Advertisement

Category: ಅಂಕಣ

ಸರಳ ಬರವಣಿಗೆ ಸಾಧ್ಯವಾದರೆ ಓದುವಿಕೆಯೂ ಸುಲಲಿತ

ಒಂದೇ ಶಬ್ದವನ್ನು ಸರಿಯಾಗಿಯೇ ಬೇರೆ ಬೇರೆ ರೀತಿಯಲ್ಲಿ ಬರೆಯಲು ಸಾಧ್ಯವಿದ್ದರೂ, ನಮಗೆ ಗೊತ್ತಿಲ್ಲದಂತೆಯೇ ಕನ್ನಡದಲ್ಲಿ ಕನ್ನಡ ಶಬ್ದಗಳ ಸ್ಪೆಲಿಂಗ್ ಇದೆ. ‘ತಂದೆʼಯನ್ನು ‘ತನ್ದೆ‘ ಎಂದು ಬರೆದರೆ ಅದು ‘ತಂದೆ’ಯ ತಪ್ಪು ಸ್ಪೆಲಿಂಗ್ ಆಗುತ್ತದೆ. ಇತ್ತೀಚೆಗೆ ಬಹಳಷ್ಟು ಇಂಗ್ಲೀಷ್ ಶಬ್ದಗಳನ್ನು ಕನ್ನಡದಲ್ಲಿ ಬರೆಯುವಾಗ ಎರಡು ಮೂರು ಒತ್ತಕ್ಷರ ಬಳಸಬೇಕಾಗುತ್ತದೆ. ಅದು ಓದುವುದಕ್ಕೆ ಸ್ವಲ್ಪ ಕಷ್ಟವಾಗುತ್ತದೆ.  ಆದ್ದರಿಂದ ಕನ್ನಡದಲ್ಲಿ ಸ್ಪೆಲಿಂಗಿನ ಏಕರೂಪವನ್ನು ತರುವ ಅವಶ್ಯಕತೆ ಇದೆ, ಇಲ್ಲದಿದ್ದರೆ ಒಬ್ಬಬ್ಬರೂ ಒಂದೊಂದು ರೀತಿ ಬರೆದು ಗೊಂದಲವೇರ್ಪಡುತ್ತದೆ.
‘ಇಂಗ್ಲೆಂಡ್ ಪತ್ರ’ದಲ್ಲಿ ಕೇಶವ ಕುಲಕರ್ಣಿ ಓದುವಿಕೆ ಮತ್ತು ಅಕ್ಷರ ಜೋಡಣೆಯ ಕುರಿತು ಬರೆದಿದ್ದಾರೆ. 

Read More

ಕಾಡಿನ ಮನೆಯ ಅಕ್ಕರೆಯ ಕಾವು

ಕಾಜುಗಾರ ಅವರು ಕಾಜುವಾಡಾದ ಮನೆಯನ್ನು ಶಿಕ್ಷಕರಿಗೆ ಬಿಟ್ಟುಕೊಟ್ಟಿದ್ದಾರೆ.  ಸದ್ಯಕ್ಕೆ ಅವರ ಮನೆ ಶಿಕ್ಷಕರಿಂದ ತುಂಬಿದೆ. ನಾಲ್ಕೈದು ಜನ ಶಿಕ್ಷಕ ,ಶಿಕ್ಷಕಿಯರು, ಒಂದೇ ಗ್ಯಾಸ್ ಒಲೆಯಲ್ಲಿ ತಯಾರಾಗುವ ಸಾಮೂಹಿಕ ಭೋಜನ. ಅದು ಬೇಕು ಇದು ಇರಲಿ ಎಂಬ ಯಾವುದೇ ತಗಾದೆ ಇಲ್ಲ.  ಇದ್ದ ಸಾಮಾನು ಗಮನಿಸಿ ಆಯಾ ದಿನದ ಮೆನು ರೆಡಿಯಾಗುತ್ತಿತ್ತು. ಏಕೆಂದರೆ ಒಮ್ಮೊಮ್ಮೆ ಅಡುಗೆಗೆ ಬೇಕಾದ ಪದಾರ್ಥಗಳು ಅಣಶಿಯಲ್ಲಿ ಸಿಗುತ್ತಿರಲಿಲ್ಲ. ಅದನ್ನು ದೂರದ ಕುಂಬಾರವಾಡಾ, ಜೋಯಿಡಾದಿಂದ ತರಿಸಬೇಕಿತ್ತು. ಇದ್ದ ಸಾಮಾನಿನಲ್ಲಿಯೆ ‘ಅಗ್ದಿ’ ಬೆಸ್ಟ ಎನಿಸಿದ ‘ಉಂಚಾ ಕ್ವಾಲಿಟಿ’ಯ ಸಾಮಾನು ತೆಗೆದು ಆರಿಸಿ ಅಂಗಡಿಯ ದಿನಕರ ಮಾಮಾ ಅವರು  ಮಾಸ್ತರರಿಗೆ..”

Read More

‘ಪ್ರೇಕ್ಷಕರಿಗೆ ರಂಗಭೂಮಿಯೇನೂ ಅನಿವಾರ್ಯವಲ್ಲ’

ರಂಗಭೂಮಿ ದಣಿದಿಲ್ಲ, ಬದಲಾಗಿ ತುಂಬ ಆ್ಯಕ್ಟಿವ್ ಆಗಿದೆ. ಈ ಕ್ಷೇತ್ರದಲ್ಲಿ ‘ಕೊಬ್ಬು’ ಖಂಡಿತ ಇದೆ ನಿಜ; ಆದರೆ ಅದೇ ಕೊಬ್ಬು ವಾಸ್ತವ ಮರೆಯುವಂತೆ ಮಾಡುತ್ತಿದೆ. ವಿಚಿತ್ರ ಅಂದರೆ ಇದು ರಂಗಭೂಮಿಯಲ್ಲಿ ತೊಡಗಿಸಿಕೊಂಡವರನ್ನು ದಣಿಸುವ ಬದಲು ತುಂಬ ಆ್ಯಕ್ಟಿವ್ ಮಾಡುತ್ತಿದೆ. ಯಾವ ಬಗೆಯ ಆ್ಯಕ್ಟಿವ್‌ನೆಸ್ ಅದು ಎಂದು ನಾವು ಗ್ರಹಿಸಬೇಕು.  ತಮ್ಮ ಪ್ರಯೋಗಗಳ ಮೂಲಕ ಜನರ ಎದುರು ಸೋಲುತ್ತಿರುವ ಪ್ರಕ್ರಿಯೆಯೇ ಅವರನ್ನು ವಿಚಿತ್ರ ರೀತಿಯಲ್ಲಿ ಆ್ಯಕ್ಟಿವ್ ಮಾಡುತ್ತಿದೆ.  -ರಂಗವಠಾರ ಅಂಕಣದಲ್ಲಿ ಎನ್. ಸಿ. ಮಹೇಶ್ ಅವರು ಡಾ. ಶ್ರೀಪಾದ ಭಟ್ ಅವರ ಲೇಖನಕ್ಕೆ ಪ್ರತಿಕ್ರಿಯೆ ದಾಖಲಿಸಿದ್ದಾರೆ.

Read More

ಗೋಡೆಯಿಂದ ಹಾರಿದ ಹಾವುಗಳು ಮತ್ತು ಗೋಡೆಗಂಟಿದ ಮನುಷ್ಯರು

ಊರಿನ ಪ್ರತಿ ಬೀದಿಯನ್ನೂ ಅಲಂಕರಿಸಿದ್ದ ಹೊಗೆಸೊಪ್ಪಿನ ಬ್ಯಾರಲ್‌ಗಳ ಪೈಕಿ ವರ್ಷಕ್ಕೆ ಒಂದಾದರೂ ಬೆಂಕಿಯೊಳಗೆ ಕುಣಿಯುವುದು ಕಾಯಂ ಆದಮೇಲೆ, ಅವುಗಳನ್ನು ಊರಿಂದ ಆಚೆ ಹಾಕುವ ಮಹಾ ಸಂಚಿಕೆಗಳು ಶುರುವಾದವು. ಫಯರ್ ಆಫೀಸಿನವರ ಎಚ್ಚರಿಕೆಗಳು, ಪೊಲೀಸಿನವರ ಖಾರದ ಮಾತು, ಬ್ಯಾರಲ್ ಸುತ್ತಮುತ್ತಲ ಮನೆಗಳ ಮಂದಿಯ ತಕರಾರುಗಳ ಫಲವಾಗಿ ಬಹುತೇಕ ಬ್ಯಾರಲ್‌ಗಳು ಸದ್ದಿಲ್ಲದಂತೆ ಊರಿಂದ ಆಚೆ ನಡೆದವು. ಹಾಗಂತ ಸಮಸ್ಯೆಗಳೂ ಊರಾಚೆ ನಡೆದು ಹೋದವು ಎನ್ನುವ ಹಾಗಿಲ್ಲ. ‘ಸೊಗದೆ’ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್  ಹೊಗೆಸೊಪ್ಪು ಬ್ಯಾರಲ್ ಗಳ ಕುರಿತು ಬರೆದಿದ್ದಾರೆ. 

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಇಪ್ಪತ್ತೊಂದನೇ ಶತಮಾನದ ಈ ವರ್ಷದಲ್ಲೂ ಆಸ್ಟ್ರೇಲಿಯಾದ ಅಬೊರಿಜಿನಲ್ ಮತ್ತು ದ್ವೀಪವಾಸಿಗಳಿಗೆ ಹೇಳಿಕೊಳ್ಳುವಂತಹ ಸಾಮಾಜಿಕ ನ್ಯಾಯವಿನ್ನೂ ಸಿಕ್ಕಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ ಮೂರು ಶತಭಾಗ ಮಾತ್ರ ಅಬೊರಿಜಿನಲ್ ಮತ್ತು ದ್ವೀಪವಾಸಿಗಳು. ಕಾರಾಗೃಹಗಳಲ್ಲಿ ಅವರ ಸಂಖ್ಯೆ ಸುಮಾರು ಶೇ 29ರಷ್ಟು. ತಮ್ಮ ಹಕ್ಕುಗಳಿಗೆ ಹೋರಾಡುತ್ತಿರುವ ಅವರು, ಭಾರತದಲ್ಲಿ ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಸಿಕ್ಕಂತೆ, ತಮ್ಮಲ್ಲೂ ಪರಿವರ್ತನೆಯ ಬೆಳಕೊಂದು ಮೂಡಿಬರುವಂತಾಗಲಿ ಎಂದು ಹಾರೈಸುತ್ತಾರೆ. ಅಬೊರಿಜಿನಲ್ ಮತ್ತು ದ್ವೀಪವಾಸಿಗಳ ಕುರಿತು ಡಾ. ವಿನತೆ ಶರ್ಮ ಆಸ್ಟ್ರೇಲಿಯಾ ಪತ್ರದಲ್ಲಿ ಬರೆದಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ