Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ

ಒಮ್ಮೊಮ್ಮೆ ಕನಸ್ಸಿನಲ್ಲಿ ಬೆಚ್ಚಿಬೀಳ್ತಾ ಇದ್ದ. ನಾರಾಣಿ ಅತ್ತಂತೆ ಕನಸ್ಸು ಬೀಳ್ತಾಇತ್ತು ತಾನು ಅತ್ತಂತಾಗುತ್ತಿತ್ತು. ಲಕ್ಷ್ಮಕ್ಕ ಬಂದು ಕತ್ತಿಸಿಕಿದಂತೆ ಕೆನ್ನೆಗೆ ಹೊಡೆದಂತೆ ಭಾಸವಾಗ್ತಾ ಇತ್ತು. ಅವಾಗೆಲ್ಲಾ ವಿಪರೀತ ಖಿನ್ನನಾಗ್ತಾ ಇದ್ದ. ಮಾದನನ್ನು ನೆನೆದಾಗಲೆಲ್ಲಾ ಚಿಕ್ಕಮಕ್ಕಳಂತೆ ಅತ್ತುಬಿಡುತ್ತಿದ್ದ. ಕರ್ಮಗಳೆಲ್ಲಾ ಹೀಗೆ ಕನಸುಗಳಲ್ಲಿ ಬಂದು ಕಾಡ್ತಾ ಇರ್ತವೆ ನಮ್ಮ ಪಾಪಕರ್ಮಗಳು ಕನಸುಗಳಲ್ಲಿ ಜೀವಂತವಾಗಿರುತ್ತವೆ ಅದಕ್ಕಾಗಿಯೇ. ಅವು ನಮ್ಮನ್ನು ಕಾಡುತ್ತವೆ ಕಾಡಿಸುತ್ತವೆ ನಮ್ಮನ್ನು ಶುಭ್ರಗೊಳಿಸುತ್ತವೆ. ಅದಕ್ಕಾಗಿ ನಾವೇಕೆ ಬೆಚ್ಚಬೇಕು. ಅಚ್ಚಹಸಿರಾಗಬೇಕು ಮನಸು ತಿಳಿಯಾಗಬೇಕು.
ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ “ಭಾವ ಬಿತ್ತಿದ ಬೀಜ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹೆಚ್. ಆರ್. ಸುಜಾತಾ ಕತೆ

“ಹೋಗಿ ಬಂದು ಮೂಗಿ ತಕ ಹೋದ” ಅಂತ ಮೊದ್ಲೇ ಗಾದೆ ಮಾತಿಲ್ವಾ? ಹಂಗಾಯ್ತು ಇದೂವೆ. ಇವಳಿಗೆ ಬಾಯಿಲ್ಲ. ಅವನಿಗೆ ನೀತಿನೇಮ ಇಲ್ಲ. ಯಾರ್ಗಾರ ಹೇಳತಳೆ ಅನ್ನೋ ಭಯವಂತೂ ಮೊದ್ಲೇ ಇಲ್ಲ. ಇಬ್ರಗೂ ವಯಸ್ಸಿನ ಚಪಲ. ತೀರಸಕಂಡವರೆ. ಆದ್ರೆ ಆ ನನ್ ಮಗಂಗೇನು ಕಷ್ಟ? ಗಂಡಸು. ಮದ್ವೆ ಮಾಡ್ಕತನೆ ಇಲ್ಲಾಂದ್ರೆ….. ಇನ್ನೊಭ್ಳು ತಕೆ ಹೋಯತನೆ. ಇವಳಿಗೆ ತಾನೆ ಇರದು ಈಗ ಹಬ್ಬ. ಹರುಷದ ಕೂಳಿಗೆ ವರುಷದ ಕೂಳು ಕಳಕಂಡಂಗ ಆಯ್ತಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹೆಚ್. ಆರ್. ಸುಜಾತಾ ಕತೆ

Read More

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ