Advertisement

Category: ಅಂಕಣ

ಸೀರೆ ಪುರಾಣ!: ಸುಕನ್ಯಾ ಕನಾರಳ್ಳಿ ಅಂಕಣ

ಸೀರೆ ಎನ್ನುವುದು ಒಬ್ಬ ಗಂಡಸಿನ ತಲೆಯಲ್ಲಿ ಹುಟ್ಟಿದ ಪರಿಕಲ್ಪನೆ ಎನ್ನುವ ಗುಮಾನಿ ನನಗಿದೆ. ದಿನನಿತ್ಯ ರೈಲಿನಲ್ಲಿ ಹೋಗುವ ಹೆಣ್ಣುಮಕ್ಕಳಿಗಂತೂ ಅದೊಂದು ಮಹಾ ಪಿರಿಪಿರಿಯೇ. ಜನರಲ್ ಬೋಗಿಯಲ್ಲಿ ಇದ್ದು ಜನಜಂಗುಳಿ ಹೆಚ್ಚಿದ್ದರಂತೂ ಸೊಂಟ ಚಿವುಟುವ, ಬೆನ್ನಿಗೆ ಕಚಗುಳಿಯಿಟ್ಟಂತೆ ಮುಟ್ಟುವ ದೌರ್ಜನ್ಯಗಳಿಗೆ ಲೆಕ್ಕವೇ ಇಲ್ಲ. ಮುಂಬಯಿಯಂತಹ ಮಹಾ ನಗರಗಳಲ್ಲಿ ದಿನನಿತ್ಯದ ಮೆಟ್ರೋ ಹೆಂಗಸರು ಬಿಗಿಯಾದ ಜೀನ್ಸ್ ಮತ್ತು ಶರ್ಟ್ ತೊಟ್ಟು ಮೇಲೊಂದು ಲಳಲಳ ಎನ್ನುವಂಥದ್ದೇನೋ ಹಾಕಿಕೊಳ್ಳಲು ಇಷ್ಟಪಡುತ್ತಾರೆ ಎಂದು ಸುದ್ದಿಪತ್ರಿಕೆಯಲ್ಲಿ ಓದಿದ ನೆನಪು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಅಹಮ್ಮಿಗೊಂದು ಪೆಟ್ಟು ಕೊಡುವ ಸಮಯ…: ಜಯಲಕ್ಷ್ಮಿ ಪಾಟೀಲ್ ಅಂಕಣ

“ಒಮ್ಮೆ ಬ್ಯಾಸಿಗಿ ಮದ್ಯಾನದಾಗ ಆಯಿ ಹಳ್ಳಕ್ಕ ನೀರ ತರಾಕ ಹೋಗಿ, ಜೋಡಗೊಡಾ ಹೊತ್ತು ಹೊಡಮಳ್ಳಿ ಬರೂದ್ರಾಗ ಮುತ್ತ್ಯಾ ಹೊಲದಿಂದ ಬಂದಬಿಟ್ಟಾನವ್ವಿ. ನೀರಡಿಶ್ಯಾನ. ಮನ್ಯಾಗ ಕುಡ್ಯಾಕ ಮುಕ್ಕ್ ನೀರಿಲ್ಲ. ಮುತ್ತ್ಯಾ ತಾಪಗೆದ್ದು, “ಹಾಂ ಅಧೆಂಗ ನೀ ಇಟ್ಟ್ ತಡಾ ಮಾಡೀದಿ ಬರಾಕ! ನಡಿ ರಂಡಿ ನೀ ಅದ ಹಳ್ಳದ್ ದಂಡ್ಯಾಗ ಇರು. ಅಲ್ಲೇ ನಿಂದ್ರು. ದsರ್’ಕರ್ತಾ ಕೊಡಾ ಕೆಳಗಿಳಿಶಿ ಕುಂತೆಪಾ ಅಂದ್ರ ನಿನ್ನ ಸಿಗದು ಅಗಶಿ ಬಾಗಲಕ್ಕ ತೋರ್ಣಾ ಕಟ್ತತೀನಿ ಹುಶಾರ್!” ಅಂತಂದು, ಕೊಡದ ದರ್ಶಿಲೆ ಆಯಿನ್ನ ಕಾದ ಉಸಕಿನ ಮ್ಯಾಲ ಬರೆಗಾಲಿಲೇ ನಿಂದ್ರಿಶಿದ್ನಂತ.”
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ

Read More

ಅರಮನೆ-ಗುರುಮನೆಗಳ ನಡುವೆ: ಸುಕನ್ಯಾ ಕನಾರಳ್ಳಿ ಅಂಕಣ

ಕೊನೆಗೆ ಕುಡಿದು ಮತ್ತೇರಿದ ಅರಮನೆಯ ಸೈನಿಕರು ಬಂದು ಬೆಕೆಟ್ಟನನ್ನ ಎಲ್ಲರೆದುರು ಕೊಲ್ಲುತ್ತಾರೆ. ಬಿಷಪ್ಪನೊಬ್ಬ ಗುರುಮನೆಯೊಳಗೆ ಹುತಾತ್ಮನಾಗಿ ತನ್ಮೂಲಕ ಸಂತನೊಬ್ಬ ಉದಯಿಸಿದ್ದೇನೋ ನಿಜ. ಆದರೆ ಅರಮನೆ ಗೆದ್ದಂತಾಯಿತೆ? ಹೇಡಿ ಸೈನಿಕರು ಏನೇನೋ ಬಡಬಡಿಸುತ್ತಾ ತಾವೆಸಗಿದ ಘೋರ ಕೊಲೆಯನ್ನು ಸಮರ್ಥಿಸಿಕೊಳ್ಳುತ್ತಾರೆ. ಒಬ್ಬನಂತೂ ತಪ್ಪಿಸಿಕೊಳ್ಳುವ ಸಾಧ್ಯತೆಯಿದ್ದರೂ ಬಿಷಪ್ ತಪ್ಪಿಸಿಕೊಳ್ಳಲಿಲ್ಲವಲ್ಲಾ? ತಾವೇನು ಮಾಡುವ ಹಾಗಿತ್ತು? ಹಾಗಾಗಿ ಅದೊಂದು ಆತ್ಮಹತ್ಯೆ ಎಂದು ಸಹ ಅರ್ಥೈಸುತ್ತಾನೆ. ಬಡಹೆಂಗಸರ ಮೇಳ ತಮ್ಮ ಬದುಕಿನಲ್ಲಿ ಸುಖ ಸಂತೋಷಗಳೊಂದೂ ಇಲ್ಲ, ತಾವು ಏನನ್ನೂ ಬದಲಾಯಿಸಲು ಅಸಮರ್ಥರು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತಾರನೆಯ ಬರಹ

Read More

ಬೆಂಗಳೂರು ಟೂ ಶಿವಮೊಗ್ಗ…: ವಿನಾಯಕ ಅರಳಸುರಳಿ ಅಂಕಣ

ತನ್ನ ದಾರಿಯಲ್ಲಿ ಸಿಗುವ ಪ್ರತಿಯೊಂದು ಪುಟ್ಟ ಪಟ್ಟಣದ ನಿಲ್ದಾಣವನ್ನೂ ಹೊಕ್ಕು, ಆತಿಥ್ಯ ಸ್ವೀಕರಿಸಿ, ಟಾಟಾ ಹೇಳಿಯೇ ಅದು ಹೊರಡುವುದು. ಅಂಥಾ ನಿಲ್ದಾಣಗಳಲ್ಲಿ ನುಗ್ಗಿ ಹತ್ತಿಕೊಳ್ಳುವ, ಉದ್ಯೋಗಕ್ಕಾಗಿ ಪಕ್ಕದೂರಿನ ಶಾಲೆಗೋ, ಆಚೆ ಪಟ್ಟಣಕ್ಕೋ ಹೋಗುವ ಉದ್ಯೋಗಿಗಳು. ಬೆಂಗಳೂರಿನಷ್ಟು ಕಿಕ್ಕಿರಿಯದ, ಬರೀ ಆಕಾಶ ಕಾಣುವಷ್ಟು ಗಗನಚುಂಬಿಗಳಿರುವ ಕಟ್ಟಡಗಳ ಸಮುದ್ರವಲ್ಲದ, ಎಲ್ಲವನ್ನೂ ಮಾರಾಟಕ್ಕಿಡದ, ಕೊಂಚ ಸಾಗಿದರೆ ಮುಗಿದು ಹೋಗಿ ಕಾಡು, ಮರಗಳ ಹಳ್ಳಿಯೊಂದು ಪ್ರತ್ಯಕ್ಷವಾಗುವ ಈ ಪುಟ್ಟ ಪಟ್ಟಣದಲ್ಲಿ ಬದುಕು ಕಟ್ಟಿಕೊಂಡ ಇವರೆಲ್ಲ ಎಷ್ಟು ಪುಣ್ಯಾತ್ಮರಲ್ಲವೇ ಎಂದುಕೊಳ್ಳುವಾಗಲೇ ಅವರು ಬಸ್ಸಿಳಿದು ಹೆದ್ದಾರಿಯಿಂದ ಕವಲೊಡೆದ ರಸ್ತೆಯೊಂದರಲ್ಲಿ ನಡೆಯುತ್ತ ಮರೆಯಾಗುತ್ತಾರೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಆಸ್ಟ್ರೇಲಿಯಾದ ಎನ್‌ಡಿಐಎಸ್‌ ಅನುದಾನದ ಏಳುಬೀಳುಗಳು: ಡಾ. ವಿನತೆ ಶರ್ಮ ಅಂಕಣ

ಈ NDIS ಸಹಾಯವನ್ನು ಪಡೆಯಲು ಕೆಲವು ಅರ್ಹತಾ ಮಾನದಂಡಗಳಿವೆ. ಅನುದಾನವನ್ನು ಕೋರಲು ಅಭ್ಯರ್ಥಿಗಳು ತಮಗಿರುವ ಅಂಗ ಮತ್ತು ಮಾನಸಿಕ ನ್ಯೂನತೆಗಳ ತಪಾಸಣಾ ವರದಿಗಳನ್ನು ಸಲ್ಲಿಸಬೇಕು. ತಮ್ಮ ಕುಟುಂಬ ವಾರ್ಷಿಕ ಆದಾಯ, ಸ್ಥಿರ, ಅಸ್ಥಿರ ಆಸ್ತಿ ವಿವರಗಳು, ಇರುವ ಸಾಮರ್ಥ್ಯಗಳ ಬಳಕೆ, ದೌರ್ಬಲ್ಯಗಳಿಂದ ಆಗುತ್ತಿರುವ ಪರಿಣಾಮ, ಹೀಗೇ ಅನೇಕ ದಾಖಲೆಗಳನ್ನು ಒದಗಿಸಬೇಕು. ಇವನ್ನೆಲ್ಲಾ ಪಡೆಯುವುದು, ಒದಗಿಸುವುದು ಸುಲಭದ ಮಾತಲ್ಲ. ಅನೇಕರಿಗೆ ಇದು ದೊಡ್ಡ ಚಾಲೆಂಜ್. ಇವರೊಡನೆ ಇವರ ಕುಟುಂಬ ಸದಸ್ಯರೂ ಕಣಕ್ಕಿಳಿದು ಪರದಾಡಬೇಕು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ