Advertisement

Category: ವಾರದ ಕಥೆ

ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ಭಾನುವಾರದ ಕತೆ “ಹರಿವ ಹೊಳೆಯ ಜೊತೆಯಲ್ಲಿ….”

ಮೈಲಾರಿಗೆ ಗೆಳೆಯನ ಅಪಾರ್ಥಕ್ಕಿಂತ, ಕಣ್ಮುಂದಿನ ಸಾವಿಗಿಂತ ಹೆಂಡತಿ ಪ್ರತಿಭಟಿಸದೇ ದೂರ ನಿಂತಿದ್ದು ಜೀರ್ಣಿಸಿಕೊಳ್ಳಲಾಗಲಿಲ್ಲ. ಕೈ ಮುಗಿಯುವಂತೆ ಕಣ್ಣಲ್ಲಿ ನೀರು ತಂದು ನಾನೇನೂ ತಪ್ ಮಾಡಿಲ್ಲ ಅನ್ನುವಂತೆ ಆಚೀಚೆ ಕತ್ತು ಆಡಿಸುತ್ತಾ ಒದ್ದಾಡುತ್ತಿದ್ದ. ಕೈಯ ಬಿಗಿತ ಜೋರಾದಂತೆ ಮೈಲಾರಿ ಕಣ್ಣು ಮ್ಯಾಲೆ ಕೆಳಗೆ ಮಾಡ್ತಿದ್ದ. ಗಂಟಲಲ್ಲಿ ಸರ್ ಸರ್ ಅನ್ನೋ ಸದ್ದು ಬಂದು ಒಂದೇ ಸಾರಿ ಶಬ್ಧ ನಿಶಬ್ಧವಾಯಿತು.
ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ಭಾನುವಾರದ ಕತೆ “ಹರಿವ ಹೊಳೆಯ ಜೊತೆಯಲ್ಲಿ….” ನಿಮ್ಮ ಓದಿಗೆ

Read More

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು”

ಅವರು ಹೇಳಿದ ದ್ವೀಪವಾಸಿ ಮುತ್ತುಕೋಯಾನ ಕಥೆಯನ್ನು ಕೇಳಿದರೆ ಏಕಕಾಲದಲ್ಲಿ ನಗುವೂ ವಿಷಾದವೂ ಖೇದವೂ ನಗುವೂ, ವಿಷಾದವೂ, ಖೇದವೂ, ವೈರಾಗ್ಯವೂ ಉಂಟಾಗುವ ಹಾಗೆ ಇತ್ತು. ಮುಕ್ತಿಯಾರರು ಹೇಳಿದ ಹಾಗೆ ಮುತ್ತುಕೋಯಾರಿಗೆ ಸುಮಾರು ಎಂಬತ್ತರ ಆಸುಪಾಸು ವಯಸ್ಸು ಇರಬಹುದು.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು” ನಿಮ್ಮ ಓದಿಗೆ

Read More

ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ “ಗುಡ್‌ವಿಲ್”

ನಿನ್ನೆ ಜಗಳವಾದ ಮೇಲೂ ರಾಘವ ಹೇಳಿದಂತೆ ಕೇಳಬೇಕಿತ್ತು. ನೀನು ಸುಮ್ಮನಿದ್ದಿದ್ದರೆ ಮುಗಿಯುತ್ತಿತ್ತು. ಎಂಬವನ ಮಾತು ಸರಿಯಾಗಿತ್ತು. ಮಾತಿನ ಬರದಲ್ಲಾದ ತಪ್ಪಿಗೆ ಇವತ್ತು ಮ್ಯಾನೇಜ್‌ಮೆಂಟ್‌ನಲ್ಲಿ ತಾನು ಅಪರಾಧಿಯ ಸ್ಥಾನದಲ್ಲಿದ್ದೇನೆ. ಅವಳು ನನ್ನ ಭಾಷೆಯ ಬಗ್ಗೆ ಹಾಗೆ ಮಾತಾಡಿದ್ದು ತನಗೆ ಹಿಡಿಸಲಿಲ್ಲ, ಅಲ್ಲದೇ ಅದು ಸರ್ಕಾರದ ಪ್ರಾಜೆಕ್ಟ್ ಮತ್ತು ಈ ಪ್ರಾಜೆಕ್ಟಿನ ಎಲ್ಲ ಕಡತಗಳನ್ನು ಸರ್ಕಾರ ಕನ್ನಡದಲ್ಲೇ ಮಂಡಿಸುವುದು. ಇಂಥ ಸ್ಟೇಟ್ ಕನ್ನಡ ಪ್ರಾಜೆಕ್ಟ್‌ನಲ್ಲಿ ಇದ್ದುಕೊಂಡೇ ಹೀಗೇ ಮಾತಾಡುವವರು ಇನ್ನೂ ಎಂ.ಎನ್.ಸಿ. ಕಂಪನಿಯಲ್ಲಿದ್ದರೆ ಕನ್ನಡವನ್ನು ಸಾಯಿಸಿಯೇ ಬಿಡುತ್ತಾರೆ, ಭಾಷೆ ವಿಚಾರದಲ್ಲಿ ನಾನು ಮಾಡಿದ್ದೆ ಸರಿ ಎನಿಸಿತವಗೆ.
ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ “ಗುಡ್‌ವಿಲ್”

Read More

ವಾಸುಕಿ ಸಿ.ಜಿ ಬರೆದ ಈ ಭಾನುವಾರದ ಕತೆ “ಮುಗಿಲ ಒಗಟು ಮತ್ತು ಮಣ್ಣಿನ ಮಲ್ಲಯುದ್ಧ”

ನವತೀರದಲ್ಲಿ, ಒಂದು ಸಂಜೆ ಮೀರಾ ದಿಬ್ಬದ ಮೇಲೆ ನಿಂತು, ಲೈಟ್‌ಹೌಸ್ ಇದ್ದ ಜಾಗವನ್ನೇ ನೋಡುತ್ತಿದ್ದಳು. ನಮಗೆ ಪ್ರಿಯವಾದವರನ್ನು ಕಳೆದುಕೊಂಡಾಗ ನಾವು ಲೆಕ್ಕ ಹಾಕುತ್ತೇವಲ್ಲಾ – ಅವರು ನಮಗೆ ಏನು ಕೊಟ್ಟರು, ಏನನ್ನು ಅರ್ಧಕ್ಕೇ ಬಿಟ್ಟುಹೋದರು, ಅವರನ್ನು ನೋಡಿಯೇ ನಾವು ಏನೇನು ಕಲಿತೆವು ಎಂದು – ಹಾಗೆ ಅವಳೂ ಲೆಕ್ಕ ಹಾಕುತ್ತಿದ್ದಳು. ತನ್ನ ಅಣ್ಣನ ಕೆಲಸದ ರೀತಿ, ಆತನ ಏಕಾಗ್ರತೆ, ಸಮಸ್ಯೆ ಕಂಡರೆ ಬಿಡದೆ ಅಂಟಿಕೊಳ್ಳುವ ಅವನ ಛಲ – ಎಲ್ಲವನ್ನೂ ನೆನಪಿಸಿಕೊಂಡಳು.
ವಾಸುಕಿ ಸಿ.ಜಿ ಬರೆದ ಈ ಭಾನುವಾರದ ಕತೆ “ಮುಗಿಲ ಒಗಟು ಮತ್ತು ಮಣ್ಣಿನ ಮಲ್ಲಯುದ್ಧ”

Read More

ಆರ್.‌ ಪವನ್‌ ಕುಮಾರ್‌ ಬರೆದ ಈ ಭಾನುವಾರದ ಕತೆ “ಗುರುತು”

ಸರೋಜಮ್ಮ ಇದನ್ನು ಸರಿ ತಪ್ಪು ಎಂದು ತರ್ಕ ಮಾಡಲು ಹೋಗಲಿಲ್ಲ. ಅವಳೊಳಗೆ ಹೆಣ್ಣಿನ ಅಂತರಂಗದ ತುಮುಲಗಳ ಬಗ್ಗೆ ಗೌರವವಿದ್ದು, ಅದಕ್ಕೆ ಗಂಡು ಸೂಕ್ತವಾಗಿ ಪ್ರತಿಕ್ರಿಯಿಸದೆ ಹೋದರೆ ಇಂಥವೆಲ್ಲಾ ಘಟಿಸಿ ಹೋಗುತ್ತವೆ ಎಂದುಕೊಂಡಿದ್ದಳು. ತನ್ನ ಮಗ ಇದರಲ್ಲಿ ಸಂಪೂರ್ಣ ಸೋತವನೆಂದು ಅರಿವಾಗಿತ್ತು. ಇನ್ನೂ ಮಗನೂ ಅಷ್ಟೇ ತನ್ನ ಚಟಗಳಿಗೆ ಇದನ್ನೆ ಮತ್ತೊಂದು ನೆಪ ಮಾಡಿಕೊಂಡವನು ಮನೆ ಮರೆತು ತನಗೆ ಅನುಕೂಲವಾದ ಕಡೆ ತಿರುಗುತ್ತ ಎಂದಾದರೊಮ್ಮೆ ಮನೆಗೆ ಬರುತ್ತಿದ್ದ.
ಆರ್.‌ ಪವನ್‌ ಕುಮಾರ್‌ ಬರೆದ ಕತೆ “ಗುರುತು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ