Advertisement

Category: ವಾರದ ಕಥೆ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ತಂದೆ ಏಕೆ ಹೀಗಾದರೂ ಅಂತ ಈವತ್ತಿಗೂ ನನಗೆ ಗೊತ್ತಾಗುತ್ತಿಲ್ಲ. ಸ್ನಾನ, ಸಂಧ್ಯಾವಂದನೆ, ಪೂಜೆ, ಅಚರಣೆ, ಯಾವುದನ್ನೂ ತಂದೆ ತಪ್ಪಿಸಿದವರಲ್ಲ. ಅವರ ತಂದೆಯ ಭಯದಲ್ಲೇ ಬೆಳೆದಿದ್ದರು. ತಂದೆ ಸತ್ತು ಹೋದ ಮೇಲೆ ಹೀಗೆಲ್ಲ ಆದದ್ದು. ನಿನ್ನ ಹತ್ತಿರ ಏನು ಮುಚ್ಚು ಮರೆ. ನಮ್ಮ ತಾತನದು ಕೂಡ ಇದೇ ರೀತಿಯ ರಂಪವಂತೆ. ಆತ ಇಟ್ಟುಕೊಂಡಿದ್ದವಳೊಬ್ಬಳನ್ನು ಮನೆಗೇ ಕರೆದುಕೊಂಡು ಬಂದು ಮಂಚದ ಮೇಲೆ ಮಲಗಿಸಿಕೊಳ್ಳುತ್ತಿದ್ದರಂತೆ. ನಮ್ಮಜ್ಜಿ ಅವಳ ಎಂಜಲು ತಟ್ಟೆ ತೊಳೆಯುವುದರಿಂದ ಹಿಡಿದು ಪ್ರತಿಯೊಂದು ಸೇವೆಯನ್ನೂ ಮಾಡಬೇಕಾಗುತ್ತಿತ್ತಂತೆ.
ಕೆ. ಸತ್ಯನಾರಾಯಣ ಬರೆದ ಕಥೆ “ಪ್ರೀತಿ ಬೇಡುವ ರೀತಿ” ‌

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕತೆ

ಅಲಾ.. ಒಂದ್ ಜಾಕೀಟ್ ಬಟ್ಟೆ ಅರ‍್ಸಕ್ಕೆ ವರ್ಸ ಪೂರ‍್ತಿ ದುಡ್ ವಟ್ಮಾಡಿ ಬಟ್ಟೆ ಅಂಗ್ಡಿಗ್ ವೋಗಿದೀನಿ. ಕದಿಯದಾಗಿದ್ರೆ ಇಷ್ಟು ಕಸ್ಟ ತಗೀಬೇಕಾ? ಆ ದೇವ್ರೂ ಈ ಅನ್ಯಾಯ ನೋಡ್ಕ್ಯಂತ ಸುಮ್ಕಿದಾನಾ ಅಂಗಾರೆ? ಅಲಾ ಈ ಸೀರೆ ವಯರ್ ಬುಟ್ಟಿಲಿ ಯಾವಾಗ್ ಬಂದ್ ಸರ‍್ಕಂತು ಅಂತ? ಬವುಶ್ಯ ನನ್ ಇಂದ್ಗಡೀಕೇ ನಿಂತ್ಕಂದಿದ್ನಲ್ಲ ಇವ್ನು.. ಇವ್ನೇ ಎಲ್ಲಾರೂ.. ಇವ್ನೇ ಇವ್ನೇ! ಇನ್ಯಾರ್ ಇಂತಾ ಕ್ಯಲ್ಸ ಮಾಡ್ತರೆ? ಅಲಾ.. ಅದ್ಯಾ ಮಾಯ್ಕದಲ್ಲಿ ವಯರ್ ಬುಟ್ಟಿಗೆ ಸೀರೆ ತಗ್ದು ಆಕಿಬುಟ್ಟಿದ್ನೋ ಅಂತ!
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕಥೆ “ತಲೆ ಮ್ಯಾಕೆ ವೂದ ನೀರು” ನಿಮ್ಮ ಈ ಭಾನುವಾರದ ಓದಿಗೆ

Read More

ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ

ಅವಳಮ್ಮ ಅಂದುಕೊಂಡಂತೆ ಅವ ಅವಳಿಗೆ ಬರೀ ಕ್ಲಾಸ್ ಮೇಟ್ ಮಾತ್ರವಾಗಿರಲಿಲ್ಲ. ಅವನೆಂದರೆ ಮಿಠಾಯಿ. ಅವನೆಂದರೆ ಬಲೂನು. ಅವಳು ಮೋಞಿಯವರ ಅಂಗಡಿಗೆ ಮನೆಸಾಮಾನಿಗಂತ ಹೋಗಲಾರಂಭಿಸಿದ್ದು ಎಂಟನೇ ಕ್ಲಾಸಿರಬೇಕಾದರೆ. ಅಬೂಬಕರ್ ಅಂಗಡಿ ಕೌಂಟರಲ್ಲಿದ್ದರೆ ಅವಳಿಗೊಂಥರಾ ಖುಷಿ. ಅವನು ಇರುವ ಹೊತ್ತು ನೋಡಿಯೇ ಅವಳು ಅಂಗಡಿಗೆ ಹೋಗುತ್ತಿದ್ದುದೂ ಇದೆ. ಹಾಗೆ ಹೋದಾಗ ಮನೆ ಸಾಮಾನು ಜತೆ ಅವಳಿಗಿಷ್ಟದ ಮಿಠಾಯಿ ನಾಕು ಬೇಕಂತ ಕೇಳಿದರೆ ಅವನು ಆರು ಹಾಕಿರುತ್ತಿದ್ದ. ಅವಳಿಗೆ ಬುಗ್ಗೆಯೆಂದರೆ ಇಷ್ಟ ಅಂತ ಅವನಿಗೆ ಅದು ಹೇಗೆ ಗೊತ್ತಾಯ್ತೋ, ಒಂದೊಂದು ಸಲ ಬಲೂನು ಕೂಡ ಹಾಕಿರುತ್ತಿದ್ದ.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ “ಬಲೂನು”

Read More

ಮಂಜಯ್ಯ ದೇವರಮನಿ ಬರೆದ ಈ ಭಾನುವಾರದ ಕತೆ

ಶಾರವ್ವನಿಗೆ ಶಿವರುದ್ರಯ್ಯನ ಇಂಥ ನಡವಳಿಕೆ ವಿಚಿತ್ರವೆನಿಸಿತು. ದೇವರ ಹೊಲ ತನ್ನ ಗಂಡನಿಗೆ ಕೊಡಿಸ್ತೀನಿ ಅಂತಾ ಪೂಜಾರಪ್ಪ ಹೇಳಿದ್ದು ತನಗೆ ಗೊತ್ತಿತ್ತು. ಸಿಗಬೇಕು ಎಂಬ ವಿಚಾರದಲ್ಲಿ ಒಂದು ಒಪ್ಪಂದವಾಗಿತ್ತು ಎನ್ನುವುದು ಪೂಜಾರಪ್ಪ ಮತ್ತು ತನಗೆ ಮಾತ್ರ ಗೊತ್ತಿದ್ದ ವಿಷಯವಾಗಿತ್ತು. ಆದರೆ ಶಿವರುದ್ರಯ್ಯ ಗುಡಿ ಪೂಜಾರಿ ಕ್ರಿಷ್ಣಪ್ಪನ ಮುಖಾಂತರ ಹೇಳಿಸಿ ತನ್ನ ಉದ್ದೇಶ ಸಾಧನೆಗೆ ಮುಂದಾಗಿದ್ದ. ಕ್ರಿಷ್ಣಪ್ಪ ಉದ್ದೇಶದ ಮೂಲವನ್ನು ಪೂರ್ತಿಯಾಗಿ ಹೇಳದೆ ಪರವಾಗಿ ಎನ್ನುವಂತೆ ಹೇಳಿ ಶಾರವ್ವನನ್ನು ಒಪ್ಪಿಸಿದ್ದ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎನ್. ಜಗದೀಶ್ ಕೊಪ್ಪ ಬರೆದ ಕತೆ

ಹಿಂದೆ ಬಂದರೆ ಒದೆಯದ, ಮುಂದೆ ಬಂದರೆ ಹಾಯದ ಹಸುವಿನಂತಹ ಗುಣದ ಪುಗಸಟ್ಟೆ ಪುಟ್ಟರಾಜನ ಬಗ್ಗೆ ಊರಿನ ಜನರಿಗೆಲ್ಲಾ ಅಪಾರ ಪ್ರೀತಿ. ಏನೇ ಕೆಲಸ ಹೇಳಿದರೂ ಸಹ ಇಲ್ಲವೆನ್ನದೆ ಮಾಡುತ್ತಿದ್ದ ಪುಟ್ಟರಾಜ, ನೆರೆ ಹೊರೆಯ ಹಳ್ಳಿಗಳಿಗೆ ಹೋಗಿ ತೆಂಗಿನ ಮರ ಹತ್ತಿ ಕಾಯಿ ಕೀಳುವುದು, ಸುಲಿಯುವುದು, ಕಳೆ ಕೀಳುವುದು ಹೀಗೆ ನೂರೆಂಟು ಕೆಲಸಗಳನ್ನು ಪ್ರೀತಿಯಿಂದ ಮಾಡಿ ಬರುತ್ತಿದ್ದ. ಅವರು ಉಣ್ಣಲು ಅಥವಾ ಕುಡಿಯಲು ಏನಾದರೂ ಕೊಟ್ಟರೆ ಅದೇ ಅವನ ಪಾಲಿಗೆ ಪ್ರಸಾದವಾಗಿತ್ತು. ಡಾ. ಎನ್. ಜಗದೀಶ್ ಕೊಪ್ಪ ಬರೆದ ಕಥೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ