Advertisement

Category: ವಾರದ ಕಥೆ

ಆರ್.‌ ಪವನ್‌ ಕುಮಾರ್‌ ಬರೆದ ಈ ಭಾನುವಾರದ ಕತೆ “ಗುರುತು”

ಸರೋಜಮ್ಮ ಇದನ್ನು ಸರಿ ತಪ್ಪು ಎಂದು ತರ್ಕ ಮಾಡಲು ಹೋಗಲಿಲ್ಲ. ಅವಳೊಳಗೆ ಹೆಣ್ಣಿನ ಅಂತರಂಗದ ತುಮುಲಗಳ ಬಗ್ಗೆ ಗೌರವವಿದ್ದು, ಅದಕ್ಕೆ ಗಂಡು ಸೂಕ್ತವಾಗಿ ಪ್ರತಿಕ್ರಿಯಿಸದೆ ಹೋದರೆ ಇಂಥವೆಲ್ಲಾ ಘಟಿಸಿ ಹೋಗುತ್ತವೆ ಎಂದುಕೊಂಡಿದ್ದಳು. ತನ್ನ ಮಗ ಇದರಲ್ಲಿ ಸಂಪೂರ್ಣ ಸೋತವನೆಂದು ಅರಿವಾಗಿತ್ತು. ಇನ್ನೂ ಮಗನೂ ಅಷ್ಟೇ ತನ್ನ ಚಟಗಳಿಗೆ ಇದನ್ನೆ ಮತ್ತೊಂದು ನೆಪ ಮಾಡಿಕೊಂಡವನು ಮನೆ ಮರೆತು ತನಗೆ ಅನುಕೂಲವಾದ ಕಡೆ ತಿರುಗುತ್ತ ಎಂದಾದರೊಮ್ಮೆ ಮನೆಗೆ ಬರುತ್ತಿದ್ದ.
ಆರ್.‌ ಪವನ್‌ ಕುಮಾರ್‌ ಬರೆದ ಕತೆ “ಗುರುತು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ಕಾಕಮಂಡಲ ಮಧ್ಯದೊಳಗೆ…”

“ಧರ್ಮರಾಜನೇ, ಕರಣಿಕರೇ, ಕ್ಷಮಿಸಿ. ನಿಮ್ಮ ದೂತರಾದ ನಮಗೆ ನಿಮ್ಮ ನಿಯಮವೇ ವೇದವಾಕ್ಯ. ಆದರೆ ಕಾಕಮಂಕ ಮಾಡಿದ್ದು ಕೇವಲ ಹಸಿವಿನ ಅಚಾತುರ್ಯವಲ್ಲ, ಅದರ ಹಿಂದೆ ಒಂದು ಭಾವನಾತ್ಮಕ ಸತ್ಯವಿದೆ. ಸತ್ಯಪ್ಪ ಮಾಸ್ತರರು ಬದುಕಿದ್ದಾಗ ಕೇವಲ ಮನುಷ್ಯರಿಗೆ ಮಾತ್ರವಲ್ಲ, ನಮ್ಮಂತ ಪಶು-ಪಕ್ಷಿಗಳಿಗೂ ಅಕ್ಕರೆ ತೋರಿಸಿದವರು. ಅವರು ಪಾಠ ಮಾಡುವಾಗ ಮರದ ಮೇಲೆ ಕುಳಿತು ಪಾಠ ಕೇಳುತ್ತಿದ್ದವರಲ್ಲಿ ಈ ಮಂಕನೂ ಒಬ್ಬ.”
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ಕಾಕಮಂಡಲ ಮಧ್ಯದೊಳಗೆ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಸಿಡ್ನಿ ಶ್ರೀನಿವಾಸ್ ಬರೆದ ಈ ಭಾನುವಾರದ ಕತೆ “ಎರವಲು ಗೆಳತಿ”

ಸಾಮಾನ್ಯವಾಗಿ ಇಂತಹ ದಿನಗಳಂದು ವಿದ್ಯಾರ್ಥಿಗಳು ತಮ್ಮ ಗೆಳತಿಯರೊಡನೆ ರಾತ್ರಿ ಸಂಚಾರ ಮಾಡುವುದು ಪದ್ಧತಿ. ಬೀದಿಗಳಲ್ಲಿ ತಿರುಗಿ ಯಾವುದಾದರೂ ಪಾರ್ಕಿನಲ್ಲಿ ಎಲ್ಲರೂ ಕುಳಿತು ಮೋಜುಮಾಡುವ ಪರಿಪಾಠ. ಕೆಲವರು ಕದ್ದು ಪಾನೀಯಗಳನ್ನು ತಂದು ಎಲ್ಲರೂ ಕುಡಿದು ಸಂತೋಷ ಪಡುತ್ತಾರೆ. ಸಿನೆಮಾ ನೋಡುತ್ತಾರೆ. ಹಿಂದೆ ಸುರೇಶ್ ಕೂಡ ಇಂತಹ ಹುಡುಗರನ್ನು ಕೂಡಿದ್ದುಂಟು. ಆದರೆ ಇಂದು ಅವನಿಗೆ ಏನೂ ಬೇಕಾಗಿರಲಿಲ್ಲ.
ಸಿಡ್ನಿ ಶ್ರೀನಿವಾಸ್ ಬರೆದ ಈ ಕತೆ “ಎರವಲು ಗೆಳತಿ” ನಿಮ್ಮ ಈ ಭಾನುವಾರದ ಓದಿಗೆ

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ಎನುಗಂಟಿ ವೇಣುಗೋಪಾಲ್ ತೆಲುಗು ಕತೆ

“ಬಹಳ ದೂರ ಬಂದ ಮೇಲೆ ನೀವು ಎದುರಾದಿರಿ” ಎಂದು ಹೇಳುವುದು ಮುಗಿದ ಮೇಲೆ ಉಳಿದ ಅರ್ಧ ಗ್ಲಾಸ್ ಮದ್ಯವನ್ನು ಖಾಲಿ ಮಾಡಿದ ರಂಜಿತ್. “ಇಗೋ ಪುರಾವೆ… ನನ್ನ ಕೈ ಮೇಲಿನ ಗಾಯ” ಎನ್ನುತ್ತಾ ಬಲಗೈಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ತೋರಿಸಿದ ರಂಜಿತ್. “ಹೌದು, ಆಗ ನೀವು ಬಲಗೈಯಿಂದ ಲಿಫ್ಟ್ ಕೇಳಿದಾಗ ಬೀದಿ ದೀಪದ ಬೆಳಕಿನಲ್ಲಿ ಗಮನಿಸಿದೆ. ಆ ಗಾಯ ನೋಡಿಯೇ ಲಿಫ್ಟ್ ಕೊಟ್ಟೆ” ಎಂದ ವಾಸುದೇವ ರಾವ್. ರಂಜಿತ್ ಒಮ್ಮೆಲೇ ದಂಗಾದನು. “ಆತಂಕ ಪಡಬೇಡಿ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಕತೆಗಾರ ಎನುಗಂಟಿ ವೇಣುಗೋಪಾಲ್ ಅವರ ಕತೆ “ಚೋರಿ”

Read More

ಪ್ರವೀಣ್ ಕುಮಾರ್ ಜಿ. ಬರೆದ ಈ ಭಾನುವಾರದ ಕತೆ “ಈಡು ಜೋಡು”

ಇತ್ತ ಬಾಮೈದನು ತನ್ನ ಬಲಗೈಯಲ್ಲಿ ಉಂಗುರ ಹಿಡಿದು, ಎಡಗೈಯಲ್ಲಿ ಮಂಜನ ಕೈ ಹಿಡಿದು ತೊಡಿಸಲು ಮುಂದಾದಾಗ ಮೊದಲಿಗೆ ಮಂಜನ ಕೈ ಮೇಲೇಳಲಿಲ್ಲ. ಅಕ್ಕನ ಅಳುವಿನಲ್ಲಿ ತಾನೂ ಕಣ್ತುಂಬಿಕೊಂಡಿದ್ದ ಬಾಮೈದ ಉಂಗುರವನ್ನು ಮತ್ತೆ ಬೆರಳ ಹತ್ತಿರ ಹೊಯ್ದಾಗ ಮಂಜನ ಕೈ ಇನ್ನಶ್ಟು ಹಟ ಮಾಡಿತು. ಬಾಮೈದ ಮಂಜನನ್ನು ನೋಡಿದ, ಮಂಜನ ಮಾರಿ ನೆಲ ನೋಡುತ್ತಾ, ಬೇಡ ಬೇಡ ಎಂಬಂತೆ ಅತ್ತಿತ್ತ ಒದರಾಡುತ್ತಿತ್ತು. ಬಾಮೈದ ಮಾವನವರನ್ನು ನೋಡಿದ, ಸುತ್ತಿನವರು ಇನ್ನೂ ಬೆರಳು ಏರದ ಉಂಗುರವನ್ನೇ ನೋಡುತ್ತಿದ್ದರು.
ಪ್ರವೀಣ್ ಕುಮಾರ್ ಜಿ. ಬರೆದ ಕತೆ “ಈಡು ಜೋಡು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ