Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ

“ಗೆಯ್ಮೆ ಮಾಡುತ್ತಲೇ ಬದುಕು ಕಟ್ಟಿಕೊಂಡವನು ಜಯಂತ ಪೂಜಾರಿ. ಶಾಲಾ ದಿನಗಳಿಂದಲೇ ಕಬಡ್ಡೀ ಜಯಂತ ಎಂದೇ ಹೆಸರು ಪಡೆದವನು. ಅವನಿದ್ದಲ್ಲಿ ಎಂತಹ ಜಡಬರತನೂ ಪುಟಿದೇಳಲೇಬೇಕು ಅಂತಹ ಪಾದರಸ. ದೇವ ನಗರಿಯಿಂದ ಹತ್ತು ಮೈಲು ದೂರದ ಏಯ್ಡೆಡ್ ಹೈಸ್ಕೂಲ್‌ನಲ್ಲಿ ದಿನ ಗುತ್ತಿಗೆಗೆ ಪಿ.ಟಿ. ಮೇಷ್ಟ್ರಾಗಿ ಸೇರಿದಂದಿನಿಂದ ವಿದ್ಯಾರ್ಥಿಗಳನ್ನು ಕಂಬಳದ ಕೋಣಗಳಂತೆ ಹುರಿಗೊಳಿಸುತ್ತಾನೆಂದುಪ್ರಸಿದ್ದಿ ಪಡೆದಿದ್ದ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ ‘ಕಾಳಿಂದಿ ಮಡು’

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಸೀಮಾರೇಖೆಯಿಲ್ಲದ ಮೂಢನಂಬಿಕೆಗಳು……!

“ಏವ್‌ಬರಿ ಸುತ್ತಮುತ್ತ ಕ್ರೈಸ್ತ ಜನಾಂಗದವರೆ ಬದುಕುತ್ತಿದ್ದರು, ಯಾರಾದರು ಸತ್ತಾಗ ಅವರ ಮನೆಯವರು ಅಂತ್ಯಸಂಸ್ಕಾರವನ್ನು ಮುಗಿಸಿ ಏವ್‌ಬರಿಯ ಚರ್ಚಿಗೆ ಬಂದು ಪೂಜೆ ಸಲ್ಲಿಸುತ್ತಿದ್ದರು. ಕೆಲವರ ಮನೆಯಲ್ಲಿ ಸತ್ತವರ ಹೆಸರಿನ ಪೂಜೆ ಸಲ್ಲಿಸಿದ ಮೇಲೆಯೂ ಕೂಡ ಆತ್ಮ ಕಾಣಿಸಿದ ಅನುಭವವಾಗಿದೆ. ಅಂಥಹ ಸಮಯದಲ್ಲಿ ಚರ್ಚಿನ ಪಾದ್ರಿಯ ಸಲಹೆಯ ಮೇರೆಗೆ ಒಂದು ಪೂಜಿಸಿದ ಯಂತ್ರವನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಅದಾಗಿಯೂ ಸುತ್ತ ಮುತ್ತಲಿನ ಕೆಲವು ಊರುಗಳಲ್ಲಿ ಆತ್ಮಗಳು…”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಚ್. ಎಸ್. ಅನುಪಮಾ ಬರೆದ ಕಥೆ

“ಈಗ ನನಗೆ ಊಟಮಾಡುವ ಆಸೆ ಹುಟ್ಟಿದೆ ಯುವರ್ ಆನರ್. ನಾನು ಗೆದ್ದು ಉಪವಾಸ ನಿಲಿಸಬೇಕು. ಆಯಿ ಮಾಡುವ ಮೀನ್‍ಫ್ರೈ, ಪತ್ರೊಡೆ, ತಂಬ್ಳಿ, ದೊಡ್ನ ಎಲ್ಲ ನೆನಪಾಗುತ್ತಿದೆ. ಅವುಗಳ ರುಚಿ ಮರೆಯುವ ಮೊದಲು ಎಲ್ಲರ ಜೊತೆ ಕೂತು ಉಣ್ಣಬೇಕು ಅನಿಸುತ್ತಿದೆ. ಅಷ್ಟೇ ಅಲ್ಲ, ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿರುವೆ. ಅವನ ಮದುವೆಯಾಗಬೇಕು. ಮಕ್ಕಳ ಹೆರಬೇಕು. ಸಂಸಾರ ಕಟ್ಟಿಕೊಳ್ಳಬೇಕು.”

Read More

ಮೀರಾ ಪಿ.ಆರ್. ಬರೆದ ಈ ಭಾನುವಾರದ ಕಥೆ: ಮೌನ

‘ಅದ್ಯಾಕೋ ಅಜ್ಜಿಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ತೀರಾ ಅಸಮಾಧಾನವಿತ್ತು. ತಾತನೂ ಒಮ್ಮೊಮ್ಮೆ ಮಾವ ಸೈಕಲ್ ತೆಗೆದುಕೊಂಡು ಶಾಸ್ತ್ರಿಗಳ ಮನೆಗೆ ಹೊರಟ ಕೂಡಲೇ, ‘ಹೊರಟ ಇನ್ನು ಅಲ್ಲಿ ದಾಳ ಉರುಳಿಸೋಕ್ಕೆ‘ ಎಂದು ಗೊಣಗಿ ಈ ಸ್ನೇಹಕ್ಕೆ ಅಸಮ್ಮತಿ ಸೂಚಿಸುತ್ತಿದ್ದದ್ದು ನಮ್ಮ ಗಮನಕ್ಕೆ ಬಂದಿತ್ತು. ಮಕ್ಕಳಾದ ನಮಗೆ ಇದರ ಕುರಿತು ಹೀಗೆ ಅಸಹನೆ ಪಡುವಂಥದ್ದೇನಿದೆ ಎಂಬುದಂತೂ ತಿಳಿಯುತ್ತಿರಲಿಲ್ಲ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ