Advertisement

Category: ವಾರದ ಕಥೆ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ

Read More

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ

ಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನಿಗಳ ಕಣ್ಣಿಗೂ ಕಾಣಿಸಿಕೊಳ್ಳದೇ ನಿಗೂಢವಾಗಿದ್ದ ಈ ಪ್ರಾಣಿ, ಕಾಡು ಬಿಟ್ಟು ನನ್ನ ತೋಟಕ್ಕೆ ಬರಲು ಕಾರಣವೇನಿರಬಹುದೆಂದು ಚಿಂತಿಸುತ್ತಾ ಹಾಸಿಗೆಯ ಮೇಲೆ ಮಲಗಿದೆ. ಹಾಗೆಯೇ ಅದರ ಆಹಾರ ಪದ್ಧತಿಗಳನ್ನು ಜ್ಞಾಪಿಸಿಕೊಳ್ಳತೊಡಗಿದೆ. ಮಲಬಾರ್ ಸೀವೆಟ್ ಕೆಲ ಚಿಕ್ಕ ಪ್ರಾಣಿಗಳನ್ನೂ, ಮೊಟ್ಟೆಗಳನ್ನೂ ಇಷ್ಟಪಟ್ಟು ತಿನ್ನುತ್ತದೆಂದು ಎಲ್ಲೋ ಓದಿದ್ದು ನೆನಪಾಯಿತು. ಸಂಜೆ ಹೆಗ್ಗಾಲುವೆಯ ಬಳಿ ಕಟ್ಟ ಹಾಕಲು ಹೋಗಿದ್ದಾಗ ಒಂದೆರಡು ಹುಂಡುಕೋಳಿಗಳು ಸರ‍್ರೆಂದು ಸದ್ದು ಮಾಡುತ್ತಾ, ನನ್ನನ್ನೇ ಗಾಬರಿಗೊಳಿಸಿ ಓಡಿಹೋಗಿದ್ದವು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ ‘ಅಡಿಯಪ್ಪ ಮತ್ತು ಸಿವೆಟ್’

Read More

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ