Advertisement

Category: ವಾರದ ಕಥೆ

ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ “ಅಮೀನಾ”

ಮುರುಳಿಯ ಹೆಸರು ಹೇಳುತ್ತಲೇ ಮೆತ್ತಗಾಗಿದ್ದ ಅಮೀನಾ ತನ್ನ ಕತೆಯನ್ನು ಎಲ್ಲಿಂದ ಆರಂಭಿಸಬೇಕೆಂದು ಯೋಚಿಸಲಾರಂಭಿಸಿದಳು ‘ನಂಗೆ ನೆನಪಿರುವಂತೆ ನನ್ನ ಅಪ್ಪ ಲಾಡ್‌ ಸಾಬ್‌ ಗುಜುರಿ ಕೆಲಸ ಮಾಡುತ್ತಿದ್ದ, ದುಡಿದದ್ದಕ್ಕಿಂತ ಸೈಕಲ್‌ ತುಳಿದದ್ದೇ ಹೆಚ್ಚು. ಸೈಕಲ್ಲು ಚಲಿಸಿದರೆ ನಮ್ಮ ಬದುಕೂ ಚಲಿಸುತ್ತಿತ್ತು. ಅಮ್ಮಿ ಮನೇಲಿ ಬೀಡಿಯ ಜೊತೆ ನಮ್ಮ ಬದುಕನ್ನೂ ಕಟ್ಟುತ್ತಿದ್ದಳು…”
ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ

Read More

ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕಥೆ “ಜಾದೂ”

‘ಈಗ ನೋಡಿ ಅಸಲೀ ಝಗಡ ಷುರೂ. ಹಾವು ಮುಂಗೂಸ್ ಝಗಡʼ ಅಂದ. ಬುಟ್ಟಿ ಮುಚ್ಚಳ ತೆಗೆದ. ಹಾವು ಹೆಡೆ ಎತ್ತಿತು. ಪುಂಗಿ ಊದುತ್ತಾ ಮುಷ್ಠೀನ ಹಿಡಿದು, ಕಚ್ಚಲಿ ಅನ್ನೋ ಥರ ಆಡಿಸಿದ. ಅದು ಕಚ್ಚೋಕೆ ಬಂದರೆ ಮುಷ್ಠೀನ್ನ ಹಿಂದಕ್ಕೆಳೆದುಕೋತಾ ಇದ್ದ. ಇವನು ಹಾವು ಮುಂಗುಸಿ ಜಗಳ ತೋರಿಸ್ತಾ ಇಲ್ಲವಲ್ಲ. ಜಗಳ ತೋರಿಸ್ರೀ ಅಂತ ಕೇಳ್ಳಾ? ಬೇಡಪ್ಪಾ. ಆಮೇಲೆ ನನಗಿನ್ನೇನಾದರೂ ಮಾಡಿಬಿಟ್ಟರೆ ಕಷ್ಟ. ಅವನ ಸಹವಾಸಾನೇ ಬೇಡ. ಕಾಯ್ತಾ ನಿಂತೆ. ‘ಜೋರ್‌ ಸೇ ತಾಲಿ ಬಜಾವೋʼ ಅಂದ.
ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕತೆ “ಜಾದೂ” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

2042 ಏಪ್ರಿಲ್ ಏಳನೇ ತಾರೀಕು. ಅಮ್ಮನನ್ನು ಕಳಿಸಿ ಒಂದು ವಾರವಾಗಿತ್ತು. ಹಳೆಯ ದೃಶ್ಯದ ಪುನರಾವರ್ತನೆ ಆಯಿತು. ಒಂದು ಬದಲಾವಣೆ ಎಂದರೆ ಅಮ್ಮ ಮನೆಯಲ್ಲಿ ಇರಲಿಲ್ಲ. ಬಂದವರು ಫಾರ್ಮಾಲಿಟಿ ಮುಗಿಸಿ ಚೆಕ್ ಹಾಗೂ ಸೂಟ್ಕೇಸ್‌ನೊಂದಿಗೆ ಅವನಿಯನ್ನು ಕರೆದುಕೊಂಡು ವಾಹನದಲ್ಲಿ ಹೊರಟರು. ಹೊರಡುವ ಮುನ್ನ ಅವನಿ ಕೇಳಿದಳು “ಅಮ್ಮನನ್ನು ಕಳಿಸುವೆ ಎಂದಲ್ಲವೇ ನನ್ನ ಸಹಿ ಪಡೆದದ್ದು… ಈ ಮಸಲತ್ತು ತಿಳಿದಿರಲಿಲ್ಲ, ಅದಕ್ಕೇನಾ ಎರಡು ಪೇಪರ್‌ಗೆ ಸಹಿ ಹಾಕಿಸಿಕೊಂಡದ್ದು… ಸರಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಗುಡ್ ಬೈ.” ಎಂದು ಹೊರಟು ಹೋದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಹಳೆ ಪಾತ್ರೆ… ಹಳೆ ಕಬ್ಬಿಣ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ

ಸಾಲಿಗೆ ಹೋಗೋ ಮಕ್ಕಳಿಗಂತೂ ಈ ಕೊಲೆ ಸುದ್ದಿ ತಾವು ನೋಡಿದ ಸಿನೆಮಾ ಕಥಿ ಹಂಗ ಕಂಡಿತು. ಕೆಲವೊಬ್ಬರಂತೂ ‘ಪುಟಾಣಿ ಏಜಂಟ್’ ಆಗಿಬಿಟ್ಟರು. ಕೊಲೆಗಾರರನ್ನು ಹಿಡಿಲಿಕ್ಕೆ ಪೊಲೀಸರು ನಾಯಿ ತೊಗೊಂಡು ಬಂದಾರಂತ, ಅವು ಅಪರಾಧಿಗಳ ವಾಸನಿ ಹಿಡಿದು ಹುಡಿಕಿಕೊಂಡು ಊರು ಹೊರಗ ಹರೀತಿದ್ದ ನದಿ ತನಕ ಹೋಗಿ ನಿಂತವು ಅಂತೆಲ್ಲ ಮಾತಾಡಿಕೊಂಡರು. ಅದೇ ಸಾಲಿಯೊಳಗ ಐದನೇತ್ತಿ ಓದ್ತಿದ್ದ ಪುಟ್ಟಿ ಈ ಮಾತುಗಳನ್ನೆಲ್ಲ ಕೇಳಿಸಿಕೊಂಡಾಗ ಆಕಿಗೆ ಹಿಂದಿನ ರಾತ್ರಿ ಸಬ್ ಇನ್ಸಪೆಕ್ಟರ್ ರವಿ ಅವರ ಮನಿಗೆ ಬಂದಿದ್ದು ನೆನಪಾಯಿತು.
ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಶಿಕ್ಷೆ” ನಿಮ್ಮ ಓದಿಗೆ

Read More

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ