Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ

ಭೂಮಿ ಕಂಪಿಸುತ್ತಿದೆ. ಇಮಾರತುಗಳು, ಗಿಡಮರಗಳು ಅಲುಗಾಡುತ್ತಿವೆ. ಏನಾಗುತ್ತಿದೆ? ಎಂಬುದೇ ತಿಳಿಯದೇ ಎಲ್ಲರೂ ಒಂದು ಕ್ಷಣ ದಂಗಾದರು. ಮರುಕ್ಷಣದಲ್ಲಿಯೇ ತೀವ್ರ ಭೂಕಂಪದ ಅನುಭವ ಆಗುತ್ತಿದ್ದಂತೆ, ಕೆಲವರ ಮೊಬೈಲಿನಲ್ಲಿ ಕರಾವಳಿಯಲ್ಲಿ ತ್ಸುನಾಮಿ ಎರಗಿದ ಮೆಸೇಜ್ ಬರತೊಡಗಿದಾಗ ಎದೆ ಬಡಿತ ಜೋರಾಯಿತು. ಮಾತು ಹೊರಡುತ್ತಿಲ್ಲ. ಮುಕುಲ ಇಲ್ಲಿಂದ 35-40 ಕಿಮಿ ದೂರದ ತುಕುಶಿಕ ನಗರದ ಕಂಪನಿಯ ಆಫೀಸಿನಲ್ಲಿದ್ದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ “ವಿಪ್ಲವ” ನಿಮ್ಮ ಓದಿಗೆ

Read More

ಮಂಜುನಾಥ್ ಕುಣಿಗಲ್ ಬರೆದ ಈ ಭಾನುವಾರದ ಕತೆ

ಅಮ್ಮನಿಗೆ ವಿಷಯ ತಿಳಿದರೆ ಎದೆಹೊಡೆದು ಕುಸಿದುಬಿದ್ದಾಳು! ಆಕೆ ತನ್ನ ಜೀವನ ಒತ್ತೆಯಿಟ್ಟು ಅದೂ-ಇದೂ ಚಾಕರಿ ಮಾಡುತ್ತಾ ನಮ್ಮನ್ನು ಸಾಕಿದ್ದು. ಆಕೆಗೆ ಏನು ಸುಖ ಕೊಟ್ಟಿದ್ದೆ? ಅದ್ಯಾವುದೋ ನನ್ನ ಕಂಪ್ಯೂಟರ್ ಕೋರ್ಸಿಗೆ ಹನ್ನೆರೆಡು ಸಾವಿರವನ್ನು ಹೊಂಚಲು ಎಲ್ಲೆಲ್ಲೋ ಹೊಟ್ಟೆಬಟ್ಟೆ ಕಟ್ಟಿ ಅದೆಷ್ಟು ಕಷ್ಟಪಟ್ಟಳು? ಆ ದುಡ್ಡನ್ನು ನಾನಿನ್ನೂ ವಾಪಸ್ ಕೊಟ್ಟಿಲ್ಲ! ಹೊಟ್ಟೆಯಲ್ಲಿ ಏನೋ ಕಟ್ಟಿಕೊಂಡ ಸಂಕಟ!
ಮಂಜುನಾಥ್ ಕುಣಿಗಲ್ ಹೊಸ ಕಥಾ ಸಂಕಲನ “ದೂರ ದೇಶದ ದೇವರು” ಕೃತಿಯ ಶೀರ್ಷಿಕೆ ಕತೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ

ಬತ್ತಿ ಹೋಗಿರುವ ನದಿಯ ದಡದಲ್ಲಿ ಕುಳಿತು ಹರಿಯುವ ನದಿಯನ್ನು ಕಲ್ಪಿಸಿಕೊಂಡು ಸುಖಪಡುತ್ತಿದ್ದ ಕುಮದ್ವತಿಗೆ, ಎಲ್ಲವೂ ವೇಗವಾಗಿ ಮನಸಿನಲಿ ಸುಳಿದುಹೋದವು. ಕೆಲವು ಸಲ ಊರಿನವರ ಮಾತುಗಳಿಗೆ ಬೇಸರವಾದರೂ, ಪ್ರೀತಿಸುವ ಗಂಡನಿಂದ ಎಲ್ಲವೂ ಮರೆಯುತ್ತಿದ್ದಳು. ಸೊಸೆಯ ಒಳ್ಳೆಯತನ ಕಂಡಮೇಲೆ ಅತ್ತೆ ಇನ್ನೂ ಹತ್ತಿರವಾಗಿದ್ದರು. ಸೊಸೆಗೆ ಯಾವುದೇ ತೊಂದರೆ ಆಗದಂತೆ, ತನ್ನ ಮಗನಿಂದ ಅವಳಿಗೆ ಅನ್ಯಾಯ ಆಯಿತಲ್ಲ ಎನ್ನುವ ಪಾಪ ಪ್ರಜ್ಞೆಯಿಂದ ಸೊಸೆಯನ್ನು ಇನ್ನೂ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಳು.
ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ “ಕುಮದ್ವತಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ