Advertisement

Category: ಅಂಕಣ

ಹೆಸರು ಧರಿಸಲೊಲ್ಲದ ಅನಾಮಧೇಯರು

ಈ ಮಿಡಲ್ ಸಿಸ್ಟರ್, ಹದಿನೆಂಟು ವರ್ಷದ ಯುವತಿ. ಅವಳಿಗೆ ಪಕ್ಕದೂರಿನಲ್ಲಿ ತನ್ನ ಮತಕ್ಕೆ ಸೇರದ ಒಬ್ಬ ‘ಮೇ ಬಿ’ ಬಾಯ್‍ಫ್ರೆಂಡ್ ಕೂಡ ಇದ್ದಾನೆ. “ನಾನು ಯಾವತ್ತೂ ಹತ್ತೊಂಬತ್ತನೆಯ ಶತಮಾನದ ಕಾದಂಬರಿಗಳನ್ನೇ ಓದುತ್ತೇನೆ, ಇಪ್ಪತ್ತನೆಯ ಶತಮಾನದ ರಾಜಕೀಯದಿಂದ ತಪ್ಪಿಸಿಕೊಳ್ಳಲು ನಾನೇ ಕಂಡುಕೊಂಡ ಶಾಂತಿಮಾರ್ಗವಿದು” ಎನ್ನುವ ಮಿಡಲ್ ಸಿಸ್ಟರ್ ಮನೆಯಿಂದ ಕೆಲಸಕ್ಕೆ, ಕೆಲಸದಿಂದ ಮನೆಗೆ ಸಾಗುವ ರಸ್ತೆಯಲ್ಲಿ ಪುಸ್ತಕ ಓದುತ್ತ ನಡೆಯುತ್ತಾಳೆ. ಓದುವ ಸಂಸ್ಕೃತಿ ಇರದ, ಅಷ್ಟೇನೂ ವಿದ್ಯಾವಂತರಿಲ್ಲದ ಈ ಪ್ರಾಂತ್ಯದಲ್ಲಿ ಅವಳ ಈ ವಿಚಿತ್ರ ಹವ್ಯಾಸಕ್ಕೆ ಮೂಗು ಮುರಿಯುವವರೇ ಎಲ್ಲ.
ಕಾವ್ಯಾ ಓದಿದ ಹೊತ್ತಿಗೆ ಅಂಕಣ.

Read More

ಆಲೋಚನೆಗಳನ್ನು ರೂಪಿಸಿದ ಪತ್ರಿಕೆಗಳೂ, ಕಾಡುವ ಸೋಂಕುಗಳ ವಿಚಾರವೂ..

‘ತರಂಗ’ವಾಗಲಿ, ‘ಸುಧಾ’ ಆಗಲಿ ಮನೆಗೆ ಬರುವುದು ಒಂದು ದಿನ ತಡವಾದರೂ ಚಡಪಡಿಕೆಯಾಗುತ್ತಿತ್ತು. ಪತ್ರಿಕೆ ಹಾಕುವ ಹುಡುಗ ಬರುವ ವೇಳೆಗೆ ಹದ್ದಿನಂತೆ ಕಾಯುತ್ತ ಕೂತಿರುತ್ತಿದ್ದೆವು. ಪತ್ರಿಕೆಯ ಹುಡುಗ ‘ಸುಧಾ’ ಅಥವಾ ‘ತರಂಗ’ವನ್ನು ಬಾಗಿಲಿನಿಂದ ಎಸೆಯುತ್ತಿದ್ದಂತೆ ಆ ಪತ್ರಿಕೆಯ ಮೇಲೆ ಮುಗಿಬೀಳುತ್ತಿದ್ದೆವು. ಎಷ್ಟೊಂದು ಸಲ ನಮ್ಮ (ನನ್ನ ಸಹೋದರರು) ನಡುವೆ ಮಿನಿಯುದ್ಧಗಳು ಮಹಾಯುದ್ಧಗಳು ಜರುಗಿವೆ. ಒಮ್ಮೆಯಂತೂ ಅದೇ ತಾನೆ ಮನೆಯ ಹೊಸ್ತಿಲ ಒಳಗೆ ಬಂದ ‘ತರಂಗ’ ಇಂಥದ್ದೇ ಯುದ್ಧದಲ್ಲಿ ಹರಿದು ಹೋದದ್ದಿದೆ!
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಕಡೆಪಾನ್ ಬಸ್ಯಾನ ಲೀಲಾವಳಿ

ಅವನು ಹೇಳುತ್ತಿರುವುದು ಬರಿ ಕಥೆಯೇ. ಸುಳ್ಳು ಕಥೆ. ಅವನ ಕಲ್ಪನೆಯಲ್ಲಿ ಅರಳುವ ಕಥೆ ಎನ್ನುವುದಕ್ಕೆ ಪುರಾವೆ ಎಂಬಂತೆ ನನ್ನ ಬಳಿ ಹಲವಾರು ನಿದರ್ಶನಗಳಿವೆ. ಅವನು ತನ್ನೆಲ್ಲಾ ದಿನಚರಿಯಲ್ಲಿ ನಟ ಯಶ್ ಅನ್ನು ಅನುಕರಿಸುತ್ತಿದ್ದ. ಕೆ. ಜಿ. ಎಫ್. ಸಿನಿಮಾದ ಅವನ ಗೆಟಪನ್ನು ಅನುಕರಿಸುವುದು. ಪುರುಷ ಪ್ರಾಧಾನ್ಯದ ಮುಖ್ಯವಾಹಿನಿಯ ಮಾಸ್ ಸಿನಿಮಾಗಳಲ್ಲಿ ಹೀರೋಗಳು ಹೊಡೆಯುವ ಅಸೂಕ್ಷ್ಮ ಡೈಲಾಗುಗಳನ್ನು ಅವನು ವಾಟ್ಸಪ್ಪ್ ರೀಲಾಗಿ ಇಡುತ್ತಿದ್ದ. ಅವನು ಕನಸುತ್ತಿದ್ದ ಭವಿಷ್ಯದ ಬಸವರಾಜನ ಪೂರ್ವ ಬಿಂಬದ ಪರಿಕರಗಳನ್ನು ಪುಷ್ಟೀಕರಿಸುವಂತೆ ಅವು ಇರುತ್ತಿದ್ದವು.
ದಾದಾಪೀರ್‌ ಜೈಮನ್ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ಓಮಿಕ್ರೋನ್ ಜೊತೆ ಹೊಸವರ್ಷ ಆರಂಭದ ಪಲುಕು

ವಿಷಯದಲ್ಲೀಗ ಬಗೆಬಗೆಯ ವಾಗ್ವಾದಗಳು. ಲಸಿಕೆ-ಪರ ಮತ್ತು ವಿರೋಧಗಳ ಜನರು ನೇರಾನೇರ ಎರಡು ಗುಂಪುಗಳಲ್ಲಿದ್ದಾರೆ. ಅವರನ್ನು ಬಿಟ್ಟು ರಾಜಕೀಯದಲ್ಲಿ, ವ್ಯಾಪಾರಸ್ಥರಲ್ಲಿ, ಪರಿಸರ ಸಂರಕ್ಷಣೆ ಹಿತಾಸಕ್ತಿ ಗುಂಪು, ಮಾನವ ಹಕ್ಕುಗಳ ಪ್ರತಿಪಾದಕರು, ಶಾಲಾಶಿಕ್ಷಕರು ಮತ್ತು ಅವರ ಯೂನಿಯನ್, ಆರೋಗ್ಯಸೇವಾ ಸಿಬ್ಬಂದಿ ವರ್ಗ, ತಂದೆತಾಯಂದಿರು, ಶಾಲಾ ಮಕ್ಕಳು, ಎಲ್ಲರೂ ಈ ವಾದ-ಪ್ರತಿವಾದಗಳಲ್ಲಿ ಸೇರಿಕೊಂಡುಬಿಟ್ಟಿದ್ದಾರೆ. ವರದಿಗಾರರು, ಸುದ್ದಿವಾಹಿನಿಗಳಿಗಂತೂ ಪರಮ ಸಂತೋಷ. ಯಾಕೆಂದರೆ ನಾಡಿನಲ್ಲಿ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ