Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ

ಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನಿಗಳ ಕಣ್ಣಿಗೂ ಕಾಣಿಸಿಕೊಳ್ಳದೇ ನಿಗೂಢವಾಗಿದ್ದ ಈ ಪ್ರಾಣಿ, ಕಾಡು ಬಿಟ್ಟು ನನ್ನ ತೋಟಕ್ಕೆ ಬರಲು ಕಾರಣವೇನಿರಬಹುದೆಂದು ಚಿಂತಿಸುತ್ತಾ ಹಾಸಿಗೆಯ ಮೇಲೆ ಮಲಗಿದೆ. ಹಾಗೆಯೇ ಅದರ ಆಹಾರ ಪದ್ಧತಿಗಳನ್ನು ಜ್ಞಾಪಿಸಿಕೊಳ್ಳತೊಡಗಿದೆ. ಮಲಬಾರ್ ಸೀವೆಟ್ ಕೆಲ ಚಿಕ್ಕ ಪ್ರಾಣಿಗಳನ್ನೂ, ಮೊಟ್ಟೆಗಳನ್ನೂ ಇಷ್ಟಪಟ್ಟು ತಿನ್ನುತ್ತದೆಂದು ಎಲ್ಲೋ ಓದಿದ್ದು ನೆನಪಾಯಿತು. ಸಂಜೆ ಹೆಗ್ಗಾಲುವೆಯ ಬಳಿ ಕಟ್ಟ ಹಾಕಲು ಹೋಗಿದ್ದಾಗ ಒಂದೆರಡು ಹುಂಡುಕೋಳಿಗಳು ಸರ‍್ರೆಂದು ಸದ್ದು ಮಾಡುತ್ತಾ, ನನ್ನನ್ನೇ ಗಾಬರಿಗೊಳಿಸಿ ಓಡಿಹೋಗಿದ್ದವು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ ‘ಅಡಿಯಪ್ಪ ಮತ್ತು ಸಿವೆಟ್’

Read More

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

Read More

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ

ಲ್ಲಯ್ಯ, ನಮ್ಮ ಅಜ್ಜಿಮನೆಯ ಮಾವಿನ ಮರದ ಕೆಳಗೆ ಸೈಕಲ್ ನಿಲ್ಲಿಸಿ ಎಲ್ಲಿಗೆ ಹೋಗುತ್ತಿದ್ದೆ ಮಾರಾಯ? ನಾನು ಪಿಯುಸಿ ಓದುತ್ತಿದ್ದ ಒಂದು ಮೇ ರಜೆಯ ಮಧ್ಯಾಹ್ನ ಚಿಪ್ಪಿಕಲ್ಲಿನ ಸಾರು ಕುದಿಸ್ತಾ ಇರುವಾಗ- ಅಮ್ಮ ದಿಕ್ಕಬಳ್ಳಿ ಮೆಟ್ಟಿ ಬಂದವಳಂತೆ ಬಂದು ‘ಹಡಬೆ ಹೆಣ್ಣೆ! ಮರ್ಯಾದೆ ಕಳೀತಿಯೇನೇ?’ ಎಂದವಳೇ ಒಲೆಮೇಲಿನ ಸಾರೆತ್ತಿ ತೊಡೆ ಮೇಲೆ ಸುರಿದುಬಿಟ್ಟಳು! ನನ್ನ ನೋವುಗಳೇ ಹೀಗೆ. ಇಲ್ಲಿದೆ ಅಂತ ತೋರಿಸಿಕೊಳ್ಳಲು ಆಗದೆ ಹಾಗೆ! ಹೇಳು, ನಾ ಮಾಡಿದ ತಪ್ಪೇನು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ “ಒಂದು ಖಾಸಗಿ ಪತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್.‌ ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ