Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಕತೆ

ಅಪ್ಪ ಒಂದುಕಟ್ಟು ಬೀಡಿ ಮುಗಿಸಿದ್ದ. ಆತ ಎದ್ದು ಇನ್ನೂ ಬಾರಕೋಲು ತಗೊಂಡಿರಲಿಲ್ಲ, ನಾನೂ, ಸಾಂತ ಕೀಲಿಕೊಟ್ಟ ಗೊಂಬೆಗಳಂತೆ ಹೊಯ್ಕೊಳ್ಳಕೆ ಶುರು ಮಾಡಿದೆವು. ಅಪ್ಪನ ಸಿಟ್ಟು ನಮ್ಮ ಮೇಲೆ ವರ್ಗಗೊಂಡಿತು. ಇಬ್ಬರ ಬೆನ್ನಿಗೊಂದೊಂದು ಜೋರಾಗಿ ಗುದ್ದುಕೊಟ್ಟ. ನನಗಂತು ಅಳಲಿಕ್ಕೆ ಉಸುರು ಇಲ್ಲದಂಗಾಗಿತ್ತು. ಅವ್ವ ಅವತ್ತು ಉದಗಳ್ಳಿ ತಗಂಡು ಬೀಸಿದಳು ಅಪ್ಪನಿಗೆ. ಆತನ ಮೊಣಕಾಲಿಗೊಂದು ಗಿಚ್ಚ ಕುಂತಿತು. ಧಾರಾಕಾರ ರಕ್ತ ಸುರಿಯತೊಡಗಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಬರೆದ ಕತೆ “ವಜ್ರಮುನಿ”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ರಾತ್ರಿ ಕಳೆದು ಬೆಳಗಾಯಿತು. ಸುದ್ದಿ ಇಲ್ಲ. ಶಾಲೆಗೆ ಮಾಲೀಕರು ಬಂದರು. ಸಿ ಈ ಓ, ಡ್ರೈವರ್, ಆಯಾಗಳ ಮೀಟಿಂಗ್ ನಡೆಯಿತು. ಹೆಚ್ಚಿನ ವಿಷಯ ತಿಳಿಯಲಿಲ್ಲ. ಆದರೆ ಎಲ್ಲರೂ “ಅವರಿಬ್ಬರ ನಡುವೆ ಏನೋ ನಡೆಯುತ್ತಿತ್ತು. ಅವಳು ಬಲೆ ಪಾಕಡ…” ಎಂದು, ಕೆಲವರು ‘ಮಹದೇವ ಗುಮ್ಮನ ಗುಸಕ.. ಸೈಲೆಂಟಾಗಿ ಇದ್ದು ಹಿಂಗ್ ಮಾಡ್ಬಿಟ್ಟ’ ಹೀಗೆ… ತರಹೇವಾರಿ ಮಾತುಗಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಇದು ಎಂಥಾ ಲೋಕವಯ್ಯ..” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ಪ್ರಶಾಂತ್ ಬೆಳತೂರು ಬರೆದ ಈ ಭಾನುವಾರದ ಕತೆ

ಲೋಲಿ ಮಾತ್ರ ತನ್ನ ಭಾವ ದೇವರೆಂದು ಅವನಿಲ್ಲದಿದ್ದರೆ ಈ ಮನೆ ಎಂದೋ ಸರ್ವನಾಶವಾಗಿ ಬಿಡುತ್ತಿತ್ತೆಂದೂ, ಮನೆಗೆ ಕೊಡಲಿ ಮಿತ್ತಾದ ಗಂಡನ ಹಾವಳಿಯಿಂದ ತಾನು ಪಟ್ಟ ಪರಿಪಾಟಲುಗಳನ್ನೆಲ್ಲಾ ಹೇಳುತ್ತಾ ಗಂಡ ತೀರಿ ಹೋದ ಮೇಲೆ ಹೆಣ್ಣೆಂಗಸು ಹೇಗೆ ತಾನೇ ಮನೆಯೊಗೆತನ ಮಾಡುತ್ತಾಳೆ?
ಪ್ರಶಾಂತ್‌ ಬೆಳತೂರು ಬರೆದ ಈ ಭಾನುವಾರದ ಕತೆ “ಹಂದಿಕಾಳನ ಸಿಂಗಿಯೂ..ಮತ್ತವನ ರಾಜಪರಿವಾರವೂ..!”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ

ಹಸಿದ ಹೊಟ್ಟೆಗಳನ್ನು ಹೊತ್ತುಕೊಂಡು ಪಕ್ಕೂ ಮಾಡಿದ ರೇಜಿಗೆಯಿಂದ ದಿಗಿಲುಗೊಂಡವರು ಫುಟ್‌ಪಾತಿನ ಮೇಲೆ ಕೂರುತ್ತಿದ್ದಂತೆ ತಾವು ತಂದಿದ್ದ ರೊಟ್ಟಿ ಗಂಟುಗಳನ್ನು ಬಿಚ್ಚಿ ತಿನ್ನತೊಡಗಿದರು. ದಾಜಿ ಧೋಂಡಿಬಾನ ಅಂಗಡಿ ಪಕ್ಕದ ಮನೆಯಿಂದ ನೀರಿನ ವ್ಯವಸ್ಥೆ ಮಾಡಿದ. ಒಂದಿಷ್ಟು ಗಂಡಸರು ಊಟ ಒಲ್ಲದೆ ಸಿಗರೇಟು, ಎಲೆ ಅಡಿಕೆ ತಂಬಾಕುಗಳ ತಲುಬಿಗೆ ಶರಣೆಂದರು. ಸಣ್ಣ ಮಕ್ಕಳು ತಮ್ಮ ಅವ್ವ ಅಪ್ಪಂದಿರರಿಂದ ದುಡ್ಡು ಇಸಿದುಕೊಂಡು ಭೈಯ್ಯಾನ ಸ್ವೀಟ್ ದುಕಾನಿನಿಂದ ಸೇವು, ಉಂಡಿ, ಮೈಸೂರ ಪಾಕ್, ಭಜಿ, ಮೊದಲಾದ ತಿಂಡಿಗಳನ್ನು ಖರೀದಿಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ “ಒಂದು ಪಯಣ ಪ್ರಸಂಗ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ