Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ಕಬ್ಬಿಗ.ai”

ಗುರುಗಳಿಗೆ ಈ ಕಬ್ಬಿಗ ತಂತ್ರಾಂಶ ಮಗುವಿನ ಕೈಯಲ್ಲಿ ಆಟಿಗೆ ಸಿಕ್ಕಂತಾಯಿತು. ಅವರು ಹೂವು, ಹಣ್ಣು, ಚಂದ್ರ, ಬೆಳದಿಂಗಳು, ದೀಪಾವಳಿ, ಯುಗಾದಿ ಕೊನೆಗೆ ಹೋಳಿ ಹುಣ್ಣಿಮೆಯ ಬಗ್ಗೆ ಕೂಡ ಪದ್ಯ ಬರೆಸಿದರು. ಪದ್ಯಗಳನ್ನು ಒಂದು ಷಟ್ಪದಿಯಲ್ಲಿ ಬರೆಸಿ, ಮತ್ತೊಂದು ಷಟ್ಪದಿಗೆ ಬದಲಾಯಿಸಿಸಿದರು.. ಎಲ್ಲಾ ಪದ್ಯಗಳೂ ಚನ್ನಾಗಿರುತ್ತಿರಲಿಲ್ಲವಾದರೂ, ಅದರ ಬದಲು ಮತ್ತೊಂದು ಪದ್ಯ ಕೆಲವೇ ಕ್ಷಣಗಳಲ್ಲಿ ತಯಾರಾಗುತ್ತಿದ್ದರಿಂದ ಗುರುಗಳಿಗೆ ತಂತ್ರಾಂಶದ ಬಗ್ಗೆ ಬಹಳ ಸಂತೋಷವಾಗಿತ್ತು.
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ಕಬ್ಬಿಗ.ai”

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನಾಗರೇಖಾ ಗಾಂವಕರ ಕತೆ

ಕಪಿಲೆ… ಈಗಲೂ ಅದೇ ನೋವಿನ ದನಿ ಕೇಳಿದಂತಾಗುತ್ತಿದೆ. ಈ ನೋವಿನ ಮೂಲದಲ್ಲೂ ಆಕೆಯ ನೆನಪು. ಹೌದು ಆಕೆಯೂ ನನ್ನಂತೆ ಹೆಣ್ಣು. ಹೆಣ್ಣಿನ ನೋವು ಆ ಸೂಕ್ಷ್ಮ ಅವಳಿಗೆ ತಾನೆ ಅರ್ಥವಾಗೋದು. ಏನು ಮಾಡಲಿ.. ಏನು ಆಡಲಿ.. ಚಿಟಿಚಿಟಿ ಎನ್ನುತ್ತಿರುವ ತಲೆ, ಸುತ್ತಿದ ಬಟ್ಟೆ. ಆ ಡಾಕ್ಟರಮ್ಮ ಬರುವವರೆಗೂ ನಿಲ್ಲಬೇಕು. ಕಪಿಲೆ ಏನು ಮಾಡುತ್ತಿದ್ದಾಳೋ? ಬಾಣಂತಿ ಬೇರೆ..
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನಾಗರೇಖಾ ಗಾಂವಕರ ಕತೆ “ಸ್ಟಾಕ್‌ಹೋಮ್ ಸಿಂಡ್ರೋಮ್”

Read More

ಡಾ. ಕೆ. ಎಸ್. ಗಂಗಾಧರ ಬರೆದ ಈ ಭಾನುವಾರದ ಕತೆ

ಹುಡುಗ ಹೋದ ಮೇಲೆ ಜಗನ್ನಾಥನಿಗೆ ಜೋಂಪು ಹತ್ತಿದಂತೆ ಆಯಿತು. ಎದ್ದು ಮಲಗುವ ಕೋಣೆಗೆ ಹೋದ. ಹಾಸಿಗೆಯ ಮೇಲೆ ಬಿದ್ದುಕೊಂಡ ಕೂಡಲೇ ಗಾಢವಾದ ನಿದ್ರೆ. ಅವನು ಸರಿಯಾಗಿ ನಿದ್ರೆ ಮಾಡಿದರೆ ಸಾಕೆಂಬ ಭಾವದಲ್ಲಿದ್ದ ರಾಧಾ ಸುಮ್ಮನೆ ನೋಡುತ್ತಾ ಗಂಡನಿಗೆ ತೊಂದರೆಯಾಗದಿರಲೆಂಬ ಕಾರಣದಿಂದ ಶ್ಯಾಮನನ್ನು ಪಕ್ಕದ ಕೋಣೆಯಲ್ಲಿ ಮಲಗಿಸಿದಳು.
ಡಾ. ಕೆ. ಎಸ್. ಗಂಗಾಧರ ಬರೆದ ಕತೆ “ಕನಸುಗಳು ಬೇಕೇ ಕನಸುಗಳು!”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ