ನವೀನ ಗಣಪತಿ ಬರೆದ ಈ ಭಾನುವಾರದ ಕತೆ ಪ್ರಾಣಪಕ್ಷಿ
ಗಾರೇಜಿನಲ್ಲಿ ನೆರವಾಗುತ್ತಿದ್ದ ಪಿಟ್ಟನಿಗೆ ಆ ತಿಂಗಳ ಸಂಬಳ ಕೊಡುವುದಕ್ಕೇ ಸಾಧ್ಯವಾಗಲಿಲ್ಲ ಅಡಿಗರಿಗೆ. ಸಾಧು ಸ್ವಭಾವದವನಾದ, ಯಾವತ್ತೂ ಸಂಬಳಕ್ಕಾಗಿ ಹಾತೊರೆದು ಕೇಳದ ಪಿಟ್ಟ ಆರಂಭದಲ್ಲಿ ಏನೂ ಕೇಳಲಿಲ್ಲ. ಆದರೆ ಕೆಲದಿನಗಳಲ್ಲಿ, ‘ಸ್ವಲ್ಪ ಇದ್ದರೆ ಬೇಕಿತ್ತು’ ಎಂದು ಎರಡು ಮೂರು ಬಾರಿ ಕೇಳಿದ. ನಾಳೆ ಕೊಡುವ ಎಂದು ಅಡಿಗರು ಆಶ್ವಾಸನೆ ಕೊಟ್ಟರೂ, ಹಾಗೆ ಹಣ ಕೊಡುವುದಕ್ಕೆ ಸಾಧ್ಯವಾಗಲಿಲ್ಲ. ಈ ನಡುವೆ ಹುಶಾರು ತಪ್ಪಿದ ಪಿಟ್ಟ, ಆಗಸ್ಟ್ ತಿಂಗಳಲ್ಲಿ ಸಿದ್ಧಾಪುರದ ಆಸ್ಪತ್ರೆಗೆ ಸೇರಿದವನು, ತೀರಿಯೇ ಹೋದ ಸುದ್ದಿ ಬಂದಿತ್ತು.”
Read More

