Advertisement

Category: ವಾರದ ಕಥೆ

ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್.‌ ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ

Read More

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ

Read More

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ”

ಅರೆ! ಎಲ್ಲರೂ ಅವರವರ ಕೆಲಸಗಳಲ್ಲಿಯೇ ಕಳೆದುಹೋಗಿದ್ದಾರೆ ಇಲ್ಲಿ. ಯಾರಿಗೂ ಹೊರಗಡೆ ಏನು ನಡೆಯುತ್ತಿದೆ ಅನ್ನುವುದರ ಪರಿವೇ ಇಲ್ಲ. ಅದರ ಅಗತ್ಯವೇ ಇಲ್ಲ ಅನ್ನುವಷ್ಟೂ ಕ್ಷುಲ್ಲಕ ಸಂಗತಿಗಳೆ ಅವೆಲ್ಲಾ? ರಸ್ತೆಯ ತುಂಬಾ ಬದುಕಿನ ನಿತ್ಯ ವ್ಯಾಪಾರ ಅದೆಷ್ಟು ಸಹಜ ಅನ್ನುವ ರೀತಿಯಲ್ಲಿ ನಡೆಯುತ್ತಿದೆ. ಪಕ್ಕದಲ್ಲಿ ಬಾಂಬ್ ಬಿದ್ದರೂ ನಮ್ಮ ಮನಗೆ ಬಿದ್ದಿಲ್ಲ ತಾನೇ ಅನ್ನುವ ಹಾಗೆ ತಮ್ಮತಮ್ಮ ಕೆಲಸಗಳಲ್ಲಿ ತೊಡಗುತ್ತಾರಂದ್ರೆ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ