Advertisement

Category: ವಾರದ ಕಥೆ

ಭಾರತಿ ಬಿ.ವಿ. ಅನುವಾದಿಸಿದ ಮಾಂಟೋನ ಕತೆ “ದಾದಾ ಮಮ್ಮದ್”

ಬಾಗಿಲು ತೆರೆಯಿತು. ಒಬ್ಬ ಸಣಕಲು ಮನುಷ್ಯ ಒಳ ಬಂದ. ಮೊದಲ ನೋಟದಲ್ಲೇ ಅವನ ಮೀಸೆ ನನ್ನ ಗಮನ ಸೆಳೆಯಿತು. ನಿಜಕ್ಕೂ ಹೇಳಬೇಕೆಂದರೆ ಅವನ ಮೀಸೆಯಿಂದಲೇ ಅವನು ಎದ್ದು ಕಾಣುತ್ತಿದ್ದ, ಅದಿಲ್ಲದಿದ್ದರೆ ಯಾರೂ ಅವನ ಕಡೆಗೆ ಗಮನ ನೀಡದಂತಿದ್ದ ಆ ವ್ಯಕ್ತಿ. ಅವನು ತನ್ನ ಕೈಸರ್ ವಿಲ್ಹೆಮ್‌ ಮೀಸೆಯನ್ನು ಬೆರಳಿನಿಂದ ತೀಡಿಕೊಳ್ಳುತ್ತ ನನ್ನ ಮಂಚದ ಬಳಿ ಬಂದ. ಅವನ ಹಿಂದೆಯೇ ಒಂದಿಷ್ಟು ಜನರು ಒಳಬಂದರು. ಸಾದತ್‌ ಹಸನ್ ಮಾಂಟೋನ ಕತೆಗಳನ್ನು ಭಾರತಿ ಬಿ.ವಿ. “ಯಕ್..” ಎನ್ನುವ ಸಂಕಲನದ ಶೀರ್ಷಿಕೆಯಡಿ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕತೆ ನಿಮ್ಮ ಓದಿಗೆ

Read More

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಸ್ವಂತ ಅವಳ ಮನೆದೇವ್ರು ಮಲ್ಲಮ್ಮನ ಪೂಜೆಯೊಳಗೆ, ಕಾರ್ತಿಕ್‌ಮಾಸದಲ್ಲಿ ನಡೀತಿದ್ದ ತಿಂಗಳ ಪೂಜೇಲಿ ಸಂಜೆಯೊಳಗೆ ಹಾಡೇಳಲು ಕುಂತುಕೊಳ್ಳುತ್ತಿದ್ದ ಸಂಕಮ್ಮ ಪೂಜೆ ಮುಗಿಯುವ ತನಕವು ಅವಳ ಗೆಳತಿಯರ ಜೊತೆ, ಶೃತಿ ಸೇರಸ್‌ಕೊಂಡು ಹೇಳ್‌ತಿದ್ದವಳನ್ನ, ಅಮ್ಮ ಸಾಕು ನಡೀರ್ರೆ ನಿದ್ದೆ ಬರ್‍ತೈತೆ ಅಂದ್ರು ನಿಲ್ಲಸ್ದಂಗೆ ಹೇಳಿ ಹೇಳಿ ದಣಿದು ಬಂದು ಮಲಗುತ್ತಿದ್ದವಳ ಹಾಡುಗಳನ್ನ ಈಗೀಗ ಅಷ್ಟಾಗಿ ಯಾರೂ ಕೇಳಿಸಿಕೊಳ್ಳದಾದರು…
ವಿಜಯಾ ಮೋಹನ್‌ ಬರೆದ ಹೊಸ ಕತೆ “ಹಾಡು” ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಕತೆ: ನಕ್ಕ ನಗು

ಅವಳು ಹೀಗೆ ನಗಲು ಪ್ರಾರಂಬಿಸಿದಳೆಂದರೆ ಉಳಿದವರಿಗೆ ಗಾಬರಿಯಾಗುತ್ತಿತ್ತು. ನಕ್ಕು ಸುಸ್ತಾಗಿ ಕಣ್ಣ ತುದಿಯಿಂದ ಹರಿವ ನೀರನ್ನು ಸೆರಗಿನಿಂದ ಒರೆಸಿಕೊಳ್ಳುತ್ತಾ, ಮುಖ ಕೆಂಪಗೆ ಮಾಡಿಕೊಂಡು, ನೂರರ ವೇಗದಲ್ಲಿ ಓಡುತ್ತಿರುವ ಗಾಡಿ ಸಡನ್ ಬ್ರೇಕ್ ಹಾಕಿದಂತೆ ಸುಮ್ಮನಾಗುತ್ತಿದ್ದಳು. ನಲವತ್ತೈದು ವರುಷದ ಅವಳ ದಾಂಪತ್ಯಕ್ಕೆ ವ್ಯಾಖ್ಯೆ ಬರೆದಂತೆ ಬಂಡೆಕಲ್ಲಿನಂತೆ ಕುಳಿತು ಬಿಡುತ್ತಿದ್ದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಬರೆದ ಕತೆ ‘ನಕ್ಕ ನಗು!

Read More

ಪವನ್‌ ಕುಮಾರ್‌ ಆರ್. ಬರೆದ ಈ ಭಾನುವಾರದ ಕತೆ

ಅಂಥ ಮಾತುಗಾರನಲ್ಲದೆ ಹೋದರು ವಸೀಬ ಶುದ್ಧ ವ್ಯವಹಾರಸ್ಥನಾಗಿದ್ದ. ಅವನ ಬಳಿ ಬರುವ ಗಿರಾಕಿಗಳೊಂದಿಗೆ ಹೇಗೆ ವರ್ತಿಸಿ ವಿಶ್ವಾಸಗಳಿಸಿಕೊಳ್ಳಬೇಕೆಂಬುದ ಸಾಕಷ್ಟು ಪ್ರಯತ್ನ ಪೂರ್ವಕವಾಗಿ ರೂಢಿಸಿಕೊಂಡಿದ್ದ. ಬೆಳಿಗ್ಗೆ 5ರ ಜಾವಕ್ಕೆ ಇವನ ಪೆಟ್ಟಿ ಅಂಗಡಿ ತನ್ನ ಜೋಡಿರೆಕ್ಕೆಯಂತ ಬಾಗಿಲುಗಳ ಬಿಡಿಸಿಕೊಳ್ಳುತ್ತಿತ್ತು. ಅಲ್ಲಿಗೆ ಅಂದಿನ ದಿನಪತ್ರಿಕೆಗಳೆಲ್ಲ ಬಂಡಲ್‌ನಲ್ಲಿ ಬಂದು ಬೀಳುತ್ತಿದ್ದವು. ಆರ್. ಪವನ್‌ ಕುಮಾರ್‌ ಬರೆದ ಈ ಭಾನುವಾರ್ದ ಕತೆ “ವಸೀಬ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ದೇವದಾಸ ಕಳಸದ ಕತೆ

ಇಲ್ಲಿ ದಡೂತೆಪ್ಪನ ಶೆಡ್ಡಿನ ಸಂಸಾರ ಮೂರ್ನಾಲ್ಕು ವರ್ಷ ನಿರಾಯಾಸವಾಗಿ ಸಾಗಿತು. ಕೂಡು ಸಂಸಾರದಿಂದ ಸಂಪಾದನೆಗೆ ಕುಂದೆಂದು ಭಾವಿಸಿದ್ದ ಚನ್ನಪ್ಪ ಪಕ್ಕದ ಬಡಾವಣೆಯಲ್ಲಿ ಬದುಕು ಕಟ್ಟಿಕೊಂಡಿದ್ದ. ವಾಚಮನ್ಕಿಯೊಂದಿಗೆ ಕಟ್ಟಡದ ಅನ್ಯ ಕೆಲಸಗಳಿಂದಲೂ ಗಳಿಕೆ ಹೆಚ್ಚಿಸಿಕೊಂಡಿದ್ದ. ಅವನಿಗೆ ಅಂಥ ಯಾವ ಚಟ ಇರಲಿಲ್ಲವೆಂದರೂ ರಾತ್ರಿ ಮಾತ್ರ ಅರವತ್ತು ಎಮ್ಮೆಲ್ ಬೇಕೇಬೇಕಿತ್ತು. ಆತನ ಅಕ್ಕ ಹನುಮವ್ವನೂ ಕಟ್ಟಡ ಕೆಲಸದಲ್ಲಿ ದುಡಿಯುತ್ತಿದ್ದಳು. ಡಾ. ದೇವದಾಸ ಕಳಸದ ಬರೆದ ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ