Advertisement

Category: ಅಂಕಣ

ಈ ಬದುಕಿನ ಪ್ರೀತಿ ಪ್ರೇಮ ಪ್ರಣಯ…: ಸುಕನ್ಯಾ ಕನಾರಳ್ಳಿ ಅಂಕಣ

ಮದುವೆಯಾಗಲು ಕಾಯುತ್ತಿದ್ದ ದಿನಗಳಲ್ಲಿ ಭ್ರಮೆ ನಿಧಾನವಾಗಿ ಕರಗುತ್ತಿತ್ತು. ಈ ನನ್ನ ಮಗ ಮತ್ತು ನನ್ನ ನಡುವೆ ಇರುವ ಸಮಾನ ಆಸಕ್ತಿಗಳಾದರೂ ಏನು ಎಂದು ಉತ್ತರವೇ ಇಲ್ಲದ ಪ್ರಶ್ನೆಗಳಲ್ಲಿ ದಿನ ಕಳೆಯುತ್ತಿತ್ತು. ಹತ್ತಿರ ಬಂದರೂ ದೇಹ ಸ್ಪಂದಿಸದಿರುವಾಗ ಬದುಕೆಲ್ಲ ಸಿಕ್ಕಿ ಬಿದ್ದು ಏನು ಗತಿ ಎಂದು ಕಳವಳಿಸಲು ಪ್ರಾರಂಭಿಸಿದ್ದೆ. ಒಮ್ಮೆ ಸುಷ್ಮಾ ಸ್ವರಾಜಳ ಅವಳಿಯಂತೆ ಕಾಣಿಸುವ ಅವನ ಅಮ್ಮನನ್ನು ಭೇಟಿಯಾದೆ. ಡಿ ಎಚ್ ಲಾರೆನ್ಸನ ಸನ್ಸ್ ಅಂಡ್ ಲವರ್ಸ್ ಕಾದಂಬರಿ ನೆನಪಿಗೆ ಬಂತು. ಈಕೆ ಉಡದ ಹಿಡಿತದವಳು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ನಾಲ್ಕನೆಯ ಬರಹ

Read More

ಮನೆಮನೆ ಕೈತೋಟದಲ್ಲಿದೆ ಸಮುದಾಯ ಸೌಖ್ಯ: ಡಾ. ವಿನತೆ ಶರ್ಮ ಅಂಕಣ

ಅಂದಿನ ಸಾಮಾನ್ಯಜನರ ಸಾವಯವ ಜೀವನ ಈಗ ಒಂದು ಸಮುದಾಯ ಸಮಷ್ಠಿಪ್ರಜ್ಞೆಯಾಗಿ ಮೂಡಿದೆ. ಮಾದರಿಯಾಗಿ ಮೂಡುತ್ತಿದೆ. ನಮ್ಮದೇ ಸ್ವಾಯತ್ತತೆಯಿಂದ ಮನೆಮಟ್ಟಿಗೆ ನಾವು ಆಹಾರವನ್ನು ಬೆಳೆಸುವ ನಿರ್ಧಾರದಿಂದ ಹಿಡಿದು ನಮ್ಮ ನೆಲದ, ನಾಡಿನ, ಮೂಲಜರ ಆಹಾರವೇನಾಗಿತ್ತು, ಅದರ ಬಗ್ಗೆ ನಮಗೆಷ್ಟು ತಿಳಿದಿದೆ, ಆ ಆಹಾರ ಬೆಳೆಗಳ ವಿಧಗಳನ್ನು ಪುನರುಜ್ಜೀವಿಸಬಹುದೆ ಎನ್ನುವ ಮಾತುಕತೆಗಳು ಸಮುದಾಯ ಅಭಿವೃದ್ಧಿಯ ಸಂಕೇತ. ಇಂತಹ ಮಾತುಕತೆಗಳಿಂದ ನಮ್ಮ ನಂಬಿಕೆಗಳು, ಮನೋಭಾವ, ಚರ್ಯೆಗಳಲ್ಲಿ ಬದಲಾವಣೆ ಬರುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ದೇಹ ಮನಸ್ಸುಗಳ ಚಕ್ರಸುಳಿ……: ಡಾ. ಎಲ್.ಜಿ. ಮೀರಾ ಅಂಕಣ

ಮನಸ್ಸು ಮತ್ತು ಆತ್ಮ ಎಂದರೆ ಒಂದೆಯೇ ಅಥವಾ ಬೇರೆಬೇರೆಯೇ ಎಂಬ ನಮ್ಮ ಪ್ರಶ್ನೆಗೆ ಧರ್ಮಶಾಸ್ತ್ರ ಹಾಗೂ ತತ್ವಶಾಸ್ತ್ರಗಳು ಕೊಡುವ ಉತ್ತರ “ಇಲ್ಲ, ಅವು ಬೇರೆ ಬೇರೆ. ಆತ್ಮವು ಚಿರಂತನವಾದ, ಎಂದೂ ಬದಲಾಗದ ಮೂಲಸತ್ವ ಅಥವಾ ಶುದ್ಧಪ್ರಜ್ಞೆ” ಎಂದು. ಕಡುವಿಜ್ಞಾನವು ಆತ್ಮದ ಅಸ್ತಿತ್ವವನ್ನು – ವಾಸ್ತವಿಕ ಸಾಕ್ಷಿಗಳ ಕೊರತೆಯ ಕಾರಣಕ್ಕಾಗಿ – ಒಪ್ಪುವುದಿಲ್ಲ. ಸದ್ಯಕ್ಕೆ ಈ ಪ್ರಬಂಧದಲ್ಲಿ ಆತ್ಮವನ್ನು ಕುರಿತು ಚರ್ಚಿಸುತ್ತಿಲ್ಲ. `ಮನಸ್ಸಿನ’ ಸಂಕೀರ್ಣತೆಯೇ ಇಲ್ಲಿ ನಮಗೆ ಸಾಕಷ್ಟು ನೀರು ಕುಡಿಸುತ್ತಿದೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೊಂದನೆಯ ಬರಹ

Read More

ಹುಲಿವೇಷ:  ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಎರಡು ಮೂರು ಅಂಗಡಿಗೆ ಹೋಗಿ ವಾಪಾಸು ಬರುವಾಗ ಆ ಸಣ್ಣ ಹುಲಿಯನ್ನು ಹಿಡಿದುಬಿಟ್ಟೆ! ಒಂದು ಕ್ಷಣ ಹುಲಿ ಹಿಡಿದ ವೀರನ ಗತ್ತು ಗಾಂಭೀರ್ಯ ನನ್ನೊಳಗೆ ಹರಿಯಿತು. ಬೆದರಿ ಬೆವೆತು ನನ್ನ ಹಿಡಿತದಿಂದ ಪಾರಾಗಲು ಒದ್ದಾಡುತಿತ್ತು. ನೋಡಿದರೆ ಯಾರಾದರೂ ಹೇಳಬಹುದಿತ್ತು ಇದು ಫ್ರೊಫೆಷನಲ್ ಹುಲಿ ಅಲ್ಲ ಅಂತ. ಮುಖದ ಗೆರೆಗಳಲ್ಲಿ ಮಾತ್ರ ಇದು ಹುಲಿವೇಷ ಅಂತ ಗುರುತಿಸಬಹುದಾದಷ್ಟು ಮಾತ್ರ ಬಣ್ಣವನ್ನು ಹಚ್ಚಿಕೊಂಡು ಮೈಯಲ್ಲಿನ ಪಟ್ಟೆ ಬೇರೆ ಯಾವುದೊ ಪ್ರಾಣಿಯನ್ನು ಹೋಲುತ್ತಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹನ್ನೊಂದನೆಯ ಬರಹ

Read More

ತೇಜಸ್ವಿ ನಮ್ಮನ್ನಗಲಿದ ತಿಂಗಳಲ್ಲಿ, ಅವರಿದ್ದ ಊರಿನಲ್ಲಿ…: ಸುಕನ್ಯಾ ಕನಾರಳ್ಳಿ ಅಂಕಣ

ಭಾಷೆ ಅರ್ಥ ಮಾಡಿಸುವುದಕ್ಕಿಂತ ಅಪಾರ್ಥಕ್ಕೆ ಹಾದಿಯನ್ನು ಬಿಚ್ಚುತ್ತದೆ ಎನ್ನುವುದು ನನಗೆ ಗೊತ್ತು. ಕಲೆಯ ಸೃಷ್ಟಿಗೆ ಗ್ರಾಮೀಣ ಮತ್ತು ಪ್ರಕೃತಿ ತೆರೆದುಕೊಂಡಷ್ಟು ನಗರ ಮತ್ತು ಆಧುನಿಕ ತೆರೆದುಕೊಳ್ಳುವುದಿಲ್ಲವೊ ಏನೊ ಅಂತಷ್ಟೇ ಹೇಳಬೇಕಿತ್ತು. ಯಾಕೆಂದರೆ ಗ್ರಾಮೀಣ ಮತ್ತು ಪ್ರಕೃತಿಗಳಲ್ಲಿ ಸೌಂದರ್ಯ ಇರುತ್ತದೆ. ನಾವು ಕ್ಲಿಕ್ಕಿಸಲು ಮಾಲ್‌ಗೆ ಹೇಗೆ ಹೋಗುವುದಿಲ್ಲವೋ ಹಾಗೆಯೇ ಸ್ಲಮ್ಮಿಗೂ ಹೋಗುವುದಿಲ್ಲ. ಅದು ಫೋಟೋಗ್ರಾಫಿಕ್ ಸೌಂದರ್ಯವನ್ನು ಶುದ್ಧನೆಲೆಯಲ್ಲಿ ಅರ್ಥ ಮಾಡಿಕೊಳ್ಳುವ ಪರಿಣಿತರಿಗೆ ಮಾತ್ರ ಸಾಧ್ಯವೋ ಏನೋ. ಯಾಕೆಂದರೆ ಫೋಟೋಗ್ರಫಿ ಕೇವಲ ಹವ್ಯಾಸವಾದಾಗ ಕಣ್ಣಿಗೆ ಹಿತವಾದದ್ದನ್ನು ಮಾತ್ರ ಆರಿಸಿಕೊಳ್ಳುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ