Advertisement

Category: ಅಂಕಣ

ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ

ಅದೆಷ್ಟೋ ಆಸ್ಟ್ರೇಲಿಯನ್ನರಿಗೆ ಮೇ ಮೂರರ ಶನಿವಾರ ರಾತ್ರಿ ಜಾಗರಣೆ ಆಯ್ತೆಂದು ಕಾಣುತ್ತದೆ. ಚುನಾವಣಾ ಫಲಿತಾಂಶದ ಮುಖ್ಯ ಅಂಶಗಳು ಗೊತ್ತಾಗಿತ್ತು. ಲೇಬರ್ ಪಕ್ಷ ಮುನ್ನಡೆ ಸಾಧಿಸಿತ್ತು. ವಿಜಯೋತ್ಸಾಹದ ಮುಖ ಹೊತ್ತು ಬೀಗುತ್ತಾ ಪ್ರಧಾನಿ ಆಲ್ಬಾನೀಸಿ ಮಾಧ್ಯಮಗಳ ಮುಂದೆ ಎದೆಯುಬ್ಬಿಸಿಕೊಂಡು ನಿಂತು ಆಸ್ಟ್ರೇಲಿಯನ್ನರಿಗೆ ಧನ್ಯವಾದ ಹೇಳಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಹೆಣ್ಣು ಜೀವದ ಎಂದೂ ಮಾಯದ ಗಾಯಗಳು: ಡಾ. ಎಲ್.ಜಿ.ಮೀರಾ ಅಂಕಣ

ನಮ್ಮ ಪಿತೃಪ್ರಧಾನ ವ್ಯವಸ್ಥೆಯು `ಗಂಡನನ್ನು ಹಂಚಿಕೊಳ್ಳಬೇಕಾದ’ ಪರಿಸ್ಥಿತಿಯಲ್ಲಿರುವ ಹೆಣ್ಣಿನ ದುಃಖ ದುಮ್ಮಾನಗಳ ಬಗ್ಗೆ, ಅವಳ `ಅವಮಾನದ’ ಬದುಕಿನ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ರಾಜಕುಮಾರಿಯರಿಗೆ ಮದುವೆಯಾದಾಗ `ಸವತಿಯರೊಂದಿಗೆ ಜಗಳ ಮಾಡಬೇಡ, ಅವರನ್ನು ಅಕ್ಕ ತಂಗಿಯರಂತೆ ನೋಡಿಕೊ’ ಎಂಬ ಉಪದೇಶವನ್ನು ತವರುಮನೆಯವರು, ಹಿರಿಯರು ಆಕೆಗೆ ನೀಡುತ್ತಿದ್ದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತೊಂಭತ್ತನೆಯ ಬರಹ

Read More

ಹೇಗೆ ಚಿಗುರೊಡೆಯಿತು ಈ ಸ್ನೇಹದ ಬಳ್ಳಿ..: ಎಸ್. ನಾಗಶ್ರೀ ಅಜಯ್ ಅಂಕಣ

ಆಕೆ ಸಿಕ್ಕದಿದ್ದರೂ ಊರು ನಿಧಾನಕ್ಕೆ ಅಮ್ಮನನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಪೊರೆಯುತ್ತಿತ್ತು. ಆದರೆ ಜಯಮ್ಮನ ಸ್ನೇಹದ ರುಚಿ ಸಿಗದೆ ನಷ್ಟವಾಗುತ್ತಿತ್ತು. ಯಾವುದೋ ಊರಿನ ಹೆಂಗಸು ಇಲ್ಲಿ ಬಂದಿಳಿದರೆ ನನಗೇನಾಗಬೇಕು? ನೆಂಟರಾ? ಇಷ್ಟರಾ? ಎಂದಾಕೆ ದೂರವುಳಿಯಬಹುದಿತ್ತು. ಹೊಸ ಊರಿನಲ್ಲಿ ಮನೆತನಕ ಬಂದು ಮಾತನಾಡುತ್ತಾ ಕೂರುವ ಈ ಹೆಂಗಸಿಗೆ ನನ್ನಿಂದ ಏನಾದರೂ ಸಹಾಯದ ನಿರೀಕ್ಷೆಯಿದೆಯೆ? ನಂಬಿಸಿ ಮೋಸ ಮಾಡಿದರೇನು ಗತಿ? ಎಳೆಮಗುವನ್ನು ಇವಳ ಕೈಗಿತ್ತು ಹೇಗೆ ಹೋಗಲಿ? ಎಂದೆಲ್ಲ ಅನುಮಾನಿಸಿ ಅಮ್ಮನೂ ಚಿಪ್ಪಿನೊಳಗೆ ಸೇರಬಹುದಿತ್ತು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ

Read More

ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ

ಇಂಡಿಪೆಂಡೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲೀ ಸ್ಮಿತ್ ಹೇಳಿದ್ದು ‘ನಮ್ಮ ಜೀವನ ಗುಣಮಟ್ಟ ನಿರ್ಧಾರವನ್ನು ವಾಪಸ್ ಪಡೆಯೋಣ, ಅದು ನಮ್ಮ ಹಕ್ಕು’ ಎಂದು. ಪರಿಸರವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಈಕೆ ಜನಸಮುದಾಯದಲ್ಲಿ ಬೆರೆತು ಜನಾಭಿಪ್ರಾಯವನ್ನು ಅರಿತು ಸಮುದಾಯ ಅವಶ್ಯಕತೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಕಡಿಮೆ ಮಾಡುವುದು, ಸಣ್ಣಪುಟ್ಟ ವ್ಯಾಪಾರ ಸಂಸ್ಥೆಗಳಿಗೆ ಪ್ರೋತ್ಸಾಹ, ವಸತಿ ವೆಚ್ಚದಲ್ಲಿ ರಿಯಾಯ್ತಿ, ರಸ್ತೆಗಳನ್ನು ಉತ್ತಮ ಪಡಿಸುವುದು, ಇತ್ಯಾದಿ ಈಕೆಯ ಗುರಿಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಆಧಿಕ್ಯದ ಸಮಸ್ಯೆ…: ಡಾ. ಎಲ್.ಜಿ.ಮೀರಾ ಅಂಕಣ

ಪುರಂದರ ದಾಸರ ಸಾಲುಗಳು ನೆನಪಾಗುತ್ತವೆ – “ಇಷ್ಟು ದೊರಕಿದರೆ ಅಷ್ಟು ಬೇಕೆಂಬಾಸೆ, ಅಷ್ಟು ದೊರಕಿದರೆ ಮತ್ತಿಷ್ಟರಾಸೆ, ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ, ನಷ್ಟ ಜೀವನದಾಸೆ ಪುರಂದರ ವಿಠಲ”. ಮನುಷ್ಯನಿಗೆ ಸಾಕು ಎನ್ನುವುದು ಎಷ್ಟು ಕಷ್ಟ ಎಂಬ ವಿಷಯವು ನಮಗೆ ಇದರಿಂದ ಗೊತ್ತಾಗುತ್ತದೆ ಅಲ್ಲವೆ? ಎಷ್ಟಿದ್ದರೂ ನಮಗೆ ಇನ್ನೂ ಬೇಕು ಬೇಕು ಬೇಕು ಬೇಕು. ಒಬ್ಬೊಬ್ಬರು ಹೊಂದಿರುವ ಸಾವಿರ ಸೀರೆಗಳು, ಮುನ್ನೂರು ಚಪ್ಪಲಿಗಳು, ಚಿನ್ನದ ಶೌಚಾಲಯ ಘಟಕಗಳು, ನಲವತ್ತೆಂಟು ಕೈಗಡಿಯಾರಗಳು ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೆಂಟನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ