Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ

“ಆ ಧೂಪದ ಹೈಕಳನ್ನು ಯಾರೂ ಹತ್ತಿಸಿಕೊಂಡು ಹೊಬ್ಗ್ಯಾಡ್ರಿ” ಎಂದು ಹೇಳಿದರೆ; ಎರಡು ದಿನ ಹೈಕಳು ಇಸ್ಕೂಲಿಗೆ ಬಂದರೆ ಮೂರನೆ ದಿನಕ್ಕೆ ಮತ್ತೆ ಅದೇ ರಾಗ ಅದೇ ಹಾಡು. ರೋಸಿ ಹೋದ ಮೇಷ್ಟ್ರು ಒಮ್ಮೆ ಬೆಟ್ಟದ ಇನ್ಸಪೆಕ್ಟ್ರು ಊರಿಗೆ ಬಂದಾಗ “ಯಾರಿಗೂ ಹೆದರದ ಇವರು ಪೋಲಿಸ್ನೋರ‍್ಗೆ ಖರೇ ಹೆದ್ರೂದು” ಎಂದು ಸ್ವಾಲಿಗ್ರ ಕೇರಿಗೆ, ಹೊಲೇರಕೇರಿಗೆ ಕರ್ಕೊಂಡೋಗಿ “ಮಕ್ಕಳನ್ನ ತಾಳುಬೆಟ್ಟಕ್ಕೆ ಧೂಪ ಮಾರುವುದಕ್ಕೆ ಕಳುಹಿಸಿದರೆ ಜೇಲಿಗೆ ಹಾಕಿಸ್ತೀನಿ ಎಂದು ರೋಪ್ ಹೊಡೆಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ “ಧೂಪದ ಮಕ್ಕಳು”

Read More

ಶ್ರೀಲೋಲ ಸೋಮಯಾಜಿ ಬರೆದ ಈ ಭಾನುವಾರದ ಕತೆ

ಕುಟುಂಬಕ್ಕೆ ಆಗಮಿಸಿದ ಹೊಸ ಸದಸ್ಯೆಯ ಆಗಮನದ ಸಂತೋಷ ಬರಿಯ ಹದಿನೈದು ದಿನಗಳಲ್ಲಿ ಕಮರಿಹೋಯಿತು. ಆಸ್ಪತ್ರೆಯಿಂದ ಹೊರಬರುವ ಮೊದಲೇ ಮೊದಲ ಬಾರಿಗೆ ದಪ್ಪ ಸೂಜಿಯಿಂದ ಚುಚ್ಚಿಸಿಕೊಂಡು ರಕ್ತವನ್ನು ದೇಹದ ಒಳಗೆ ದಾಟಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಅಳುತ್ತಿದ್ದ ಮಗುವನ್ನು ನೋಡಲಾಗದ ರಮ್ಯಾ ಕೋಣೆಯಿಂದ ಹೊರಗೆ ಓಡಿಬಂದು ಬಿಕ್ಕಿಬಿಕ್ಕಿ ಅಳತೊಡಗಿದಳು.
ಶ್ರೀಲೋಲ ಸೋಮಯಾಜಿ ಬರೆದ “ಮೊನಾಲಿಸಾಳ ನಗು” ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ

ಒಂದು ದಿನ ಕ್ಯಾಂಪಸ್ಸಿಗೆ ಬಂದ ಚಂದ್ರಮೌಳಿ ಸಂಜೆ ಸುಧಾಳೊಂದಿಗೆ ಟೀ ಕುಡಿಯುತ್ತಾ “ನೋಡು, ನಾನು ಕಲ್ಕತ್ತಾಗೆ ಹೋಗ್ತಿದ್ದೀನಿ. ಈ ಹೋರಾಟ ಎಲ್ಲ ಶಕ್ತಿಗುಂದುತ್ತಾ ಇದೆ. ಇದ್ರಿಂದೆಲ್ಲ ಏನಾದ್ರೂ ಆಗುತ್ತೆ ಅನ್ನೋ ನಂಬಿಕೆನೂ ನನಗಿಲ್ಲ. ಒಂದು ಅಮೆರಿಕನ್ ಕಂಪೆನಿಯಿಂದ ಒಳ್ಳೆ ಆಫರ್ ಇದೆ. ಎರಡು ವರ್ಷದ ಮೇಲೆ ಸ್ಟೇಟ್ಸ್‌ಗೆ ಹೋಗೋ ಛಾನ್ಸೂ ಇದೆ. ನಿಂಗೆ ಇದು ದ್ರೋಹದ ಥರ ಕಾಣಿಸಬಹುದು, ಪರ್ಸನಲ್ ಲೆವೆಲ್‌ನಲ್ಲೂ…
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ “ಯಾರಲ್ಲಿ, ಕಳೆದಿರುಳು….” ನಿಮ್ಮ ಈ ಭಾನುವಾರದ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಕತೆ

ಪಕ್ಕದ ಮನೆಯ ಹುಡುಗಿ ವಿಹಿತಾ ತರಗತಿಗೆ ಫಸ್ಟ್ ಬಂದಿದ್ದಳು. ಲಚ್ಚಿಗೆ ಎರಡನೇ ಸ್ಥಾನ. ಈ ವಿಷಯ ತಿಳಿದಾಗಲೇ ಸೀಮಾ ಅಪ್‌ಸೆಟ್ ಆಗಿದ್ದಳು. ವಿಹಿತಾಳ ತಾಯಿಯ ಜೊತೆಗೆ ಸರಿಯಾಗಿ ಮಾತನಾಡುವುದಕ್ಕೂ ಆಗಿರಲಿಲ್ಲ ಅವಳಿಗೆ. ಅಕ್ಕನ ಮಗಳು ನಾಲ್ಕು ವರ್ಷಗಳಿಂದಲೂ ತರಗತಿಗೆ ಫಸ್ಟ್ ಬರುತ್ತಲೇ ಇದ್ದಾಳೆ. ಸ್ನೇಹಿತೆಯ ಮಗ ವಿಹಾನ್ ಕೀಬೋರ್ಡ್ ತರಗತಿಗೆ ಹೋಗುತ್ತಲೇ ಕಲಿಕೆಯಲ್ಲೂ ಎರಡನೇ ಸ್ಥಾನ ಪಡೆಯುತ್ತಿದ್ದಾನೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ಲಚ್ಚಿಯ ಒಂದು ದಿನ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎಸ್‌. ಶ್ರೀರಾಮ್‌ ಕತೆ

ಅಪ್ಪ- ಮಗ ಮತ್ತೆ ಎಂದಿನಂತೆ ಕೂದಲು ಕತ್ತರಿಸಿಕೊಳ್ಳಲು ಹೋದರು. ಅಲ್ಲಿಗೆ ಹೋದಾಗ ಪ್ರಭಾತ ಅವಾಕ್ಕಾದ. ಯಾವಾಗಲೂ ಕಚಾಕಚ್‌ ತುಂಬಿರುತ್ತಿದ್ದ ಮನಿಷಾ ಹೇರ್‌ ಆರ್ಟ್‌ ಖಾಲಿಯಾಗಿತ್ತು. ಅದರ ಗಾಜುಗಳೆಲ್ಲ ಛಿದ್ರವಾಗಿ ಅವಶೇಷಗಳು ಮಾತ್ರ ಕಾಣುತ್ತಿದ್ದವು. ಒಂದೇಒಂದು ಕನ್ನಡಿ, ಒಂದು ಎತ್ತರದ ಕುರ್ಚಿ ಹಾಗೂ ನೆಲದ ಮೇಲೆ ಕುಕ್ಕರಗಾಲಿನಲ್ಲಿ ಕೂತಿದ್ದ ಕಳಾಹೀನ ಮುಖದ ಒಂಟಿ ವ್ಯಕ್ತಿ. ಅವನ ಮುಖ ನೋಡಿದಾಗ ಪ್ರಭಾತನಿಗೆ ನೆನಪಾಯಿತು – ಅಷ್ಟೂ ದಿನ ತಮ್ಮಿಂದ ಹಣ ಪಡೆಯುತ್ತಿದ್ದ ವ್ಯಕ್ತಿ ಈತನೇ. ಮೊದಲು ಮಗ, ನಂತರ ಅಪ್ಪ ಹೀಗೆ ಇಬ್ಬರೂ ಒಬ್ಬರಾದ ನಂತರ ಒಬ್ಬರು ಕತ್ತರಿಗೆ ತಲೆಯನ್ನೊಡ್ಡಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎಸ್‌. ಶ್ರೀರಾಮ್‌ ಕತೆ “ತೇಲ್ ಮಾಲಿಶ್”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ