರ ಕೆಲಸಗಳಲ್ಲಿಯೇ ಕಳೆದುಹೋಗಿದ್ದಾರೆ ಇಲ್ಲಿ. ಯಾರಿಗೂ ಹೊರಗಡೆ ಏನು ನಡೆಯುತ್ತಿದೆ ಅನ್ನುವುದರ ಪರಿವೇ ಇಲ್ಲ. ಅದರ ಅಗತ್ಯವೇ ಇಲ್ಲ ಅನ್ನುವಷ್ಟೂ ಕ್ಷುಲ್ಲಕ ಸಂಗತಿಗಳೆ ಅವೆಲ್ಲಾ? ರಸ್ತೆಯ ತುಂಬಾ ಬದುಕಿನ ನಿತ್ಯ ವ್ಯಾಪಾರ ಅದೆಷ್ಟು ಸಹಜ ಅನ್ನುವ ರೀತಿಯಲ್ಲಿ ನಡೆಯುತ್ತಿದೆ. ಪಕ್ಕದಲ್ಲಿ ಬಾಂಬ್ ಬಿದ್ದರೂ ನಮ್ಮ ಮನಗೆ ಬಿದ್ದಿಲ್ಲ ತಾನೇ ಅನ್ನುವ ಹಾಗೆ ತಮ್ಮತಮ್ಮ ಕೆಲಸಗಳಲ್ಲಿ ತೊಡಗುತ್ತಾರಂದ್ರೆ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ” ನಿಮ್ಮ ಓದಿಗೆ

Read More

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ