Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ

ಹಸಿದ ಹೊಟ್ಟೆಗಳನ್ನು ಹೊತ್ತುಕೊಂಡು ಪಕ್ಕೂ ಮಾಡಿದ ರೇಜಿಗೆಯಿಂದ ದಿಗಿಲುಗೊಂಡವರು ಫುಟ್‌ಪಾತಿನ ಮೇಲೆ ಕೂರುತ್ತಿದ್ದಂತೆ ತಾವು ತಂದಿದ್ದ ರೊಟ್ಟಿ ಗಂಟುಗಳನ್ನು ಬಿಚ್ಚಿ ತಿನ್ನತೊಡಗಿದರು. ದಾಜಿ ಧೋಂಡಿಬಾನ ಅಂಗಡಿ ಪಕ್ಕದ ಮನೆಯಿಂದ ನೀರಿನ ವ್ಯವಸ್ಥೆ ಮಾಡಿದ. ಒಂದಿಷ್ಟು ಗಂಡಸರು ಊಟ ಒಲ್ಲದೆ ಸಿಗರೇಟು, ಎಲೆ ಅಡಿಕೆ ತಂಬಾಕುಗಳ ತಲುಬಿಗೆ ಶರಣೆಂದರು. ಸಣ್ಣ ಮಕ್ಕಳು ತಮ್ಮ ಅವ್ವ ಅಪ್ಪಂದಿರರಿಂದ ದುಡ್ಡು ಇಸಿದುಕೊಂಡು ಭೈಯ್ಯಾನ ಸ್ವೀಟ್ ದುಕಾನಿನಿಂದ ಸೇವು, ಉಂಡಿ, ಮೈಸೂರ ಪಾಕ್, ಭಜಿ, ಮೊದಲಾದ ತಿಂಡಿಗಳನ್ನು ಖರೀದಿಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ “ಒಂದು ಪಯಣ ಪ್ರಸಂಗ”

Read More

ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

ಮಗುವಿಗೆ ಒಂದು ವರ್ಷ ತುಂಬಿದಾಗ ಮಾತನಾಡಲು ಶುರುಮಾಡಿತು. ಅವಳು ತನ್ನ ಮಗು ಅಮ್ಮ ಎನ್ನಲಿ ಎಂದು ಕಾಯುತ್ತಿದ್ದಳು. ಆದರೆ ಅದು “ಓನ್ಯಾಸಿ” ಎನ್ನತೊಡಗಿತು. ಇದ್ಯಾವ ಶಬ್ದ, ಭಾಷೆ ಎಂದು ಅವಳಿಗೆ ತಕ್ಷಣ ಹೊಳೆಯಲಿಲ್ಲ. ತನ್ನ ನೆನಪುಗಳನ್ನು ಹರವಿ ಪರಿಶೀಲಿಸಿದಾಗ ಅದು ರಾಜೀವ್ 747 ಅವಳಿಗೆ ಹೇಳಿದ ಮೊದಲ ಪದವಾಗಿತ್ತು. ನಾನೇ ಹೆತ್ತು ಹೊತ್ತು ಸಾಕಿದರೂ ಅವನ ಭಾಷೆ ಮಾತನಾಡುತ್ತಿದೆಯಲ್ಲ ಎಂದು ಅವಳಿಗೆ ದುಃಖವಾಯಿತು, ಸಿಟ್ಟೂ ಬಂತು.
ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

Read More

ಸಂಜೋತಾ ಪುರೋಹಿತ್ ಅನುವಾದಿಸಿದ ರಾಬರ್ಟ್‌ ಬಾರ್ರ್ ಕತೆ

ಹ್ಯಾಂಗಿಂಗ್ ಒವರ್‌ಲುಕ್ ತಲುಪಲು ಕೆಲವೇ ಹೆಜ್ಜೆಗಳು ಬಾಕಿಯಿದ್ದವು. ಅದನ್ನು ತಲುಪುವವರೆಗೂ ಆಕೆ ‘ನಾವು ಒಬ್ಬರಿಗೊಬ್ಬರು ತಳುಕು ಹಾಕಿಕೊಂಡಿದ್ದೇವೆ’ ಎಂದು ಮತ್ತೆ ಮತ್ತೆ ತನಗೊಬ್ಬಳಿಗೇ ಕೇಳಿಸುವಂತೆ ಹೇಳಿಕೊಂಡಳು. ಜಾನ್ ಬೋಡಮ್ಯಾನ್ ಶಿಥಿಲವಾಗಿದ್ದ ಆ ಗೋಡೆಯ ಮೇಲೆ ಕುಳಿತ. ಕೈಯ್ಯಲ್ಲಿದ್ದ ಕೋಲನ್ನು ಬಂಡೆಯ ಮೇಲಿಟ್ಟು ಆಕೆ ಅತ್ತಿಂದಿತ್ತ ಓಡಾಡಿದಳು. ಅವಳ ಹೆಜ್ಜೆಗಳಲ್ಲಿ ಭಯ ಇಣುಕುತ್ತಿತ್ತು.
ಸಂಜೋತಾ ಪುರೋಹಿತ್ ಅನುವಾದಿಸಿದ ಸ್ಕಾಟಿಶ್‌- ಕೆನಡಿಯನ್‌ ಕತೆಗಾರ ರಾಬರ್ಟ್‌ ಬಾರ್ರ್ ಕತೆ “ಒಂದು ಆಲ್ಪೈನ್‌ ವಿಚ್ಛೇದನ” ನಿಮ್ಮ ಓದಿಗೆ

Read More

ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ “ಅಮೀನಾ”

ಮುರುಳಿಯ ಹೆಸರು ಹೇಳುತ್ತಲೇ ಮೆತ್ತಗಾಗಿದ್ದ ಅಮೀನಾ ತನ್ನ ಕತೆಯನ್ನು ಎಲ್ಲಿಂದ ಆರಂಭಿಸಬೇಕೆಂದು ಯೋಚಿಸಲಾರಂಭಿಸಿದಳು ‘ನಂಗೆ ನೆನಪಿರುವಂತೆ ನನ್ನ ಅಪ್ಪ ಲಾಡ್‌ ಸಾಬ್‌ ಗುಜುರಿ ಕೆಲಸ ಮಾಡುತ್ತಿದ್ದ, ದುಡಿದದ್ದಕ್ಕಿಂತ ಸೈಕಲ್‌ ತುಳಿದದ್ದೇ ಹೆಚ್ಚು. ಸೈಕಲ್ಲು ಚಲಿಸಿದರೆ ನಮ್ಮ ಬದುಕೂ ಚಲಿಸುತ್ತಿತ್ತು. ಅಮ್ಮಿ ಮನೇಲಿ ಬೀಡಿಯ ಜೊತೆ ನಮ್ಮ ಬದುಕನ್ನೂ ಕಟ್ಟುತ್ತಿದ್ದಳು…”
ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ

Read More

ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕಥೆ “ಜಾದೂ”

‘ಈಗ ನೋಡಿ ಅಸಲೀ ಝಗಡ ಷುರೂ. ಹಾವು ಮುಂಗೂಸ್ ಝಗಡʼ ಅಂದ. ಬುಟ್ಟಿ ಮುಚ್ಚಳ ತೆಗೆದ. ಹಾವು ಹೆಡೆ ಎತ್ತಿತು. ಪುಂಗಿ ಊದುತ್ತಾ ಮುಷ್ಠೀನ ಹಿಡಿದು, ಕಚ್ಚಲಿ ಅನ್ನೋ ಥರ ಆಡಿಸಿದ. ಅದು ಕಚ್ಚೋಕೆ ಬಂದರೆ ಮುಷ್ಠೀನ್ನ ಹಿಂದಕ್ಕೆಳೆದುಕೋತಾ ಇದ್ದ. ಇವನು ಹಾವು ಮುಂಗುಸಿ ಜಗಳ ತೋರಿಸ್ತಾ ಇಲ್ಲವಲ್ಲ. ಜಗಳ ತೋರಿಸ್ರೀ ಅಂತ ಕೇಳ್ಳಾ? ಬೇಡಪ್ಪಾ. ಆಮೇಲೆ ನನಗಿನ್ನೇನಾದರೂ ಮಾಡಿಬಿಟ್ಟರೆ ಕಷ್ಟ. ಅವನ ಸಹವಾಸಾನೇ ಬೇಡ. ಕಾಯ್ತಾ ನಿಂತೆ. ‘ಜೋರ್‌ ಸೇ ತಾಲಿ ಬಜಾವೋʼ ಅಂದ.
ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕತೆ “ಜಾದೂ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ