Advertisement

Category: ವಾರದ ಕಥೆ

ಮಂಜಯ್ಯ ದೇವರಮನಿ ಬರೆದ ಈ ಭಾನುವಾರದ ಕತೆ

ಶಾರವ್ವನಿಗೆ ಶಿವರುದ್ರಯ್ಯನ ಇಂಥ ನಡವಳಿಕೆ ವಿಚಿತ್ರವೆನಿಸಿತು. ದೇವರ ಹೊಲ ತನ್ನ ಗಂಡನಿಗೆ ಕೊಡಿಸ್ತೀನಿ ಅಂತಾ ಪೂಜಾರಪ್ಪ ಹೇಳಿದ್ದು ತನಗೆ ಗೊತ್ತಿತ್ತು. ಸಿಗಬೇಕು ಎಂಬ ವಿಚಾರದಲ್ಲಿ ಒಂದು ಒಪ್ಪಂದವಾಗಿತ್ತು ಎನ್ನುವುದು ಪೂಜಾರಪ್ಪ ಮತ್ತು ತನಗೆ ಮಾತ್ರ ಗೊತ್ತಿದ್ದ ವಿಷಯವಾಗಿತ್ತು. ಆದರೆ ಶಿವರುದ್ರಯ್ಯ ಗುಡಿ ಪೂಜಾರಿ ಕ್ರಿಷ್ಣಪ್ಪನ ಮುಖಾಂತರ ಹೇಳಿಸಿ ತನ್ನ ಉದ್ದೇಶ ಸಾಧನೆಗೆ ಮುಂದಾಗಿದ್ದ. ಕ್ರಿಷ್ಣಪ್ಪ ಉದ್ದೇಶದ ಮೂಲವನ್ನು ಪೂರ್ತಿಯಾಗಿ ಹೇಳದೆ ಪರವಾಗಿ ಎನ್ನುವಂತೆ ಹೇಳಿ ಶಾರವ್ವನನ್ನು ಒಪ್ಪಿಸಿದ್ದ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎನ್. ಜಗದೀಶ್ ಕೊಪ್ಪ ಬರೆದ ಕತೆ

ಹಿಂದೆ ಬಂದರೆ ಒದೆಯದ, ಮುಂದೆ ಬಂದರೆ ಹಾಯದ ಹಸುವಿನಂತಹ ಗುಣದ ಪುಗಸಟ್ಟೆ ಪುಟ್ಟರಾಜನ ಬಗ್ಗೆ ಊರಿನ ಜನರಿಗೆಲ್ಲಾ ಅಪಾರ ಪ್ರೀತಿ. ಏನೇ ಕೆಲಸ ಹೇಳಿದರೂ ಸಹ ಇಲ್ಲವೆನ್ನದೆ ಮಾಡುತ್ತಿದ್ದ ಪುಟ್ಟರಾಜ, ನೆರೆ ಹೊರೆಯ ಹಳ್ಳಿಗಳಿಗೆ ಹೋಗಿ ತೆಂಗಿನ ಮರ ಹತ್ತಿ ಕಾಯಿ ಕೀಳುವುದು, ಸುಲಿಯುವುದು, ಕಳೆ ಕೀಳುವುದು ಹೀಗೆ ನೂರೆಂಟು ಕೆಲಸಗಳನ್ನು ಪ್ರೀತಿಯಿಂದ ಮಾಡಿ ಬರುತ್ತಿದ್ದ. ಅವರು ಉಣ್ಣಲು ಅಥವಾ ಕುಡಿಯಲು ಏನಾದರೂ ಕೊಟ್ಟರೆ ಅದೇ ಅವನ ಪಾಲಿಗೆ ಪ್ರಸಾದವಾಗಿತ್ತು. ಡಾ. ಎನ್. ಜಗದೀಶ್ ಕೊಪ್ಪ ಬರೆದ ಕಥೆ

Read More

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

“ಆ ಮುದ್ಕ ಸಂಕ್ರಪ್ಪ ದೇವಮ್ಮಕ್ಕನ ಗಂಡನೇ ಅಲ್ವಂತೆ. ಅವನೂರಾಗೆ ಬ್ಯಾರೆ ಸಂಸಾರ ಅದೆ. ಈವಮ್ಮಂಗೂ ಮಕ್ಕಳು ಮರಿ ಅವೆ. ಈ ವಯಸ್ನಾಗೆ ಈವಪ್ಪನ ಹಿಂದೆ ಓಡ್‌ಬಂದದೆ. ಸಂಕ್ರಪ್ಪಂಗೆ ರಿಟೈರ್ ಆಯ್ತಂತೆ. ಅದಕ್ಕೇ ಈಗ ಆವಯ್ಯನ್ನ ಬಿಟ್ಟು ಇನ್ನೆತ್ಲಾಗೋ ಹೋಗದೆ; ಘಾಟಿ ಹೆಂಗ್ಸು’ ಓನರ್ ಆಂಟಿಯಂತೂ ತಿಂಗಳೊಪ್ಪತ್ತು ಹೊಸರಾಗ, ಹಳೆರಾಗ ಎಲ್ಲವನ್ನೂ ಬೆರೆಸಿ ಹಾಡಿದರು. ಅಷ್ಟೆಲ್ಲ ಅಕ್ಕರೆಯ ಒರತೆಯಾಗಿರುವ ದೇವಮ್ಮಕ್ಕನ ನಿಜ ಬಣ್ಣ ಹೀಗಿರಬಹುದಾ ಎಂಬ ಅಚ್ಚರಿ ಮಲ್ಲಿಕಾಳಿಗೆ. ವಿಜಯಶ್ರೀ ಹಾಲಾಡಿ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ ಕತೆ

ಅವತ್ತೆ ಹುಚ್ಚರಾಮ ನಿಶ್ಚಯಿಸಿಬಿಟ್ಟ. ಅವ್ವಗೆ ಹೇಳಿ ತಾನು ಹ್ಯಾಂಗಾದರೂ ಮಾಡಿ ಯಾವ ಹೆಂಗ್ಸನ್ನಾದರೂ ಲಗ್ನ ಆಗಿ ಬಿಡಬೇಕು. ನಾಳೆಯೇ ಅವ್ವಳನ್ನು ಕೇಳಿಬಿಡಬೇಕು. ಅವ್ವ ಯಾರನ್ನಾದರೂ ತಂದು ನನಗೆ ಗಂಟು ಹಾಕಿಯೇ ಹಾಕುತ್ತಾಳೆ ಎಂಬ ಭರವಸೆಯೊಂದಿಗೆ ಆತ ಅವತ್ತು ಮಲಗಲು ಪ್ರಯತ್ನಿಸಿದ. ಆದರೆ ಮಲಗಲು ಪ್ರಯತ್ನಿಸಿದ್ದೆ ಬಂತು. ನಿದ್ದೆ ಹತ್ತಿರ ಸುಳಿಯಲಿಲ್ಲ. 
 ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ “ಸಕಲರೋಳು ಲಿಂಗಾತ್ಮಾ ಕಾಣಾ” ಕಥೆ ನಿಮ್ಮ ಈ ಭಾನುವಾರದ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್‌ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ