Advertisement

Category: ವಾರದ ಕಥೆ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ

ಬತ್ತಿ ಹೋಗಿರುವ ನದಿಯ ದಡದಲ್ಲಿ ಕುಳಿತು ಹರಿಯುವ ನದಿಯನ್ನು ಕಲ್ಪಿಸಿಕೊಂಡು ಸುಖಪಡುತ್ತಿದ್ದ ಕುಮದ್ವತಿಗೆ, ಎಲ್ಲವೂ ವೇಗವಾಗಿ ಮನಸಿನಲಿ ಸುಳಿದುಹೋದವು. ಕೆಲವು ಸಲ ಊರಿನವರ ಮಾತುಗಳಿಗೆ ಬೇಸರವಾದರೂ, ಪ್ರೀತಿಸುವ ಗಂಡನಿಂದ ಎಲ್ಲವೂ ಮರೆಯುತ್ತಿದ್ದಳು. ಸೊಸೆಯ ಒಳ್ಳೆಯತನ ಕಂಡಮೇಲೆ ಅತ್ತೆ ಇನ್ನೂ ಹತ್ತಿರವಾಗಿದ್ದರು. ಸೊಸೆಗೆ ಯಾವುದೇ ತೊಂದರೆ ಆಗದಂತೆ, ತನ್ನ ಮಗನಿಂದ ಅವಳಿಗೆ ಅನ್ಯಾಯ ಆಯಿತಲ್ಲ ಎನ್ನುವ ಪಾಪ ಪ್ರಜ್ಞೆಯಿಂದ ಸೊಸೆಯನ್ನು ಇನ್ನೂ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಳು.
ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ “ಕುಮದ್ವತಿ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ