Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ

ಸುನಂದಕ್ಕಗೆ ಮದುವೆಯಾಗಿ ಒಂದು ವಾರವೂ ಆಗಿರಲಿಕ್ಕಿಲ್ಲ. ದಿವಾಕರ ಭಾವ ಅವಳಿಗೆ ಉದ್ದದ ಹೆರಳನ್ನು ಕತ್ತರಿಸಲು ಆಜ್ಞೆಮಾಡಿದ್ದು! ನಗುವನ್ನೆ ಕಳೆದುಕೊಂಡಂತಿದ್ದ ಸುನಂದಕ್ಕ ತನ್ನ ಹೆರಳನ್ನು ಮೋಟು ಜಡೆ ಮಾಡಿಸಿಕೊಂಡು ‘ಅನೂ ಪುಟ್ಟಾ’ ಎಂದು ಯಾವತ್ತೂ ಕರೆವಂತೆ ‘ಅಮ್ಮಗೆ ಹೇಳು ಇನ್ನು ಮುಂದೆ ನನಗೆ ಜಡೆಹಾಕುವಾಗ ಯಾವತ್ತೂ ಕೈ ಸೋಲು ಬರುವುದಿಲ್ಲ’ ಅಂದಿದ್ದಳು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ “ಅರ್ಥವಾಗುತ್ತಿದೆ ಎಲ್ಲ ಮೆಲ್ಲ ಮೆಲ್ಲನೆ”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ

ಹಳ್ಳಿಕೊಂಪೆಯ ಮೂಲಮನೆಯ ಕಾಲ ಗರ್ಭದ ಹಿಂದಿನ ದಿನಗಳಲ್ಲಿ ಯಾರ‍್ಯಾರೋ ಹಿರಿಯರು ಕಾಲವಾದಾಗ ಹೇಳಿಸುತ್ತಿದ್ದ ಗರುಡಪುರಾಣದ ವಿವರಗಳೆಲ್ಲ ಇಲ್ಲಿ ಈಗ ಜೀವನದಲ್ಲಿ ಮೊದಲ ಅನುಭವವಾಗಿ ಬಾಲ್ಕನಿಯಲ್ಲಿ ನಿಂತು ಹೊಸ ಬದುಕಿನ ಹುಡುಕಾಟವನ್ನು ನಡೆಸುತ್ತಿದ್ದ ಗಂಗಮತ್ತೆಯ ನೆನಪಿಗೆ ಬಂದು ನಿಜವೆನಿಸತೊಡಗುತ್ತಿದ್ದಂತೆ ಒಂದು ದಿನ ಪಕ್ಕದ ಫ್ಲಾಟಿನ ವಿರಸ ದಾಂಪತ್ಯದ ಸಾಫ್ಟ್ವೇರ್ ಉದ್ಯೋಗದ ಎಳೆಯ ತರುಣಿ ತನ್ನ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅಂತ್ಯವನ್ನು ಕಂಡಾಗ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ “ಮಹಾಪ್ರಸ್ಥಾನ”

Read More

ಆನಂದ ಭೋವಿ ಬರೆದ ಈ ಭಾನುವಾರದ ಕತೆ

ಅದ್ಯಾವ ಪುಣ್ಯಾತಗಿತ್ತಿ ಅಬ್ಬರಿಸಿದಳೋ ಗೊತ್ತಿಲ್ಲ “ಯಲ್ಲವ್ವ ಬಂಗಾರದ ಮಳೆ ಹರಸಾಕತ್ತಾಳ ಯಾರಿಗೆ ಸಿಗತೈತಿ ಅವರ ಬಾಳು ಬಂಗಾರ ಆಗತೈತಿ” ಇದೊಂದು ಮಾತು ಬರಸಿಡಿಲು ಬಡಿದಂಗ ಆತು. ಸೀಟಿನ ಚಿಂತ್ಯಾಗ ಮುಕರಿಬಿದ್ದಿದ್ದ ಮಂದಿ ಹುಯ್ಯಂತ ಮ್ಯಾಲಕ್ಕೆತ್ತು. ಅವಳು ಇವಳು ಯಾರಿಗೂ ಯಾರು ಕಾಣಲಿಲ್ಲ. ಹಾರಾಡಿ ಬೀಳುತ್ತಿದ್ದ ಸರದ ಗುಂಡು ಆರಿಸಲಿಕ್ಕ ಮುಗಿಬಿದ್ದರು. ಅವರ ಮ್ಯಾಲ ಇವರು ಇವರ ಮ್ಯಾಲ ಅವರು ನೋಡ ನೋಡುವದ್ರೊಳಗ ಕಾಲ್ತುಳಿದ ಗದ್ದಲ ಬಸ್ಸನ್ನು ನುಂಗಿಕೊಂಡಿತು. ಬಿಸಲಿನ ಜಳದೊಳಗ ರಕ್ತದ ವಾಸನೆ ಬಡಿಯತೊಡಗಿತು.
ಆನಂದ ಭೋವಿ ಬರೆದ ಈ ಭಾನುವಾರದ ಕತೆ “ದೇವರಿಗೂ ಒಂದು ಟಿಕಿಟು”

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ