Advertisement

Category: ವಾರದ ಕಥೆ

ಸಿಡ್ನಿ ಶ್ರೀನಿವಾಸ್ ಬರೆದ ಈ ಭಾನುವಾರದ ಕತೆ “ಎರವಲು ಗೆಳತಿ”

ಸಾಮಾನ್ಯವಾಗಿ ಇಂತಹ ದಿನಗಳಂದು ವಿದ್ಯಾರ್ಥಿಗಳು ತಮ್ಮ ಗೆಳತಿಯರೊಡನೆ ರಾತ್ರಿ ಸಂಚಾರ ಮಾಡುವುದು ಪದ್ಧತಿ. ಬೀದಿಗಳಲ್ಲಿ ತಿರುಗಿ ಯಾವುದಾದರೂ ಪಾರ್ಕಿನಲ್ಲಿ ಎಲ್ಲರೂ ಕುಳಿತು ಮೋಜುಮಾಡುವ ಪರಿಪಾಠ. ಕೆಲವರು ಕದ್ದು ಪಾನೀಯಗಳನ್ನು ತಂದು ಎಲ್ಲರೂ ಕುಡಿದು ಸಂತೋಷ ಪಡುತ್ತಾರೆ. ಸಿನೆಮಾ ನೋಡುತ್ತಾರೆ. ಹಿಂದೆ ಸುರೇಶ್ ಕೂಡ ಇಂತಹ ಹುಡುಗರನ್ನು ಕೂಡಿದ್ದುಂಟು. ಆದರೆ ಇಂದು ಅವನಿಗೆ ಏನೂ ಬೇಕಾಗಿರಲಿಲ್ಲ.
ಸಿಡ್ನಿ ಶ್ರೀನಿವಾಸ್ ಬರೆದ ಈ ಕತೆ “ಎರವಲು ಗೆಳತಿ” ನಿಮ್ಮ ಈ ಭಾನುವಾರದ ಓದಿಗೆ

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ಎನುಗಂಟಿ ವೇಣುಗೋಪಾಲ್ ತೆಲುಗು ಕತೆ

“ಬಹಳ ದೂರ ಬಂದ ಮೇಲೆ ನೀವು ಎದುರಾದಿರಿ” ಎಂದು ಹೇಳುವುದು ಮುಗಿದ ಮೇಲೆ ಉಳಿದ ಅರ್ಧ ಗ್ಲಾಸ್ ಮದ್ಯವನ್ನು ಖಾಲಿ ಮಾಡಿದ ರಂಜಿತ್. “ಇಗೋ ಪುರಾವೆ… ನನ್ನ ಕೈ ಮೇಲಿನ ಗಾಯ” ಎನ್ನುತ್ತಾ ಬಲಗೈಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ತೋರಿಸಿದ ರಂಜಿತ್. “ಹೌದು, ಆಗ ನೀವು ಬಲಗೈಯಿಂದ ಲಿಫ್ಟ್ ಕೇಳಿದಾಗ ಬೀದಿ ದೀಪದ ಬೆಳಕಿನಲ್ಲಿ ಗಮನಿಸಿದೆ. ಆ ಗಾಯ ನೋಡಿಯೇ ಲಿಫ್ಟ್ ಕೊಟ್ಟೆ” ಎಂದ ವಾಸುದೇವ ರಾವ್. ರಂಜಿತ್ ಒಮ್ಮೆಲೇ ದಂಗಾದನು. “ಆತಂಕ ಪಡಬೇಡಿ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಕತೆಗಾರ ಎನುಗಂಟಿ ವೇಣುಗೋಪಾಲ್ ಅವರ ಕತೆ “ಚೋರಿ”

Read More

ಪ್ರವೀಣ್ ಕುಮಾರ್ ಜಿ. ಬರೆದ ಈ ಭಾನುವಾರದ ಕತೆ “ಈಡು ಜೋಡು”

ಇತ್ತ ಬಾಮೈದನು ತನ್ನ ಬಲಗೈಯಲ್ಲಿ ಉಂಗುರ ಹಿಡಿದು, ಎಡಗೈಯಲ್ಲಿ ಮಂಜನ ಕೈ ಹಿಡಿದು ತೊಡಿಸಲು ಮುಂದಾದಾಗ ಮೊದಲಿಗೆ ಮಂಜನ ಕೈ ಮೇಲೇಳಲಿಲ್ಲ. ಅಕ್ಕನ ಅಳುವಿನಲ್ಲಿ ತಾನೂ ಕಣ್ತುಂಬಿಕೊಂಡಿದ್ದ ಬಾಮೈದ ಉಂಗುರವನ್ನು ಮತ್ತೆ ಬೆರಳ ಹತ್ತಿರ ಹೊಯ್ದಾಗ ಮಂಜನ ಕೈ ಇನ್ನಶ್ಟು ಹಟ ಮಾಡಿತು. ಬಾಮೈದ ಮಂಜನನ್ನು ನೋಡಿದ, ಮಂಜನ ಮಾರಿ ನೆಲ ನೋಡುತ್ತಾ, ಬೇಡ ಬೇಡ ಎಂಬಂತೆ ಅತ್ತಿತ್ತ ಒದರಾಡುತ್ತಿತ್ತು. ಬಾಮೈದ ಮಾವನವರನ್ನು ನೋಡಿದ, ಸುತ್ತಿನವರು ಇನ್ನೂ ಬೆರಳು ಏರದ ಉಂಗುರವನ್ನೇ ನೋಡುತ್ತಿದ್ದರು.
ಪ್ರವೀಣ್ ಕುಮಾರ್ ಜಿ. ಬರೆದ ಕತೆ “ಈಡು ಜೋಡು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾಗರೇಖಾ ಗಾಂವಕರ ಬರೆದ ಈ ಭಾನುವಾರದ ಕತೆ “ಸೋಡಿನಾಟ”

ನೌಕರಿ ಸೇರಿದ ಹೊಸದರಲ್ಲಿ ಅಪ್ಪನ ಉಮೇದಿಗೆ ಕಡಿಮೆ ಇರಲಿಲ್ಲ. ಸಾಯುವವರೆಗೂ ಮನೆಯ ಜವಾಬ್ದಾರಿ ನಿಭಾಯಿಸುತ್ತಾ ಬದುಕಿದ ಜೀವ ತನ್ನಪ್ಪ. ಸಾಯುವ ಹಿಂದಿನ ದಿನವೂ “ಅಪ್ಪಾ!! ಸುಸ್ತಾಗಿದೆ ನಿಂಗೆ. ಮನಿಕಾ” ಎಂದು ಹಾಸಿಗೆ ಜಾಡಿಸಿ ತಲೆದಿಂಬು ಸರಿ ಮಾಡಿಕೊಟ್ಟರೆ “ಮಾಬ್ಲೂ ಮಲಗುಲಾ ಮನೇ!! ಆ ಹಾಳೆ ಕಟ್ಟು ತಕಂಡ ಬಾ!!” ಎಂದು ತಮ್ಮ ಲೆಕ್ಕದ ಪುಸ್ತಕ ತರಿಸಿಕೊಂಡು ಆ ವರ್ಷದ ಖರ್ಚು ವೆಚ್ಚ ಬರೆದುದನ್ನು ಮತ್ತೊಮ್ಮೆ ಚೆಕ್ ಮಾಡಿದ್ದರು. “ಮಾಬ್ಲು ಗಿಡವಕ್ಕೆ ಈ ಸಲ ಗೊಬ್ಬರ ಹಾಕಬೇಕಾಗತ. ಯಾರಿಗರೂ ಹೇಳ.
ನಾಗರೇಖಾ ಗಾಂವಕರ ಬರೆದ ಕತೆ “ಸೋಡಿನಾಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಭಿನ್ನ”

ಹೀಗೆ ಅಚಾನಕ್ಕಾಗಿ ಕೆಲಸ ಬಿಡುವ ನಿರ್ಧಾರ ತಿಳಿಸಿ ಹಿಂತಿರುಗಿ ನೋಡದೆ ಬೀಸುನಡಿಗೆಯಲ್ಲಿ ಎದ್ದು ಬರಬೇಕೆನ್ನುವ ತೀರ್ಮಾನ ಹಿಂದಿನ ರಾತ್ರಿ ಮೊಳಕೆಯೊಡೆದು ಬೆಳೆದು ಬೆಳೆದು ಬೃಹದಾಕಾರವಾಗಿ ಇವತ್ತು ಹರಿಣಿಯ ಮುಂದೆ ಕುಳಿತಾಗ ಹೇಳಲೇಬೇಕಾದ ಒತ್ತಡ ಸೃಷ್ಟಿಸಿತ್ತು. ಎಂದಿನಂತೆ ಮೀಟಿಂಗ್ ರೂಮಲ್ಲಿ ಸಿಗದೆ ತನ್ನ ಕ್ಯಾಬಿನ್ನಿಗೆ ಕರೆಸಿ ಕೂರಿಸಿದಾಗಲೇ ಹರಿಣಿ ತನ್ನ ಅಧಿಕಾರ ಪ್ರದರ್ಶನ ಮಾಡಿಯೇ ತೀರುವ ಸೂಚನೆ ಸಿಕ್ಕಿತ್ತು.
ಎಸ್. ನಾಗಶ್ರೀ ಅಜಯ್ ಹೊಸ ಕಥಾ ಸಂಕಲನ “ಕಡೆ ಹಾಯ್ವ ದೋಣಿ”ಯ ಒಂದು ಕತೆ “ಭಿನ್ನ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ