Advertisement

Category: ವಾರದ ಕಥೆ

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ.
ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಧುಸೂದನ ವೈ. ಎನ್. ಕತೆ

ಅವಳು ಚಡಪಡಿಸಿದಳು. ಮುಷ್ಠಿ ಬಿಗಿ ಹಿಡಿದಳು. ಉಗಿದು ಅವನನ್ನು ಓಡಿಸುವುದೋ, ಅಥವಾ ಕಿರುಚಿಕೊಳ್ಳುವುದೋ ಗೊತ್ತಾಗಲಿಲ್ಲ. ಸುಮ್ಮನೆ ನಿರ್ಲಕ್ಷಿಸಿ ನಿಂತರೆ ಹೇಗೆ, ಯೋಚಿಸಿದಳು. ಅವನು ಇದಾವುದರ ಪರಿವೆಯೆ ಇಲ್ಲದಂತೆ ಬಜ್ಜಿ ತಿನ್ನುತ್ತಲೆ ಇದ್ದ. ಅವಕಾಶ ಸಿಕ್ಕಂತೆಲ್ಲ ಅವನು ಹತ್ತಿರ ಸರಿಯುತ್ತಿರುವುದು ಅವಳಿಗೆ ಸ್ಪಷ್ಟವಾಗಿ ಗೊತ್ತಾಗುತ್ತಿತ್ತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಮಧುಸೂದನ ವೈ. ಎನ್. ಬರೆದ ಕತೆ “ಬೋಣಿ”

Read More

ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮಾರನ ಕನಸು ನನಸಾಗಲಿಲ್ಲ. ಮಣ್ಣು ಸೇರಿತ್ತು. ಮಾರನ ತತ್ಕಾಲದ ಜನಪ್ರಿಯತೆಯನ್ನು ಮಾತ್ರವೇ ನಂಬಿಕೊಂಡಿದ್ದ ಆ ಸಿನಿಮಾ ಚೆನ್ನಾಗಿ ಓಡಲಿಲ್ಲ. “ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಯೇ ಮಾಡುತ್ತದೆ. ಸಿನಿಮಾ ಹಿಟ್ ಆದಮೇಲೆ ನಿನಗೆ ಎಂಟು ಲಕ್ಷ ಕೊಡುತ್ತೇವೆ” ಎಂದು ನಂಬಿಸಿದ್ದ ನಿರ್ದೇಶಕ- ನಿರ್ಮಾಪಕರು ಆಮೇಲೆ ಕೈ ಕೊಟ್ಟಿದ್ದರು. ಸಿನಿಮಾ ಆರಂಭದ ಸಂದರ್ಭದಲ್ಲಿ ಕೊಟ್ಟಿದ್ದ ಹನ್ನೆರಡು ಸಾವಿರ ಮಾತ್ರ ಮಾರನ ಪಾಲಿಗೆ ದಕ್ಕಿದ್ದು.
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಕಥೆ “ಮಾರ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕತೆ

ಭಾಳ ಸಿಹಿಸುದ್ದಿಯೇನೂ ಅಲ್ಲ. ಆದರೂ, ಕಹಿಯಂತೂ ಅಲ್ಲಲ. ತೇರಿಗೆ ಹೂವುಹಣ್ಣು ಹಾಕವರಿದ್ರ ಇವತ್ತೇ ತಗೊಂಡು ತಯಾರಾಗ್ರಿ. ನಾಳೆ ಶಿಗತಾವೋ ಇಲ್ಲೋ. ಭಯಂಕರ ತುಟ್ಟಿನು ಇರತಾವು. ಬಿಸಿಲು ಏರಾಕ ಹೊಂಟೈತಿ. ಜರಾ ಚಹಾ ಕುಡೀತಿರೇನು ನೋಡ್ರಿ, ಹೇಳುತ್ತ ತಾನೂ ಹಗುರಾದಂತೆ ಬೋಲ್ಡಿ ಬಾಬಾ ಕೊಳವೆಗೆ ತಂಬಾಕು ತುಂಬಿ ಕಿಡಿ ಹಚ್ಚಿದ. ರುಕುಮವ್ವ, ಚಂದ್ರವ್ವಳನ್ನು ಕೈಯಿಂದ ಎಳೆದುಕೊಳ್ಳುತ್ತ ಬೆನ್ನು ಸವರಿ, ಸಮಾಧಾನ ಆತಿಲ್ಲವಾ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕಥೆ

Read More

ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ

ಏನಾಗುತ್ತಿದೆಯೆಂದು ಅವರಿಗೆ ಅರ್ಥವಾಗುವ ಮೊದಲೇ ಬೆಂಕಿ ಅರ್ಧದಷ್ಟು ತೋಟಕ್ಕೆ ವ್ಯಾಪಿಸಿತ್ತು. ಅನಿರೀಕ್ಷಿತವಾಗಿ ಘಟಿಸಿದ ಅನಾಹುತ ಕಂಡು ಮಾತುಹೊರಡದೇ ನಿಂತಿದ್ದ ಅಂಬಿಕಾ ಈಗ ಜೋರಾಗಿ ಕಿರುಚಲಾರಂಭಿಸಿದರು. “ಅಯ್ಯೋ, ಯಾರಾದರೂ ಓಡಿ ಬನ್ನಿ.. ನಮ್ಮನ್ನು ಕಾಪಾಡಿ… ಯಾರಾದರೂ ಬನ್ನಿ, ಬೆಂಕಿ ನಂದಿಸಿ….” ನೆರೆಮನೆಯಿಂದ ಕೇಳಿದ ಆರ್ತನಾದ, ಎತ್ತರದಲ್ಲಿ ಕಾಣುತ್ತಿರುವ ಬೆಂಕಿಯ ಕೆನ್ನಾಲಿಗೆ, ಆಗಿರಬಹುದಾದ ಅನಾಹುತದ ಚಿತ್ರಣವನ್ನು ಶಂಕರಣ್ಣನಿಗೆ ಕಟ್ಟಿಕೊಟ್ಟಿತು.
ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ “ಹೊರಗಿನ ಬೆಂಕಿ ಮತ್ತು ಒಳಗಿನ ಕಳೆ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ