Advertisement

Category: ವಾರದ ಕಥೆ

ಗೀತೆಯ ಸಾರ: ಧನಪಾಲ ನಾಗರಾಜಪ್ಪ ಅನುವಾದಿಸಿದ ಸೈಯದ್ ಸಲೀಂ ಕತೆ

“ದಿಗಿಲುಗೆ ಪರ್ಯಾಯ ಪದದಂತೆ ನೀನು ಮುಖವನ್ನು ಹಾಗೆ ಯಾಕೆ ಮಾಡಿಕೊಂಡೆ? ಮೊದಲು ನೀನು ನನ್ನ ಬದುಕಿನ ವಿಷಮವಾದ ಸಂಗತಿಗಳಿಂದ ಹೊರಗೆ ಬಂದುಬಿಡು. ನಾವು ಹೀಗೆ ನೋವಿನಲ್ಲಿ ಕಳೆದುಕೊಂಡ ಯಾವ ನಿಮಿಷವೂ ಮತ್ತೆ ಮರಳಿ ಬರುವುದಿಲ್ಲ. ಜೀವನ ದೇವರ ಕೊಟ್ಟ ವರ. ಹಾಗೆಂದು ನನಗೆ ನೋವೇ ಇಲ್ಲ ಎಂದುಕೊಳ್ಳಬೇಡ. ಎದೆಯಾಳದಲ್ಲಿ ಮಡುಗಟ್ಟಿರುವ ನೋವು ಹರಿತವಾಗಿ ಸದಾ ಚುಚ್ಚುತ್ತಲೇ ಇರುತ್ತದೆ.”

Read More

ಓಬಿರಾಯನಕಾಲದ ಕಥಾ ಸರಣಿಯಲ್ಲಿ ನಿರಂಜನರು ಬರೆದ “ಚಿರಸ್ಮರಣೆ” ಕಾದಂಬರಿಯ ಅಧ್ಯಾಯ “ಕಯ್ಯೂರಿನ ಶಾಲೆ”

“ಈ ಸಲವೂ ಏನನ್ನೂ ಹೇಳುವುದು ಮಾಸ್ತರಿಂದಾಗಲಿಲ್ಲ. ಅವರು ಅವಾಕ್ಕಾದರು. ಉಳ್ಳವರ ವಿಷಯ ಅವರೆಷ್ಟೊ ತಿಳಿದಿದ್ದರೂ ಈ ವಿಚಾರಸರಣಿಯ ವಿಶಿಷ್ಟತೆಯನ್ನು ಕಂಡು ಬೆರಗಾದರು. ಅವರ ಎದೆಯೊಳಗೆ ಸಂಕಟವಾಯಿತು. ಆತ್ಮಾಭಿಮಾನಿಯಾದ ಮನುಷ್ಯ. ಇಂಥ ಮಾತುಗಳನ್ನು ಕೇಳಲು ಇಷ್ಟವಿಲ್ಲದಿದ್ದರೆ ಎದ್ದು ಹೋಗಬಹುದು. ‘ಬರ್ತೇನೆ, ಕೆಲಸವಿದೆ’ ಎಂದು ಹೇಳಿ ಎದ್ದು ಹೋಗಲೇಬೇಕು, ಎನ್ನಿಸಿತು.”

Read More

“ನಟನೆ”: ಸಚೇತನ ಭಟ್ ಅನುವಾದಿಸಿದ ಹರುಕಿ ಮುರಕಮಿ ಬರೆದ ಜಪಾನೀ ಕತೆ

“ಒಂದು ಕಾಲದಲ್ಲಿ ತಾನು ಪ್ರೀತಿಸಿದ್ದ, ಜೊತೆಗೆ ತಬ್ಬಿ ಮಲಗಿದ್ದ ರಕ್ತ ಮಾಂಸಗಳಿಂದ ತುಂಬಿದ್ದ ಸುಂದರ ದೇಹ ಇವತ್ತು ಕೇವಲ ಬೂದಿ ಎನ್ನುವದನ್ನು ಜೀರ್ಣಿಸಿಕೊಳ್ಳುವದು ತಕತ್ಸುಕಿಯ ಶಕ್ತಿ ಮೀರಿದ ಕಾರ್ಯವಾಗಿತ್ತು. ಕಾಫುಕ ಈ ಶೂನ್ಯವನ್ನು ಚೆನ್ನಾಗಿ ಬಲ್ಲವನಾಗಿದ್ದ. ತಕಾತ್ಸುಕಿಯ ಕಣ್ಣುಗಳು ಅವಳ ನೆನಪಿನಿಂದ ಮಂಜಾದಾಗ ಕಾಫುಕನಿಗೆ ಅವನನ್ನು ತಬ್ಬಿಕೊಂಡು ಸಂತೈಸಬೇಕೆನಿಸಿತ್ತು. ಅವನು ತನ್ನ ಭಾವನೆಗಳನ್ನು ಮುಚ್ಚಿಡಲಾರದ ಮನುಷ್ಯನೆನಿಸಿತು. “

Read More

ಓಬಿರಾಯನ ಕಾಲದ ಕತೆಗಳ ಸರಣಿಯಲ್ಲಿ ಕಡೆಂಗೋಡ್ಲು ಶಂಕರಭಟ್ಟರು ಬರೆದ ಕತೆ “ದುಡಿಯುವ ಮಕ್ಕಳು”

“ಸಂಜೆ ಆಯಿತು; ನೆರಳು ಉದ್ದುದ್ದವಾಗಿ ಎಲ್ಲಾ ಕಡೆಗಳಲ್ಲಿಯೂ ಕತ್ತಲಿಸುತ್ತಿದೆ. ಮನುಷ್ಯ ಸಂಚಾರ ಕಡಿಮೆಯಾಗುತ್ತಿದೆ. ದೂರದೂರದಲ್ಲಿ ಯಾರೋ ಯಾರನ್ನೋ ಕರೆಯುವ ಒಂದೊಂದು ಧ್ವನಿ ಅಲೆಯಾಗಿ ಮಾತ್ರ ಕಿವಿಯನ್ನು ಹೊಡೆಯುತ್ತಿದೆ. ಇತರರಲ್ಲಿ ಕರೆಯುವವರೂ ಇದ್ದಾರೆ. ಕರೆಯಿಸಿಕೊಳ್ಳುವವರೂ ಇದ್ದಾರೆ ! ಈ ಬಡ ಕುಟುಂಬದಲ್ಲಿ ಮಾತ್ರ ಅಂಥವರು ಯಾರೂ ಇಲ್ಲವೆ? ಅನ್ಯಾಯವಿದು. ಲಿಂಗಪ್ಪ ಇನ್ನೂ ಬರಲಿಲ್ಲ.”

Read More

ಉಳಿದ ಪಾಲು: ಸುನೈಫ್ ವಿಟ್ಲ ಬರೆದ ಕತೆ

“ಕನಸಿನ ವ್ಯಾಖ್ಯಾನ ಹೇಳಬಲ್ಲ ಪಂಡಿತರೆಲ್ಲ ಆಳಿಗೊಂದು ಕತೆ ಕಟ್ಟತೊಡಗಿದರು. ವರ್ಷಗಳು ಉರುಳಿದಂತೆ ಕನಸುಗಳು ನೆನಪಿನ ಯಾವುದೊ ಮೂಲೆಗೆ ಸೇರಿಬಿಡಬೇಕು. ಆದರೆ ನನ್ನ ಕತೆ ಹಾಗಾಗಲಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ನೆನಪಿನ ಮನೆಯ ಆ ಮೂಲೆಗೆ ಯಾರಾದರೂ ಬೆಳಕು ಹರಿಸುತ್ತಾರೆ. ಆಗ ಮತ್ತೆ ಕೆಲವು ದಿನಗಳು ಕೈ ಜಾರುತ್ತವೆ. ಕೈ ಜಾರುತ್ತವೆ ಎಂದರೆ ಮೋಸದ ಮಾತಾಗಬಹುದು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ