Advertisement

Category: ವಾರದ ಕಥೆ

ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

ಮಗುವಿಗೆ ಒಂದು ವರ್ಷ ತುಂಬಿದಾಗ ಮಾತನಾಡಲು ಶುರುಮಾಡಿತು. ಅವಳು ತನ್ನ ಮಗು ಅಮ್ಮ ಎನ್ನಲಿ ಎಂದು ಕಾಯುತ್ತಿದ್ದಳು. ಆದರೆ ಅದು “ಓನ್ಯಾಸಿ” ಎನ್ನತೊಡಗಿತು. ಇದ್ಯಾವ ಶಬ್ದ, ಭಾಷೆ ಎಂದು ಅವಳಿಗೆ ತಕ್ಷಣ ಹೊಳೆಯಲಿಲ್ಲ. ತನ್ನ ನೆನಪುಗಳನ್ನು ಹರವಿ ಪರಿಶೀಲಿಸಿದಾಗ ಅದು ರಾಜೀವ್ 747 ಅವಳಿಗೆ ಹೇಳಿದ ಮೊದಲ ಪದವಾಗಿತ್ತು. ನಾನೇ ಹೆತ್ತು ಹೊತ್ತು ಸಾಕಿದರೂ ಅವನ ಭಾಷೆ ಮಾತನಾಡುತ್ತಿದೆಯಲ್ಲ ಎಂದು ಅವಳಿಗೆ ದುಃಖವಾಯಿತು, ಸಿಟ್ಟೂ ಬಂತು.
ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

Read More

ಸಂಜೋತಾ ಪುರೋಹಿತ್ ಅನುವಾದಿಸಿದ ರಾಬರ್ಟ್‌ ಬಾರ್ರ್ ಕತೆ

ಹ್ಯಾಂಗಿಂಗ್ ಒವರ್‌ಲುಕ್ ತಲುಪಲು ಕೆಲವೇ ಹೆಜ್ಜೆಗಳು ಬಾಕಿಯಿದ್ದವು. ಅದನ್ನು ತಲುಪುವವರೆಗೂ ಆಕೆ ‘ನಾವು ಒಬ್ಬರಿಗೊಬ್ಬರು ತಳುಕು ಹಾಕಿಕೊಂಡಿದ್ದೇವೆ’ ಎಂದು ಮತ್ತೆ ಮತ್ತೆ ತನಗೊಬ್ಬಳಿಗೇ ಕೇಳಿಸುವಂತೆ ಹೇಳಿಕೊಂಡಳು. ಜಾನ್ ಬೋಡಮ್ಯಾನ್ ಶಿಥಿಲವಾಗಿದ್ದ ಆ ಗೋಡೆಯ ಮೇಲೆ ಕುಳಿತ. ಕೈಯ್ಯಲ್ಲಿದ್ದ ಕೋಲನ್ನು ಬಂಡೆಯ ಮೇಲಿಟ್ಟು ಆಕೆ ಅತ್ತಿಂದಿತ್ತ ಓಡಾಡಿದಳು. ಅವಳ ಹೆಜ್ಜೆಗಳಲ್ಲಿ ಭಯ ಇಣುಕುತ್ತಿತ್ತು.
ಸಂಜೋತಾ ಪುರೋಹಿತ್ ಅನುವಾದಿಸಿದ ಸ್ಕಾಟಿಶ್‌- ಕೆನಡಿಯನ್‌ ಕತೆಗಾರ ರಾಬರ್ಟ್‌ ಬಾರ್ರ್ ಕತೆ “ಒಂದು ಆಲ್ಪೈನ್‌ ವಿಚ್ಛೇದನ” ನಿಮ್ಮ ಓದಿಗೆ

Read More

ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ “ಅಮೀನಾ”

ಮುರುಳಿಯ ಹೆಸರು ಹೇಳುತ್ತಲೇ ಮೆತ್ತಗಾಗಿದ್ದ ಅಮೀನಾ ತನ್ನ ಕತೆಯನ್ನು ಎಲ್ಲಿಂದ ಆರಂಭಿಸಬೇಕೆಂದು ಯೋಚಿಸಲಾರಂಭಿಸಿದಳು ‘ನಂಗೆ ನೆನಪಿರುವಂತೆ ನನ್ನ ಅಪ್ಪ ಲಾಡ್‌ ಸಾಬ್‌ ಗುಜುರಿ ಕೆಲಸ ಮಾಡುತ್ತಿದ್ದ, ದುಡಿದದ್ದಕ್ಕಿಂತ ಸೈಕಲ್‌ ತುಳಿದದ್ದೇ ಹೆಚ್ಚು. ಸೈಕಲ್ಲು ಚಲಿಸಿದರೆ ನಮ್ಮ ಬದುಕೂ ಚಲಿಸುತ್ತಿತ್ತು. ಅಮ್ಮಿ ಮನೇಲಿ ಬೀಡಿಯ ಜೊತೆ ನಮ್ಮ ಬದುಕನ್ನೂ ಕಟ್ಟುತ್ತಿದ್ದಳು…”
ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ

Read More

ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕಥೆ “ಜಾದೂ”

‘ಈಗ ನೋಡಿ ಅಸಲೀ ಝಗಡ ಷುರೂ. ಹಾವು ಮುಂಗೂಸ್ ಝಗಡʼ ಅಂದ. ಬುಟ್ಟಿ ಮುಚ್ಚಳ ತೆಗೆದ. ಹಾವು ಹೆಡೆ ಎತ್ತಿತು. ಪುಂಗಿ ಊದುತ್ತಾ ಮುಷ್ಠೀನ ಹಿಡಿದು, ಕಚ್ಚಲಿ ಅನ್ನೋ ಥರ ಆಡಿಸಿದ. ಅದು ಕಚ್ಚೋಕೆ ಬಂದರೆ ಮುಷ್ಠೀನ್ನ ಹಿಂದಕ್ಕೆಳೆದುಕೋತಾ ಇದ್ದ. ಇವನು ಹಾವು ಮುಂಗುಸಿ ಜಗಳ ತೋರಿಸ್ತಾ ಇಲ್ಲವಲ್ಲ. ಜಗಳ ತೋರಿಸ್ರೀ ಅಂತ ಕೇಳ್ಳಾ? ಬೇಡಪ್ಪಾ. ಆಮೇಲೆ ನನಗಿನ್ನೇನಾದರೂ ಮಾಡಿಬಿಟ್ಟರೆ ಕಷ್ಟ. ಅವನ ಸಹವಾಸಾನೇ ಬೇಡ. ಕಾಯ್ತಾ ನಿಂತೆ. ‘ಜೋರ್‌ ಸೇ ತಾಲಿ ಬಜಾವೋʼ ಅಂದ.
ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕತೆ “ಜಾದೂ” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

2042 ಏಪ್ರಿಲ್ ಏಳನೇ ತಾರೀಕು. ಅಮ್ಮನನ್ನು ಕಳಿಸಿ ಒಂದು ವಾರವಾಗಿತ್ತು. ಹಳೆಯ ದೃಶ್ಯದ ಪುನರಾವರ್ತನೆ ಆಯಿತು. ಒಂದು ಬದಲಾವಣೆ ಎಂದರೆ ಅಮ್ಮ ಮನೆಯಲ್ಲಿ ಇರಲಿಲ್ಲ. ಬಂದವರು ಫಾರ್ಮಾಲಿಟಿ ಮುಗಿಸಿ ಚೆಕ್ ಹಾಗೂ ಸೂಟ್ಕೇಸ್‌ನೊಂದಿಗೆ ಅವನಿಯನ್ನು ಕರೆದುಕೊಂಡು ವಾಹನದಲ್ಲಿ ಹೊರಟರು. ಹೊರಡುವ ಮುನ್ನ ಅವನಿ ಕೇಳಿದಳು “ಅಮ್ಮನನ್ನು ಕಳಿಸುವೆ ಎಂದಲ್ಲವೇ ನನ್ನ ಸಹಿ ಪಡೆದದ್ದು… ಈ ಮಸಲತ್ತು ತಿಳಿದಿರಲಿಲ್ಲ, ಅದಕ್ಕೇನಾ ಎರಡು ಪೇಪರ್‌ಗೆ ಸಹಿ ಹಾಕಿಸಿಕೊಂಡದ್ದು… ಸರಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಗುಡ್ ಬೈ.” ಎಂದು ಹೊರಟು ಹೋದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಹಳೆ ಪಾತ್ರೆ… ಹಳೆ ಕಬ್ಬಿಣ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ